IPL 2022 ಗುಜರಾತ್ ವಿರುದ್ಧ ಭರ್ಜರಿ ಗೆಲುವು, ಡೆಲ್ಲಿ ಫಲಿತಾಂಶದತ್ತ ಆರ್‌ಸಿಬಿ ಚಿತ್ತ!

Published : May 19, 2022, 11:16 PM ISTUpdated : May 20, 2022, 12:08 AM IST
IPL 2022 ಗುಜರಾತ್ ವಿರುದ್ಧ  ಭರ್ಜರಿ ಗೆಲುವು, ಡೆಲ್ಲಿ ಫಲಿತಾಂಶದತ್ತ ಆರ್‌ಸಿಬಿ ಚಿತ್ತ!

ಸಾರಾಂಶ

ಮಹತ್ವದ ಪಂದ್ಯದಲ್ಲಿ ಫಾರ್ಮ್‌ಗೆ ಮರಳಿದ ವಿರಾಟ್ ಕೊಹ್ಲಿ ಆರಂಭಿಕರ 115 ರನ್ ಜೊತೆಯಾಟ, ಗುಜರಾತ್ ವಿರುದ್ಧ ಗೆಲುವು 8 ವಿಕೆಟ್ ಗೆಲುವು ದಾಖಲಿಸಿದ ಬೆಂಗಳೂರು ತಂಡ

ಮುಂಬೈ(ಮೇ.19): ಗುಜರಾತ್ ಟೈಟಾನ್ಸ್ ವಿರುದ್ದದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗೆಲುವು ದಾಖಲಿಸಿದೆ. ಈ ಮೂಲಕ IPL 2022 ಟೂರ್ನಿ ಪ್ಲೇ ಆಫ್ ಹಂತಕ್ಕೆ ಪ್ರವೇಶ ಪಡೆಯಲು ಆರ್‌ಸಿಬಿ ತನ್ನ ಪ್ರಯತ್ನ ಮಾಡಿದೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಆರ್‌ಸಿಬಿ ಪ್ರಾರ್ಥನೆ ಆರಂಭಿಸಿದೆ.

ಗುಜರಾತ್ ವಿರುದ್ದದ ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 2 ಅಂಕದ ಜೊತೆಗೆ ನೆಟ್ ರೇಟ್ ಕೂಡ ಉತ್ತಮ ಪಡಿಸಿಕೊಂಡಿದೆ. ಆದರೆ ಫ್ಲೇ ಆಫ್ ಪ್ರವೇಶಕ್ಕೆ ಇಷ್ಟು ಸಾಲಲ್ಲ. ಮುಂಬೈ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋಲು ಕಂಡರೆ ಮಾತ್ರ ಆರ್‌ಸಿಬಿ ಪ್ಲೇ ಆಫ್ ಪ್ರವೇಶ ಪಡೆಯಲಿದೆ. ಸದ್ಯ ತಂಡಗಳ ಫಲಿತಾಂಶದ ಲೆಕ್ಕಾಚಾರ ಹಾಕಿದರೆ ಆರ್‌ಸಿಬಿ ಪ್ಲೇ ಆಫ್ ಗೇರುವ ಸಾಧ್ಯತೆಗಳನ್ನು ಅಲ್ಲಗೆಳೆಯುವಂತಿಲ್ಲ.

IPL 2022: ಅಮೋಘ ಬ್ಯಾಟಿಂಗ್ ಮೂಲಕ ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ಕನ್ನಡಿಗ ರಾಹುಲ್..!

169 ರನ್ ಆರ್‌ಸಿಬಿ ಮುಂದಿದ್ದ ಟಾರ್ಗೆಟ್. ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಭರ್ಜರಿ ಆರಂಭದಿಂದ ಬೆಂಗಳೂರು ತಂಡ ಸುಲಭವಾಗಿ ರನ್ ಚೇಸ್ ಮಾಡುವ ಸೂಚನೆ ನೀಡಿತು. ಕಳಪೆ ಫಾರ್ಮ್‌ನಿಂದ ತೀವ್ರ ನಿರಾಸೆಗೊಂಡಿದ್ದ ವಿರಾಟ್ ಕೊಹ್ಲಿ ಮಹತ್ವದ ಪಂದ್ಯದಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಿದರು. ಕೊಹ್ಲಿ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು.

