ಐಪಿಎಲ್‌ ರೂಲ್ಸ್‌ನಲ್ಲಿ ಮಹತ್ವದ ಬದಲಾವಣೆ ಮಾಡಿದ ಬಿಸಿಸಿಐ! ಈ ರೂಲ್ಸ್‌ ನಿಮಗೆ ಗೊತ್ತಿರಲಿ

Published : Mar 21, 2025, 11:21 AM ISTUpdated : Mar 21, 2025, 12:06 PM IST
ಐಪಿಎಲ್‌ ರೂಲ್ಸ್‌ನಲ್ಲಿ ಮಹತ್ವದ ಬದಲಾವಣೆ ಮಾಡಿದ ಬಿಸಿಸಿಐ! ಈ ರೂಲ್ಸ್‌ ನಿಮಗೆ ಗೊತ್ತಿರಲಿ

ಸಾರಾಂಶ

ಐಪಿಎಲ್ 18ನೇ ಆವೃತ್ತಿಗೆ ಸಿದ್ಧತೆ ನಡೆದಿದೆ. ಉದ್ಘಾಟನಾ ಪಂದ್ಯವು ಕೋಲ್ಕತಾ ಮತ್ತು ಬೆಂಗಳೂರು ತಂಡಗಳ ನಡುವೆ ನಡೆಯಲಿದೆ. ಆಟಗಾರರು ಚೆಂಡಿಗೆ ಎಂಜಲು ಬಳಸಲು ಅನುಮತಿ ನೀಡಲಾಗಿದೆ. 2ನೇ ಇನ್ನಿಂಗ್ಸ್‌ನ 11ನೇ ಓವರ್‌ನಲ್ಲಿ ಚೆಂಡು ಬದಲಾವಣೆ, ನಿಧಾನಗತಿ ಬೌಲಿಂಗ್‌ಗೆ ನಾಯಕರಿಗೆ ದಂಡ ವಿಧಿಸುವ ನಿಯಮ ಜಾರಿಗೆ ತರಲಾಗಿದೆ. ಹಳೆಯ ನಿಯಮದಿಂದಾಗಿ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಬೆಂಗಳೂರು: ಬಹುನಿರೀಕ್ಷಿತ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಕ್ಷಣಗಣನೆ ಆರಂಭವಾಗಿದೆ. 2008ರಲ್ಲಿ ಆರಂಭವಾದ ಭಾರತದ ಚುಟುಕು ಕ್ರಿಕೆಟ್ ಹಬ್ಬ ಐಪಿಎಲ್ 17 ಯಶಸ್ವಿ ಆವೃತ್ತಿಗಳನ್ನು ಮುಗಿಸಿ ಇದೀಗ 18ನೇ ಆವೃತ್ತಿಯ ಟೂರ್ನಿಗೆ ಸಜ್ಜಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಿದೆ.

ಇನ್ನು ಮಿಲಿಯನ್ ಡಾಲರ್ ಟಿ20 ಲೀಗ್ ಎನಿಸಿಕೊಂಡಿರುವ ಐಪಿಎಲ್ ಟೂರ್ನಿಯನ್ನು ಇನ್ನಷ್ಟು ಸ್ಪರ್ಧಾತ್ಮಕಗೊಳಿಸಲು ಹಾಗೂ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಲು ಬಿಸಿಸಿಐ ಮುಂದಾಗಿದೆ. ಹೀಗಾಗಿ ಐಪಿಎಲ್‌ ರೂಲ್ಸ್‌ನಲ್ಲಿ ಪ್ರಮುಖ ಬದಲಾವಣೆಗಳನ್ನು ತಂದಿದೆ. ಅಷ್ಟಕ್ಕೂ ಬಿಸಿಸಿಐ ಜಾರಿಗೆ ತಂದಿರುವ ಆ ಹೊಸ ರೂಲ್ಸ್‌ಗಳೇನು? ಇದರಿಂದ ಯಾರಿಗೆ ಹೆಚ್ಚು ಪ್ರಯೋಜನ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಇದನ್ನೂ ಓದಿ: ಆರ್‌ಸಿಬಿ ತವರಿನ ಪಂದ್ಯಗಳ ಟಿಕೆಟ್‌ ಈ ಸಲವೂ ದುಬಾರಿ! ಒಂದು ಟಿಕೆಟ್ ಬೆಲೆ ಕೇವಲ ₹42,000

ಚೆಂಡಿಗೆ ಎಂಜಲು ಬಳಸಲು ಅನುಮತಿ

18ನೇ ಆವೃತ್ತಿಯ ಆಟಗಾರರು ಚೆಂಡಿಗೆ ಎಂಜಲು ಬಳಸಲು ಬಿಸಿಸಿಐ ಅನುಮತಿ ನೀಡಿದೆ. ಗುರುವಾರ ಕೇಂದ್ರ ಕಚೇರಿಯಲ್ಲಿ ನಡೆದ ಐಪಿಎಲ್ ನಾಯಕರ ಸಭೆಯಲ್ಲಿ ಬಿಸಿಸಿಐ ಈ ವಿಷಯವನ್ನು ಪ್ರಸ್ತಾಪಿಸಿತು. ಇದಕ್ಕೆ ಬಹುತೇಕ ನಾಯಕರು ಸಮ್ಮತಿಸಿದ ಕಾರಣ ಎಂಜಲು ಬಳಕೆಗೆ ಅನುಮತಿ ನೀಡಲಾಯಿತು. 

