IPL 2023 ಮಳೆಯಿಂದಾಗಿ 8.30ಕ್ಕೆ ಪಂದ್ಯ ಆರಂಭ, ಕೆಕೆಆರ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ!

Published : Apr 20, 2023, 08:21 PM IST
IPL 2023 ಮಳೆಯಿಂದಾಗಿ 8.30ಕ್ಕೆ ಪಂದ್ಯ ಆರಂಭ, ಕೆಕೆಆರ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ!

ಸಾರಾಂಶ

2023ರ ಐಪಿಎಲ್ ಟೂರ್ನಿಯಲ್ಲಿ ಇದುವರೆಗೂ ಗೆಲುವು ಕಾಣದ ಡೆಲ್ಲಿ ಕ್ಯಾಪಿಟಲ್ಸ್ ಇಂದು ಮೊದಲ ಗೆಲುವಿನ ವಿಶ್ವಾಸದಲ್ಲಿದೆ. ಮಳೆಯಿಂದಾಗಿ ಪಂದ್ಯ ವಿಳಂಭವಾಗಿ ಆರಂಭಗೊಳ್ಳುತ್ತಿದೆ. 7 ಗಂಟೆಗೆ ನಡೆಯಬೇಕಿದ್ದ ಟಾಸ್, 8.15ಕ್ಕೆ ನಡೆದಿದೆ. ಈ ಪಂದ್ಯದಲ್ಲಿ ಡೆಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ದೆಹಲಿ(ಏ.20): ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೆಕೆಆರ್ ನಡುವಿನ ಪಂದ್ಯಕ್ಕೆ ಕೊನೆಗೂ ಮಳೆರಾಯ ಅನುವು ಮಾಡಿಕೊಟ್ಟಿದ್ದಾನೆ. 7.30 ಗಂಟೆಗೆ ಆರಂಭವಾಗಬೇಕಿದ್ದ ಪಂದ್ಯ 8.30ಕ್ಕೆ ಆರಂಭಗೊಳ್ಳುತ್ತಿದೆ. ತಂಡವಾಗಿ ಆರಂಭಗೊಂಡ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಡೆಲ್ಲಿ ತಂಡದಲ್ಲಿ 2 ಬದಲಾವಣೆ ಮಾಡಿದ್ದರೆ, ಕೆಕೆಆರ್ ತಂಡದಲ್ಲಿ 4 ಬದಲಾವಣೆ ಮಾಡಲಾಗಿದೆ. ಐಪಿಎಲ್ 2023 ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅದೃಷ್ಠ ನೆಟ್ಟಗಿಲ್ಲ. 5 ಪಂದ್ಯ ಆಡಿದರೂ ಒಂದೂ ಗೆಲುವು ಕಂಡಿಲ್ಲ. ಇಂದು ಕೆಕೆಆರ್ ವಿರುದ್ಧ ಗೆಲುವಿಗಾಗಿ ಹೊಸ ಪ್ರಯೋಗ ಮಾಡುತ್ತಿದೆ. 

ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಆಡಿದ 5 ಪಂದ್ಯದಲ್ಲಿ 5ರಲ್ಲೂ ಸೋಲು ಕಂಡಿದೆ. ಇತ್ತ 7ನೇ ಸ್ಥಾನದಲ್ಲಿರುವ ಕೋಲ್ಕತಾ ನೈಟ್ ರೈಡರ್ಸ್ ಆಡಿದ 5 ಪಂದ್ಯದಲ್ಲಿ 2ರಲ್ಲಿ ಗೆಲುವು ದಾಖಲಿಸಿದೆ. ಇಂದಿನ ಪಂದ್ಯ ತೀವ್ರ ಕುತೂಹಲಕ್ಕೆ ಕಾರಣಾಗಿದ್ದು, ಡೆಲ್ಲಿ ಮೊದಲ ಗೆಲುವಿಗಾಗಿ ಹಾತೊರೆಯುತ್ತಿದೆ.

ಐಪಿಎಲ್ ಅಂಕಪಟ್ಟಿ 2023
ಅಂಕಪಟ್ಟಿಯಲ್ಲಿ ರಾಜಸ್ಥಾನ ರಾಯಲ್ಸ್ ಮೊದಲ ಸ್ಥಾನದಲ್ಲಿದೆ. 6 ಪಂದ್ಯದಲ್ಲಿ 4 ಗೆಲುವು ದಾಖಲಿಸಿದೆ. ದ್ವಿತೀಯ ಸ್ಥಾನದಲ್ಲಿರುವ ಲಖನೌ ಸೂಪರ್ ಜೈಂಟ್ಸ್ 6 ರಲ್ಲಿ 4 ಗೆಲುವು ದಾಖಲಿಸಿದೆ. ನೆಟ್ ರನ್‌ರೇಟ್ ಕಾರಣ 2ನೇ ಸ್ಥಾನದಲ್ಲಿದೆ. ಚೆನ್ನೈ ಸೂಪರ್ ಕಿಂಗ್ಸ್ 5ರಲ್ಲಿ 3 ಗೆಲುವು ದಾಖಲಿಸಿ 3ನೇ ಸ್ಥಾನದಲ್ಲಿದೆ. ಗುಜರಾತ್ ಟೈಟಾನ್ಸ್ 5 ಪಂದ್ಯದಲ್ಲಿ 3 ಪಂದ್ಯದಲ್ಲಿ ಗೆಲುವು ದಾಖಲಿಸಿ 4ನೇ ಸ್ಥಾನದಲ್ಲಿದೆ. ಆರ್‌ಸಿಬಿ 8ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಜಿಗಿದಿದೆ.  6ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್  5 ಪಂದ್ಯದಲ್ಲಿ 3 ಗೆಲುವು ದಾಖಲಿಸಿದೆ.  ಪಂಜಾಬ್ ಕಿಂಗ್ಸ್ 6 ಪಂದ್ಯದಲ್ಲಿ 3ರಲ್ಲಿ ಗೆಲುವು ದಾಖಲಿಸಿ 7ನೇ ಸ್ಥಾನದಲ್ಲಿದೆ. ಕೋಲ್ಕತಾ 8ನೇ ಸ್ಥಾನದಲ್ಲಿದ್ದರೆ,  ಸನ್‌ರೈಸರ್ಸ್ ಹೈದರಾಬಾದ್ 9 ಹಾಗೂ ಡೆಲ್ಲಿ ಕ್ಯಾಪಿಟಲ್ಸ್ 10ನೇ ಸ್ಥಾನದಲ್ಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