ಆರ್‌ಸಿಬಿ ಕೆಣಕಿ ಉಳಿದವರಿಲ್ಲ, ಪಾಂಡ್ಯ-ತಿಲಕ್‌ಗೆ ಬ್ರೇಕ್ ಹಾಕಿ ಮುಂಬೈ ಸೋಲಿಸಿದ ಬೆಂಗಳೂರು

Published : Apr 07, 2025, 11:28 PM ISTUpdated : Apr 07, 2025, 11:33 PM IST
ಆರ್‌ಸಿಬಿ ಕೆಣಕಿ ಉಳಿದವರಿಲ್ಲ, ಪಾಂಡ್ಯ-ತಿಲಕ್‌ಗೆ ಬ್ರೇಕ್ ಹಾಕಿ ಮುಂಬೈ ಸೋಲಿಸಿದ ಬೆಂಗಳೂರು

ಸಾರಾಂಶ

ಆರ್‌ಸಿಬಿ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಮುಂಬೈನಲ್ಲಿ ಘರ್ಜಿಸಿದೆ.  ಇತ್ತ ಅಭಿಮಾನಿಗಳು ಭರ್ಜರಿ ಸಂಭ್ರಮದಲ್ಲಿ ಮುಳುಗಿದ್ದಾರೆ. 

ಮುಂಬೈ(ಏ.07) ಹಾರ್ದಿಕ್ ಪಾಂಡ್ಯ ಹಾಗೂ ತಿಲಕ್ ವರ್ಮಾ ಅಬ್ಬರ ಆರ್‌ಸಿಬಿ ಅಭಿಮಾನಿಗಳ ಆತಂಕ ಹೆಚ್ಚಿಸಿತ್ತು. ಆದರೆ ಆರ್‌ಸಿಬಿ ಮಾತ್ರ ಎದೆಗುಂದಲಿಲ್ಲ. ಸಂಘಟಿತ ಹೋರಾಟ ನಡೆಸಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಶಾಕ್ ನೀಡಿದೆ. ಮುಂಬೈ ಇಂಡಿಯನ್ಸ್ ತಂಡವನ್ನು 209 ರನ್‌ಗೆ ಕಟ್ಟಿಹಾಕಿದ ಬೆಂಗಳೂರು ಗೆಲುವು ದಾಖಲಿಸಿದೆ. 12 ರನ್ ರೋಚಕ ಗೆಲುವು ಕಂಡ ಆರ್‌ಸಿಬಿ ಸಂಭ್ರಮ ಜೋರಾಗಿದೆ 

ಮುಂಬೈ ಇನ್ನಿಂಗ್ಸ್
ಆರ್‌ಸಿಬಿ 222ರನ್ ಟಾರ್ಗೆಟ್ ಮುಂಬೈ ತಂಡಕ್ಕೆ ಕಠಿಣ ಸವಾಲು ನೀಡಿತ್ತು. ಆರ್‌ಸಿಬಿ ಆರಂಭದಲ್ಲೇ ಉತ್ತಮ ದಾಳಿ ಸಂಘಟಿಸಿತ್ತು. ರೋಹಿತ್ ಶರ್ಮಾಹಾಗೂ ರಿಯಾನ್ ರಿಕೆಲ್ಟನ್ ಆರಂಭ ನಿರೀಕ್ಷಿತ ಮಟ್ಟ ತಲುಪಲಿಲ್ಲ. ರೋಹಿತ್ ಶರ್ಮಾ 17 ರನ್ ಹಾಗೂ ರಿಯಾನ್ 17 ರನ್ ಸಿಡಿಸಿ ನಿರ್ಗಮಿಸಿದರು. ಜೋಶ್ ಹೇಜಲ್‌ವುಡ್, ಯಶ್ ದಯಾಳ್ ಹಾಗೂ ಕ್ರುನಾಲ್ ಪಾಂಡ್ಯ ದಾಳಿಯಿಂದ ಆರ್‌ಸಿಬಿ ಮೇಲುಗೈ ಸಾಧಿಸಿತು. ವಿಲ್ ಜ್ಯಾಕ್ಸ್ ಕೂಡ ಅಬ್ಬರಿಸಲಿಲ್ಲ. 22 ರನ್ ಸಿಡಿಸಿ ನಿರ್ಗಮಿಸಿದರು. ಸೂರ್ಯಕುಮಾರ್ ಕೂಡ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಲು ಆರ್‌ಸಿಬಿ ಅವಕಾಶ ನೀಡಲಿಲ್ಲ. 28 ರನ್ಗೆ ವಿಕೆಟ್ ಕೈಚೆಲ್ಲಿದರು.

ಒಂದೇ ವೈರಲ್‌ ರಿಯಾಕ್ಷನ್‌ಗೆ 800 ರಿಂದ 3 ಲಕ್ಷ ಫಾಲೋವರ್ಸ್‌, ಸ್ವಿಗ್ಗಿ ಬ್ರ್ಯಾಂಡ್‌ ಡೀಲ್‌ ಒಪ್ಪಿಕೊಂಡ ಆರ್ಯಪ್ರಿಯಾ ಭುಯಾನ್‌!