2020ರಲ್ಲಿ ಕೋವಿಡ್‌ನಿಂದಾಗಿ ಚೆಂಡಿಗೆ ಎಂಜಲು ಹಚ್ಚುವುದನ್ನು ಐಸಿಸಿ ನಿಷೇಧಿಸಿತ್ತು. ಇದರಿಂದಾಗಿ ಚೆಂಡಿನ ಹೊಳಪು ಕಾಪಾಡಿಕೊಳ್ಳುವುದು ಕಷ್ಟವಾಗುತ್ತಿತ್ತು. ಚೆಂಡು ಒಂದು ಬದಿಯ ಹೊಳಪು ಕಾಪಾಡುವ ಮೂಲಕ ಚೆಂಡನ್ನು ಸ್ವಿಂಗ್ ಮಾಡಲು ಅನುಕೂಲವಾಗಲಿದೆ.

ಇದನ್ನೂ ಓದಿ: IPL 2025ಗೂ ಮುನ್ನ ರಾಜಸ್ಥಾನ ರಾಯಲ್ಸ್‌ಗೆ ಬಿತ್ತು ಬಲವಾದ ಪೆಟ್ಟು; ಸಂಜು ಸ್ಯಾಮ್ಸನ್ ಔಟ್, ಈತನೇ ಹೊಸ ಕ್ಯಾಪ್ಟನ್!

2ನೇ ಇನ್ನಿಂಗ್ಸ್‌ನ 11ನೇ ಓವರ್‌ನಲ್ಲಿ ಚೆಂಡು ಬದಲು

ಐಪಿಎಲ್‌ನಲ್ಲಿ ಇಬ್ಬನಿಯಿಂದಾಗಿ ಚೆಂಡು ಹೆಚ್ಚು ಒದ್ದೆಯಾಗಿ ಬೌಲ್ ಮಾಡುವ ತಂಡಕ್ಕೆ ಸಮಸ್ಯೆಯಾಗಲಿರುವ ಕಾರಣಕ್ಕೆ ಸಂಜೆ ಪಂದ್ಯಗಳ ವೇಳೆ 2ನೇ ಇನ್ನಿಂಗ್ಸ್‌ನ 11ನೇ ಓವರ್‌ನಲ್ಲಿ ಚೆಂಡನ್ನು ಬದಲಿಸುವುದಾಗಿ ಬಿಸಿಸಿಐ ತಿಳಿಸಿದೆ. ಬಳಕೆಯಾಗಿರುವ ತೇವಾಂಶವಿಲ್ಲದ ಚೆಂಡನ್ನು ಆಯ್ಕೆ ಮಾಡಲಾಗುತ್ತದೆಯೇ ವಿನಃ ಹೊಸ ಚೆಂಡನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ನಿಧಾನಗತಿ ಬೌಲಿಂಗ್‌ಗಿನ್ನು ನಾಯಕರಿಗೆ ನಿಷೇಧವಿಲ್ಲ

ಐಪಿಎಲ್‌ನಲ್ಲಿ ತಂಡವೊಂದು 3 ಪಂದ್ಯಗಳಲ್ಲಿ ನಿಧಾನಗತಿ ಬೌಲಿಂಗ್‌ ಮಾಡಿದರೆ ನಾಯಕರಿಗೆ ಒಂದು ಪಂದ್ಯ ನಿಷೇಧ ಹೇರುವ ನಿಯಮವನ್ನು ಈ ಬಾರಿ ಬಿಸಿಸಿಐ ಬದಲಾಯಿಸಿದೆ. ಇನ್ನು ಮುಂದೆ ಒಂದಕ್ಕಿಂತ ಹೆಚ್ಚು ಪಂದ್ಯಗಳಲ್ಲಿ ತಂಡ ನಿಗದಿತ ಅವಧಿಯಲ್ಲಿ ಬೌಲಿಂಗ್‌ ಮುಗಿಸದಿದ್ದರೆ, ನಾಯಕರಿಗೆ ದಂಡ ವಿಧಿಸಿ, 1 ಡಿಮೆರಿಟ್‌ ಅಂಕ ನೀಡಲಾಗುತ್ತದೆ. ಡಿಮೆರಿಟ್‌ ಅಂಕದ ಅವಧಿ 3 ವರ್ಷ ಇರಲಿದ್ದು, ಈ ಅವಧಿಯಲ್ಲಿ 4 ಡಿಮೆರಿಟ್‌ ಅಂಕ ಪಡೆದರೆ ನಾಯಕನಿಗೆ ಪಂದ್ಯದ ಸಂಭಾವನೆಯ ಶೇ.100ರಷ್ಟು ದಂಡ ವಿಧಿಸುವುದಾಗಿ ಬಿಸಿಸಿಐ ತಿಳಿಸಿದೆ.

ಇದನ್ನೂ ಓದಿ: ಈ ಸಲದ ಮುಂಬೈ ಇಂಡಿಯನ್ಸ್ ಬಲಿಷ್ಠ ತಂಡ ಇದೇನಾ?

ಬಿಸಿಸಿಐ ಹಳೆ ರೂಲ್ಸ್‌ನಿಂದಾಗಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ, ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಕಳೆದ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಮೂರು ಬಾರಿ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!