IPL 2024 ಚೆನ್ನೈ vs ಪಂಜಾಬ್‌ ಕಿಂಗ್ಸ್‌: ಡು ಆರ್‌ ಡೈ ಕದನ ಗೆಲ್ಲೋರ್‍ಯಾರು?

Published : May 05, 2024, 08:59 AM IST
IPL 2024 ಚೆನ್ನೈ vs ಪಂಜಾಬ್‌ ಕಿಂಗ್ಸ್‌: ಡು ಆರ್‌ ಡೈ ಕದನ ಗೆಲ್ಲೋರ್‍ಯಾರು?

ಸಾರಾಂಶ

ಪಂಜಾಬ್‌ ಕಿಂಗ್ಸ್‌ ತಂಡ ಚೆನ್ನೈ ವಿರುದ್ಧ ಸತತ 6ನೇ ಗೆಲುವಿನ ಕಾತರದಲ್ಲಿದ್ದರೆ, ಚೆನ್ನೈ ತಂಡ ಗೆಲುವಿನ ಹಳಿಗೆ ಮರಳುವುದರ ಜೊತೆಗೆ ಪ್ಲೇ-ಆಫ್‌ರೇಸ್‌ನಲ್ಲಿ ಉಳಿದುಕೊಳ್ಳುವ ನಿರೀಕ್ಷೆಯಲ್ಲಿದೆ.

ಧರ್ಮಶಾಲಾ(ಮೇ.05): 17ನೇ ಆವೃತ್ತಿ ಐಪಿಎಲ್‌ನಲ್ಲಿ ಅಸ್ಥಿರ ಆಟದಿಂದಾಗಿ ಮಾಡು ಇಲ್ಲವೇ ಮಡಿ ಸ್ಥಿತಿಗೆ ತಲುಪಿರುವ 2 ತಂಡಗಳಾದ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಪಂಜಾಬ್ ಕಿಂಗ್ಸ್‌ ತಂಡಗಳು ಭಾನುವಾರ ಪರಸ್ಪರ ಮುಖಾಮುಖಿಯಾಗಲಿವೆ. ಪಂಜಾಬ್‌ ಕಿಂಗ್ಸ್‌ ತಂಡ ಚೆನ್ನೈ ವಿರುದ್ಧ ಸತತ 6ನೇ ಗೆಲುವಿನ ಕಾತರದಲ್ಲಿದ್ದರೆ, ಚೆನ್ನೈ ತಂಡ ಗೆಲುವಿನ ಹಳಿಗೆ ಮರಳುವುದರ ಜೊತೆಗೆ ಪ್ಲೇ-ಆಫ್‌ರೇಸ್‌ನಲ್ಲಿ ಉಳಿದುಕೊಳ್ಳುವ ನಿರೀಕ್ಷೆಯಲ್ಲಿದೆ.

ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌ ಆಡಿರುವ 10 ಪಂದ್ಯಗಳಲ್ಲಿ ತಲಾ 5 ಗೆಲುವು, ಸೋಲು ಅನುಭವಿಸಿದೆ. ಅತ್ತ ಪಂಜಾಬ್‌ 10ರಲ್ಲಿ 4 ಪಂದ್ಯ ಗೆದ್ದಿದ್ದು, 6ರಲ್ಲಿ ಸೋತಿದೆ. ಚೆನ್ನೈ ಇನ್ನುಳಿದ 4 ಪಂದ್ಯ ಗೆದ್ದರೆ ಪ್ಲೇ-ಆಫ್‌ಗೇರಲಿದ್ದು, ಒಂದು ಪಂದ್ಯ ಸೋತರೂ ನಾಕೌಟ್‌ಗೇರಲು ಇತರ ತಂಡಗಳ ಫಲಿತಾಂಶವನ್ನು ಅವಲಂಬಿಸಬೇಕಾಗುತ್ತದೆ.

ಗುಜರಾತ್ ಮತ್ತೊಮ್ಮೆ ಮಣಿಸಿ ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಜಿಗಿದ ಆರ್‌ಸಿಬಿ..!