ಕೊಹ್ಲಿ ಹಾಗೂ ಡುಪ್ಲೆಸಿಸ್ ಜೋಡಿ ಮೊದಲ ವಿಕೆಟ್‌ಗೆ 115 ರನ್ ಜೊತೆಯಾಟ ನೀಡಿತು. ಡುಪ್ಲೆಸಿಸ್ 44 ರನ್ ಸಿಡಿಸಿ ಔಟಾದರು. ಅಬ್ಬರಿಸಿದ ವಿರಾಟ್ ಕೊಹ್ಲಿ 73 ರನ್ ಸಿಡಿಸಿದರು. ಗ್ಲೆನ್ ಮ್ಯಾಕ್ಸ್‌ವೆಲ್ ಉತ್ತಮ ಹೋರಾಟ ನೀಡಿದರು. ಇತ್ತ ದಿನೇಶ್ ಕಾರ್ತಿಕ್ ಅಂತಿಮ ಹಂತದಲ್ಲಿ ಉತ್ತಮ ಸಾಥ್ ನೀಡಿದರು. 

ಮ್ಯಾಕ್ಸ್‌ವೆಲ್ ಅಜೇಯ 40 ರನ್ ಸಿಡಿಸಿದರೆ, ಕಾರ್ತಿಕ್ ಅಜೇಯ 2 ರನ್ ಸಿಡಿಸಿದರು. ಈ ಮೂಲಕ ಆರ್‌ಸಿಬಿ ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. 8 ವಿಕೆಟ್ ಗೆಲುವು ದಾಖಲಿಸಿದ ಆರ್‌ಸಿಬಿ , ಪಂಜಾಬ್ ಕಿಂಗ್ಸ್, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಟೂರ್ನಿಯಿಂದ ಹೊರದಬ್ಬಿದೆ.

IPL 2022 ಟೂರ್ನಿಯಲ್ಲಿ ಮಹತ್ವದ ಬದಲಾವಣೆ, ಫೈನಲ್ ಪಂದ್ಯದ ಸಮಯ ಬದಲು!

ಎಬಿಡಿ, ಗೇಲ್‌ಗೆ ಆರ್‌ಸಿಬಿ ಹಾಲ್‌ ಆಫ್‌ ಫೇಮ್‌
ಐಪಿಎಲ್‌ ಇತಿಹಾಸದಲ್ಲೇ ಮೊದಲ ಬಾರಿ ರಾಯಲ… ಚಾಲೆಂಜ​ರ್‍ಸ್ ಬೆಂಗಳೂರು ತಂಡವು ತನ್ನ ಆಟಗಾರರಿಗೆ ‘ಹಾಲ್‌ ಆಫ್‌ ಫೇಮ್‌’ ಗೌರವ ನೀಡುವ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ತಂಡದ ಪ್ರಮುಖ ಆಟಗಾರರಾಗಿದ್ದ ಕ್ರಿಸ್‌ ಗೇಲ್‌ ಹಾಗೂ ಎಬಿ ಡಿ ವಿಲಿಯ​ರ್‍ಸ್ ಈ ಗೌರವ ಪಡೆದ ಮೊದಲ ಆಟಗಾರರು ಎನಿಸಿಕೊಳ್ಳಲಿದ್ದಾರೆ.

ಮಂಗಳವಾರ ಆಯೋಜಿಸಿದ್ದ ವಿಶೇಷ ಕಾರ‍್ಯಕ್ರಮದಲ್ಲಿ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಈ ಬಗ್ಗೆ ಘೋಷಣೆ ಮಾಡಿದರು. ಇದೇ ವೇಳೆ ಇಬ್ಬರೂ ಆಟಗಾರರೊಂದಿಗಿನ ನೆನೆಪುಗಳನ್ನು ಅವರು ಬಿಚ್ಚಿಟ್ಟರು. ‘ನಿಮ್ಮಿಬ್ಬರಿಗೂ ಈ ಗೌರವ ನೀಡುತ್ತಿರುವ ಈ ಕ್ಷಣ ತುಂಬಾ ಶ್ರೇಷ್ಠವಾದದ್ದು. ನಿಮ್ಮ ಆಟ ಐಪಿಎಲ್‌ ಟೂರ್ನಿಯನ್ನು ಹೇಗೆ ಬದಲಾಯಿಸಿತು ಮತ್ತು ಎಷ್ಟುಪರಿಣಾಮಕಾರಿ ಎಂಬುದನ್ನು ನಾವೆಲ್ಲರೂ ನೋಡಿದ್ದೇವೆ’ ಎಂದು ಕೊಂಡಾಡಿದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ಕಾರ‍್ಯಕ್ರಮದಲ್ಲಿ ಭಾಗಿಯಾಗಿದ್ದ ಗೇಲ್‌ ಮತ್ತು ವಿಲಿಯ​ರ್‍ಸ್ ಅವರು ಆರ್‌ಸಿಬಿ ಪರ ಕಳೆದ ಹಳೆಯ ದಿನಗಳನ್ನು ಮೆಲುಕು ಹಾಕಿದರು.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್