ತಿಲಕ್ ವರ್ಮಾ ಹಾಗೂ ಹಾರ್ದಿಕ್ ಬ್ಯಾಟಿಂಗ್ ಆರ್‌ಸಿಬಿ ತಲೆನೋವು ಹೆಚ್ಚಿಸಿತು. ಹಾರ್ದಿಕ್ ಒಂದರ ಮೇಲೊಂದರಂತೆ ಸಿಕ್ಸರ್ ಮೂಲಕ ಅಬ್ಬರಿಸಿದರೆ, ತಿಲಕ್ ವರ್ಮಾ ಬೌಂಡರಿ ಮೂಲಕ ಮುಂಬೈ ಇಂಡಿಯನ್ಸ್‌ಗೆ ನೆರವಾದರು. ಇವರಿಬ್ಬರ ಜೊತೆಯಾಟ ಆರ್‌ಬಿಯಿಂದ ಪಂದ್ಯವನ್ನು ನಿಧಾನವಾಗಿ ಕೈಜಾರುವಂತೆ ಮಾಡಿತು. ತಿಲಕ್ ವರ್ಮಾ 26 ಎಸೆತದಲ್ಲಿ ಹಾಫ್ ಸೆಂಚುರಿ ಪೂರೈಸಿದರು. 

ಭುವನೇಶ್ವರ್ ಸ್ವಿಂಗ್
ಅಬ್ಬರಿಸುತ್ತಿದ್ದ ಈ ಜೊತೆಯಾಟಕ್ಕೆ ಭುವನೇಶ್ವರ್ ಕುಮಾರ್ ಬ್ರೇಕ್ ಹಾಕಿದರು. ತಿಲಕ್ ವರ್ಮಾ 56 ರನ್ ಸಿಡಿಸಿ ಔಟಾದರು. ಈ ವೇಳೆ ಮುಂಬೈ ಇಂಡಿಯನ್ಸ್ ಗೆಲುವಿಗೆ 14 ಎಸೆತದಲ್ಲಿ 34 ರನ್ ಬೇಕಿತ್ತು. ಜೊತೆಗೆ ಹಾರ್ದಿಕ್ ಪಾಂಡ್ಯ ಕ್ರೀಸ್‌ನಲ್ಲಿದ್ದರು. ಪಾಂಡ್ಯ 42 ರನ್ ಸಿಡಿಸಿ ಔಟಾಗುತ್ತಿದ್ದಂತೆ ಮುಂಬೈ ಸಪ್ಪೆಯಾಯಿತು. ಬಳಿಕ ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್ ವಿಕೆಟ್ ಪತನಗೊಂಡಿತು. ಕೊನೆಯ ನಾಲ್ಕು ಎಸೆತದಲ್ಲಿ ಮುಂಬೈಗೆ 18 ರನ್ ಬೇಕಿತ್ತು. ಆದರೆ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಕೊನೆಗೆ ಮುಂಬೈ 9 ವಿಕೆಟ್ ಕಳೆದುಕೊಂಡು 209 ರನ್ ಸಿಡಿಸಿತು. ಇದರೊಂದಿಗೆ ಆರ್‌ಸಿಬಿ 12 ರನ್ ಗೆಲುವು ದಾಖಲಿಸಿತು 

ಆರ್‌ಸಿಬಿ ಇನ್ನಿಂಗ್ಸ್
ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಉತ್ತಮ ಪ್ರದರ್ಶನ ನೀಡಿತ್ತು. ವಿರಾಟ್ ಕೊಹ್ಲಿ 67 ರನ್ ಸಿಡಿಸಿದರು. ದೇವದತ್ ಪಡಿಕ್ಕಲ್ 37 ರನ್ ಸಿಡಿಸಿದರೆ, ನಾಯಕ ರಜತ್ ಪಾಟೀದಾರ್ 64 ರನ್ ಸಿಡಿಸಿದರು. ಜಿತೇಶ್ ಶರ್ಮಾ 40 ರನ್ ಸಿಡಿಸಿದರು. ಈ ಮೂಲಕ ಈ ಮೂಲಕ ಆರ್‌ಸಿಬಿ 221 ರನ್ ಸಿಡಿಸಿತ್ತು. 

ಚಾಂಪಿಯನ್ಸ್ ಟ್ರೋಫಿ ಸೋತ ಇಂಗ್ಲೆಂಡ್‌ ತಂಡದಲ್ಲಿ ಮೇಜರ್ ಸರ್ಜರಿ: ಐಪಿಎಲ್‌ನಿಂದ ಬ್ಯಾನ್ ಆದ ಆಟಗಾರ ಈಗ ಕ್ಯಾಪ್ಟನ್!

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

WPL 2026: ಸ್ಮೃತಿ ಮಂಧನಾ ನೇತೃತ್ವದ ಆರ್‌ಸಿಬಿ ಮತ್ತೊಮ್ಮೆ ಚಾಂಪಿಯನ್; ಡೆಲ್ಲಿ ಕ್ಯಾಪಿಟಲ್ಸ್‌ಗೆ ನಾಲ್ಕನೇ ಬಾರಿ ಹಾರ್ಟ್‌ ಬ್ರೇಕ್!
U19 World Cup: ಟಾಪ್ 07 ರನ್ ಸರದಾರರಲ್ಲಿ ಭಾರತದ ಏಕೈಕ ಆಟಗಾರ! ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ?