ಲಖನೌ ತೊರೆದ ಗಂಭೀರ್, ಕೈಬೀಸಿ ಕರೆದ ಕೆಕೆಆರ್: ಚಾಂಪಿಯನ್‌ ನಾಯಕ ಈಗ ಕೋಲ್ಕತಾ ಮೆಂಟರ್

Published : Nov 22, 2023, 02:45 PM IST
ಲಖನೌ ತೊರೆದ ಗಂಭೀರ್, ಕೈಬೀಸಿ ಕರೆದ ಕೆಕೆಆರ್: ಚಾಂಪಿಯನ್‌ ನಾಯಕ ಈಗ ಕೋಲ್ಕತಾ ಮೆಂಟರ್

ಸಾರಾಂಶ

ಕೋಲ್ಕತಾ ನೈಟ್ ರೈಡರ್ಸ್‌ ತಂಡದ ಸಿಇಒ ವೆಂಕಿ ಮೈಸೂರ್ ಖಚಿತಪಡಿಸಿದ್ದಾರೆ. ಈ ನಿರ್ಧಾವವನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡದ ಮಾಲೀಕರಾದ ಶಾರುಕ್ ಖಾನ್ ಅವರು ಮುಕ್ತ ಹೃದಯದಿಂದ ಸ್ವಾಗತಿಸಿದ್ದಾರೆ. ಇನ್ನು ಗೌತಮ್ ಗಂಭೀರ್ ಕೂಡಾ ಟ್ವೀಟ್ ಮಾಡಿ, ಸಂತಸ ವ್ಯಕ್ತಪಡಿಸಿದ್ದಾರೆ.

ಕೋಲ್ಕತಾ(ನ.22): ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಬಿಜೆಪಿ ಸಂಸದ ಗೌತಮ್ ಗಂಭೀರ್, ಮುಂಬರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್‌ ತಂಡದ ಮೆಂಟರ್‌ ಆಗಿ ನೇಮಕವಾಗಿದ್ದಾರೆ. ಕಳೆದೆರಡು ಐಪಿಎಲ್ ಆವೃತ್ತಿಯಲ್ಲಿ ಲಖನೌ ಸೂಪರ್‌ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗಂಭೀರ್, ಇದೀಗ ಮರಳಿ ಗೂಡು ಸೇರಿದ್ದಾರೆ. ನಾಯಕನಾಗಿ ಎರಡು ಬಾರಿ ಕೆಕೆಆರ್ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿದ್ದ ಗಂಭೀರ್, ಇದೀಗ ಮತ್ತೊಮ್ಮೆ ಕೆಕೆಆರ್ ಎರಡನೇ ಇನಿಂಗ್ಸ್ ಆರಂಭಿಸಿದ್ದಾರೆ.

ಈ ವಿಚಾರವನ್ನು ಕೋಲ್ಕತಾ ನೈಟ್ ರೈಡರ್ಸ್‌ ತಂಡದ ಸಿಇಒ ವೆಂಕಿ ಮೈಸೂರ್ ಖಚಿತಪಡಿಸಿದ್ದಾರೆ. ಈ ನಿರ್ಧಾವವನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡದ ಮಾಲೀಕರಾದ ಶಾರುಕ್ ಖಾನ್ ಅವರು ಮುಕ್ತ ಹೃದಯದಿಂದ ಸ್ವಾಗತಿಸಿದ್ದಾರೆ. ಇನ್ನು ಗೌತಮ್ ಗಂಭೀರ್ ಕೂಡಾ ಟ್ವೀಟ್ ಮಾಡಿ, ಸಂತಸ ವ್ಯಕ್ತಪಡಿಸಿದ್ದಾರೆ.

'ವಿಶ್ವಕಪ್ ಪ್ರಶಸ್ತಿ ಪ್ರದಾನ ಅತ್ಯಂತ ಅಯೋಗ್ಯ ಟ್ರೋಫಿ ಪ್ರಸ್ತುತಿ': ಕಮಿನ್ಸ್ ಪಾಡು ಕೇಳೋರಿಲ್ಲ

ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಕಳೆದೆರಡು ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವು ಅದ್ಭುತ ಪ್ರದರ್ಶನ ತೋರಿತ್ತಾದರೂ ಕಪ್ ಗೆಲ್ಲಲು ಯಶಸ್ವಿಯಾಗಿಲ್ಲ. 2022ರ ಐಪಿಎಲ್ ಟೂರ್ನಿಯಲ್ಲಿ ಲಖನೌ ತಂಡವು ಫೈನಲ್‌ಗೇರಿದ ಸಾಧನೆ ಮಾಡಿತ್ತು. ಇನ್ನು 2023ರ ಐಪಿಎಲ್ ಟೂರ್ನಿಯಲ್ಲಿ ಕೆ ಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯಾ ತಂಡದ ಮ್ಯಾನೇಜರ್ ಕನ್ನಡತಿ..!

ಕೋಲ್ಕತಾ ನೈಟ್ ರೈಡರ್ಸ್‌ ತಂಡವು 2012 ಹಾಗೂ 2014ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲೇ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ ಕೆಕೆಆರ್ ತಂಡದಲ್ಲಿ ಹಲವಾರು ಪ್ರತಿಭಾನ್ವಿತ ಆಟಗಾರರಿದ್ದರೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಕೆಕೆಆರ್ ಫ್ರಾಂಚೈಸಿಯು 2024ರ ಐಪಿಎಲ್ ಟೂರ್ನಿಗೂ ಮುನ್ನ ಚಾಂಪಿಯನ್ ಆಟಗಾರನನ್ನು ಕರೆತಂದಿದೆ. ಗಂಭೀರ್ ಮಾರ್ಗದರ್ಶನದಲ್ಲಿ ಕೆಕೆಆರ್ ತಂಡವು ಮತ್ತೊಮ್ಮೆ ಚಾಂಪಿಯನ್ ಆಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್