ಮತ್ತೊಂದೆಡೆ ಪಂಜಾಬ್‌ಗೆ ಅಳಿವು ಉಳಿವಿನ ಪ್ರಶ್ನೆ ಎದುರಾಗಿದೆ. ಚೆನ್ನೈ ವಿರುದ್ಧ ಸೇರಿದಂತೆ ಉಳಿದೆಲ್ಲಾ 4 ಪಂದ್ಯ ಗೆದ್ದರೂ ಪ್ಲೇ-ಆಫ್‌ಗೇರಬೇಕಿದ್ದರೆ ಇತರ ತಂಡಗಳನ್ನು ನೆಟ್‌ ರನ್‌ರೇಟ್‌ನಲ್ಲಿ ಹಿಂದಿಕ್ಕಬೇಕಿದೆ. ಸತತ 2 ಗೆಲುವು ತಂಡದ ಆತ್ಮವಿಶ್ವಾಸ ಹೆಚ್ಚಿಸಿದ್ದು, ಚೆನ್ನೈ ವಿರುದ್ಧದ ಗೆಲುವಿನ ಓಟ ಮುಂದುವರಿಸುವ ಕಾತರದಲ್ಲಿದೆ.

ಒಟ್ಟು ಮುಖಾಮುಖಿ: 29

ಚೆನ್ನೈ: 15

ಪಂಜಾಬ್‌: 14

ಸಂಭವನೀಯ ಆಟಗಾರರ ಪಟ್ಟಿ

ಚೆನ್ನೈ ಸೂಪರ್ ಕಿಂಗ್ಸ್: ಅಜಿಂಕ್ಯ ರಹಾನೆ, ಋತುರಾಜ್‌ ಗಾಯಕ್ವಾಡ್(ನಾಯಕ), ಡ್ಯಾರಿಲ್‌ ಮಿಚೆಲ್, ಮೊಯೀನ್‌ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂ ಎಸ್ ಧೋನಿ, ಶಾರ್ದೂಲ್‌ ಠಾಕೂರ್, ಗ್ಲೀಸನ್‌, ಮಥೀಶ್ ಪತಿರನ, ತುಷಾರ ದೇಶಪಾಂಡೆ.

ಪಂಜಾಬ್‌ ಕಿಂಗ್ಸ್: ಜಾನಿ ಬೇರ್‌ಸ್ಟೋವ್‌, ಸ್ಯಾಮ್ ಕರ್ರನ್‌(ನಾಯಕ), ರೀಲೆ ರೋಸ್ಸೌ, ಶಶಾಂಕ್‌ ಸಿಂಗ್, ಜಿತೇಶ್‌ ಶರ್ಮಾ, ಅಶುತೋಶ್‌ ಸಿಂಗ್, ಹರ್‌ಪ್ರೀತ್‌ ಬ್ರಾರ್, ಹರ್ಷಲ್‌ ಪಟೇಲ್, ಕಗಿಸೋ ರಬಾಡ, ರಾಹುಲ್ ಚಹರ್‌, ಅರ್ಶ್‌ದೀಪ್‌ ಸಿಂಗ್.

ಪಂದ್ಯ: ಮಧ್ಯಾಹ್ನ 3.30ಕ್ಕೆ
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಪಿಎಲ್ ಹರಾಜಿನ ಬಳಿಕ 4 ಬಲಿಷ್ಠ ತಂಡ ಆಯ್ಕೆ ಮಾಡಿದ ಆರ್. ಅಶ್ವಿನ್; ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕಿಲ್ಲ ಸ್ಥಾನ!
ವೆಂಕಟೇಶ್ ಅಯ್ಯರ್‌ಗೆ ನಂ.3 ಸ್ಲಾಟ್ ಫಿಕ್ಸ್; ಮುಂಬರುವ ಐಪಿಎಲ್‌ಗೆ ಆರ್‌ಸಿಬಿ ಬಲಿಷ್ಠ ಆಡುವ ಹನ್ನೊಂದರ ಬಳಗ ಹೀಗಿರಲಿದೆ!