ಐಪಿಎಲ್ ಹರಾಜು: ಅರ್ಶದೀಪ್ ಸಿಂಗ್‌ಗೆ ಜಾಕ್‌ಪಾಟ್, ಪಂಜಾಬ್ ಕಿಂಗ್ಸ್ ತೆಕ್ಕೆಗೆ ಎಡಗೈ ವೇಗಿ

Published : Nov 24, 2024, 04:02 PM IST
ಐಪಿಎಲ್ ಹರಾಜು: ಅರ್ಶದೀಪ್ ಸಿಂಗ್‌ಗೆ ಜಾಕ್‌ಪಾಟ್, ಪಂಜಾಬ್ ಕಿಂಗ್ಸ್ ತೆಕ್ಕೆಗೆ ಎಡಗೈ ವೇಗಿ

ಸಾರಾಂಶ

ಎಡಗೈ ವೇಗಿ ಅರ್ಶದೀಪ್ ಸಿಂಗ್ 18 ಕೋಟಿ ರುಪಾಯಿಗೆ ಪಂಜಾಬ್ ಕಿಂಗ್ಸ್ ಪಾಲಾಗಿದ್ದಾರೆ

ಜೆಡ್ಡಾ: ಬಹುನಿರೀಕ್ಷಿತ 2025ರ ಐಪಿಎಲ್ ಮೆಗಾ ಹರಾಜಿಗೆ ಅಧಿಕೃತ ಚಾಲನೆ ಸಿಕ್ಕಿದ್ದು, ಮೊದಲ ಆಟಗಾರನಾಗಿ ಹರಾಜಿಗೆ ಬಂದ ಎಡಗೈ ವೇಗಿ ಅರ್ಶದೀಪ್ ಸಿಂಗ್ 18 ಕೋಟಿ ರುಪಾಯಿಗೆ ಪಂಜಾಬ್ ಕಿಂಗ್ಸ್ ತೆಕ್ಕೆಗೆ ಜಾರಿದ್ದಾರೆ.  ಮರ್ಕ್ಯೂ ಆಟಗಾರನಾಗಿ 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ  ಎಡಗೈ ವೇಗಿ ಆರ್ಶದೀಪ್ ಸಿಂಗ್ ಅವರನ್ನುಆರ್‌ಟಿಎಂ ಕಾರ್ಡ್ ಬಳಸಿ 18 ಕೋಟಿ ರುಪಾಯಿಗೆ ರೀಟೈನ್ ಮಾಡಿಕೊಂಡಿದೆ.

2025ರ ಐಪಿಎಲ್ ಮೆಗಾ ಹರಾಜಿಗೆ ಸೌದಿ ಅರೇಬಿಯಾದ ಜೆಡ್ಡಾ ಆತಿಥ್ಯ ವಹಿಸಿದೆ. ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿದ್ದ ಅರ್ಶದೀಪ್ ಸಿಂಗ್ ಅವರನ್ನ ಖರೀದಿಸಲು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯಿತು. ಕಳೆದ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಖರೀದಿಸಿದ್ದ ಅರ್ಶದೀಪ್ ಸಿಂಗ್ ಅವರನ್ನು ಖರೀದಿಸಲು ಕೊನೆಯಲ್ಲಿ ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಪೈಪೋಟಿ ಏರ್ಪಟ್ಟಿತ್ತು. 11 ಕೋಟಿವರೆಗೂ ಆರ್‌ಸಿಬಿ ಬಿಡ್ ಮಾಡಿತು. ಆದರೆ ಮತ್ತೆ ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಪೈಪೋಟಿ ಏರ್ಪಟ್ಟಿತು.

ಇನ್ನು ರಾಜಸ್ಥಾನ ರಾಯಲ್ಸ್ ತಂಡವು 13 ಕೋಟಿ ರುಪಾಯಿಗೆ ಬಿಡ್ ಮಾಡಿತು. ಆದರೆ ಕೊನೆಯ ಕ್ಷಣದಲ್ಲಿ ಕಳೆದ ಆವೃತ್ತಿಯ ರನ್ನರ್ ಅಪ್ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು 14.25 ಕೋಟಿ ರುಪಾಯಿಗೆ ಬಿಡ್ ಮಾಡಿತು. ಆದರೆ ಪಟ್ಟುಬಿಡದೇ ಬಿಡ್ ಮಾಡಿದ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು 15.50 ಕೋಟಿ ರುಪಾಯಿಗೆ ಬಿಡ್‌ ಮಾಡಿತು.  ಕೊನೆಗೆ ಸನ್‌ರೈಸರ್ಸ್ ಹೈದರಾಬಾದ್ ತಂಡವು 15.75 ಕೋಟಿಗೆ ಬಿಡ್ ಮಾಡಿತು. ಆದರೆ ಪಂಜಾಬ್ ಕಿಂಗ್ಸ್ ತಂಡವು 15.75 ಕೋಟಿ ರುಪಾಯಿಗೆ ಆರ್‌ಟಿಎಂ ಬಳಸಿತು. ಆದರೆ ಅಂತಿಮವಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡವು 18 ಕೋಟಿ ರುಪಾಯಿಗೆ ಅಂತಿಮ ಬಿಡ್ ಮಾಡಿತು. ಆದರೆ ಪಂಜಾಬ್ ಕಿಂಗ್ಸ್ ಮತ್ತೆ ಆರ್‌ಟಿಎಂ ಬಳಸಿ 18 ಕೋಟಿ ರುಪಾಯಿಗೆ ತನ್ನಲ್ಲೇ ಉಳಿಸಿಕೊಂಡಿತು. 

ಐಪಿಎಲ್‌ನಲ್ಲಿ 65 ಪಂದ್ಯಗಳನ್ನಾಡಿರುವ ಅರ್ಶದೀಪ್ ವಿಕೆಟ್ ಕಬಳಿಸಿದ್ದಾರೆ. 22 ರನ್‌ಗಳಿಗೆ 5 ವಿಕೆಟ್ ಕಬಳಿಸಿದ್ದು, ಅರ್ಶದೀಪ್ ಸಿಂಗ್ ವೈಯುಕ್ತಿಕ ಶ್ರೇಷ್ಠ ಪ್ರದರ್ಶನ ಎನಿಸಿಕೊಂಡಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