ಚಿನ್ನಸ್ವಾಮಿ ಮೈದಾನದಲ್ಲಿ ಆರ್‌ಸಿಬಿ ಎದುರು ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ

Published : Mar 29, 2024, 07:07 PM ISTUpdated : Mar 29, 2024, 07:20 PM IST
ಚಿನ್ನಸ್ವಾಮಿ ಮೈದಾನದಲ್ಲಿ ಆರ್‌ಸಿಬಿ ಎದುರು ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ

ಸಾರಾಂಶ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅನುಕೂಲ್ ರಾಯ್ ತಂಡ ಕೂಡಿಕೊಂಡಿದ್ದಾರೆ.

ಬೆಂಗಳೂರು(ಮಾ.29): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅನುಕೂಲ್ ರಾಯ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಕೋಲ್ಕತಾ ನೈಟ್ ರೈಡರ್ಸ್ ಪರ ಅಂಗ್‌ಕ್ರಿಶ್ ರಘುವಂಶಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದಾರೆ. ರಘುವಂಶಿ ಸಬ್‌ಸ್ಟಿಟ್ಯೂಟ್ ಆಟಗಾರನಾಗಿ ಕೆಕೆಆರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

RCB ಏನನ್ನೂ ಗೆದ್ದಿಲ್ಲ ಆದ್ರೆ ಎಲ್ಲವನ್ನೂ ಗೆದ್ದಂತೆ ವರ್ತಿಸುತ್ತಾರೆ: ಗೌತಮ್ ಗಂಭೀರ್

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂಜಾಬ್ ಕಿಂಗ್ಸ್ ಎದುರು ಕಣಕ್ಕಿಳಿದ ತಂಡವೇ ಕೆಕೆಆರ್ ಎದುರಿನ ಪಂದ್ಯಕ್ಕೆ ಕಣಕ್ಕಿಳಿದಿದೆ

2015ರ ಬಳಿಕ ಚಿನ್ನಸ್ವಾಮಿಯಲ್ಲಿ ಕೆಕೆಆರ್‌ ವಿರುದ್ಧ ಗೆದ್ದಿಲ್ಲ ಆರ್‌ಸಿಬಿ!

ಆರ್‌ಸಿಬಿ ತಂಡ ಕೆಕೆಆರ್‌ ವಿರುದ್ಧ 2015ರ ನಂತರ ಒಂದೂ ಪಂದ್ಯದಲ್ಲಿ ಗೆದ್ದಿಲ್ಲ. 2015ರ ಮುಖಾಮುಖಿಯಲ್ಲಿ ಆರ್‌ಸಿಬಿ ತಂಡ ಕೋಲ್ಕತಾವನ್ನು ಸೋಲಿಸಿತ್ತು.  2015ರ ಬಳಿಕ 2016, 2017, 2018, 2019 ಹಾಗೂ 2023ರಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲೂ ಕೆಕೆಆರ್‌ಗೆ ಆರ್‌ಸಿಬಿ ಶರಣಾಗಿದೆ. ಈ ಬಾರಿ ಸೋಲಿನ ಸರಪಳಿ ಕಳಚಳು ಕಾಯುತ್ತಿದೆ.

ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ

ಆರ್‌ಸಿಬಿ: ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್‌ ಕೊಹ್ಲಿ, ರಜತ್‌ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್‌, ಕ್ಯಾಮರೋನ್ ಗ್ರೀನ್, ದಿನೇಶ್ ಕಾರ್ತಿಕ್‌, ಅನುಜ್‌ ರಾವತ್, ಅಲ್ಜಾರಿ ಜೋಸೆಫ್‌, ಮಯಾಂಕ್‌ ದಾಗರ್, ಮೊಹಮ್ಮದ್ ಸಿರಾಜ್‌, ಯಶ್ ದಯಾಳ್‌

ಕೆಕೆಆರ್‌: ಫಿಲ್ ಸಾಲ್ಟ್‌, ವೆಂಕಟೇಶ್‌ ಅಯ್ಯರ್, ಶ್ರೇಯಸ್‌ ಅಯ್ಯರ್(ನಾಯಕ), ರಿಂಕು ಸಿಂಗ್, ರಮನ್‌ದೀಪ್‌ ಸಿಂಗ್, ಆಂಡ್ರೆ ರಸೆಲ್‌, ಸುನಿಲ್ ನರೈನ್‌, ಅನುಕೂಲ್ ರಾಯ್, ಮಿಚೆಲ್ ಸ್ಟಾರ್ಕ್‌, ಹರ್ಷಿತ್‌ ರಾಣಾ, ವರುಣ್‌ ಚಕ್ರವರ್ತಿ

ಪಂದ್ಯ ಆರಂಭ: ಸಂಜೆ 7.30ಕ್ಕೆ, ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್‌, ಜಿಯೋ ಸಿನಿಮಾ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಡಿಮೆ ಮೊತ್ತಕ್ಕೆ ಆರ್‌ಸಿಬಿ ತೆಕ್ಕೆಗೆ ಜಾರಿದ ಸ್ಟಾರ್ ಆಲ್ರೌಂಡರ್! ಹಾಲಿ ಚಾಂಪಿಯನ್ ಬೆಂಗಳೂರು ತಂಡಕ್ಕೆ ಜಾಕ್‌ಪಾಟ್
ಐಪಿಎಲ್ ಮಿನಿ ಹರಾಜು: ಮೊದಲ ಸುತ್ತಿನಲ್ಲೇ ದೊಡ್ಡ ಮೊತ್ತಕ್ಕೆ ಬಿಡ್ ಆಗಿ ದಾಖಲೆ ಬರೆದ ಕ್ಯಾಮರೋನ್ ಗ್ರೀನ್