ಐಪಿಎಲ್ ಹರಾಜು 2021: ಅರ್ಜುನ್‌ ತೆಂಡುಲ್ಕರ್ ಮೂಲಬೆಲೆ ಕೇವಲ 20 ಲಕ್ಷ ರುಪಾಯಿ..!

Suvarna News   | Asianet News
Published : Feb 12, 2021, 10:00 AM IST
ಐಪಿಎಲ್ ಹರಾಜು 2021: ಅರ್ಜುನ್‌ ತೆಂಡುಲ್ಕರ್ ಮೂಲಬೆಲೆ ಕೇವಲ 20 ಲಕ್ಷ ರುಪಾಯಿ..!

ಸಾರಾಂಶ

ಕ್ರಿಕೆಟ್‌ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್‌ ತೆಂಡುಲ್ಕರ್ 2021ನೇ ಸಾಲಿನ ಐಪಿಎಲ್ ಆಟಗಾರರ ಹರಾಜಿನಲ್ಲಿ ಲಭ್ಯರಿದ್ದು, ಅರ್ಜುನ್‌ಗೆ ಕೇವಲ 20 ಲಕ್ಷ ರುಪಾಯಿ ಮೂಲ ಬೆಲೆ ನಿಗದಿ ಮಾಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ನವದೆಹಲಿ(ಫೆ.12): ಮುಂಬೈನ ವೇಗದ ಬೌಲರ್‌ ಅರ್ಜುನ್‌ ತೆಂಡುಲ್ಕರ್‌ ಮುಂಬರುವ ಐಪಿಎಲ್ ಆಟಗಾರರ ಹರಾಜಿಗೆ ಲಭ್ಯವಿದ್ದು, ಸಚಿನ್ ತೆಂಡುಲ್ಕರ್ ಪುತ್ರನಿಗೆ ಮೂಲ ಬೆಲೆ 20 ಲಕ್ಷ ರುಪಾಯಿ ನಿಗದಿ ಪಡಿಸಲಾಗಿದೆ. ಅರ್ಜುನ್‌ ತೆಂಡುಲ್ಕರ್ ಅವರನ್ನು ಯಾವ ಫ್ರಾಂಚೈಸಿ ಖರೀದಿಸಲಿದೆ ಎನ್ನುವ ಕುತೂಹಲ ಜೋರಾಗಿದೆ.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯುವ ಮುಂಬರುವ ಐಪಿಎಲ್ ಆಟಗಾರರ ಹರಾಜಿನಲ್ಲಿ ಒಟ್ಟು 292 ಆಟಗಾರರನ್ನು ಶಾರ್ಟ್‌ಲಿಸ್ಟ್ ಮಾಡಿದ್ದು, ಫೆಬ್ರವರಿ 18ರಂದು ಚೆನ್ನೈನ ಖಾಸಗಿ ಹೋಟೆಲ್‌ನಲ್ಲಿ 2021ನೇ ಸಾಲಿನ ಐಪಿಎಲ್‌ ಆಟಗಾರರ ಹರಾಜು ನಡೆಯಲಿದೆ. ಒಟ್ಟು 1114 ಆಟಗಾರರು ಮಿನಿ ಹರಾಜಿಗಾಗಿ ತಮ್ಮ ಹೆಸರನ್ನು ನೋಂದಾಯಿಸಿದ್ದರು. ಈ ಪೈಕಿ 8 ಫ್ರಾಂಚೈಸಿಗಳು ತಮ್ಮ ಆದ್ಯತೆಯ ಹೆಸರುಗಳನ್ನು ಸೂಚಿಸಿದ್ದರು. ಈ ಪೈಕಿ 292 ಆಟಗಾರರನ್ನು ಹರಾಜಿಗೆ ಬಿಸಿಸಿಐ ಅಂತಿಮಗೊಳಿಸಿದೆ.

ಐಪಿಎಲ್‌ ಹರಾಜು 2021: ಯಾವ ಫ್ರಾಂಚೈಸಿ ಎಷ್ಟು ಆಟಗಾರರನ್ನು ಖರೀದಿಸಬಹುದು..?

ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಪಾಲ್ಗೊಳ್ಳುವ ಮೂಲಕ ಅರ್ಜುನ್ ತೆಂಡುಲ್ಕರ್‌ ಹರಾಜಿಗೆ ಅರ್ಹತೆಯನ್ನು ಗಿಟ್ಟಿಸಿಕೊಂಡಿದ್ದರು. ಜನವರಿ 15ರಂದು ಹರ್ಯಾಣ ವಿರುದ್ದ ಸೀನಿಯರ್ಸ್‌ ತಂಡಕ್ಕೆ ಸಚಿನ್ ತೆಂಡುಲ್ಕರ್ ಪುತ್ರ ಪಾದಾರ್ಪಣೆ ಮಾಡಿದ್ದರು. ಅರ್ಜುನ್‌ ತೆಂಡುಲ್ಕರ್ ಈ ಹಿಂದೆ ಟೀಂ ಇಂಡಿಯಾ ನೆಟ್‌ ಬೌಲರ್‌ ಆಗಿಯೂ ಕಾಣಿಸಿಕೊಂಡಿದ್ದರು. ಜತೆಗೆ ಅರ್ಜುನ್‌ ಮುಂಬೈ ಅಂಡರ್‌ 19 ತಂಡವನ್ನು ಪ್ರತಿನಿಧಿಸಿದ್ದರು. ಇನ್ನು 2018ರಲ್ಲಿ ಭಾರತ ಪರ ಅಂಡರ್‌ 19 ತಂಡಕ್ಕೂ ಅರ್ಜುನ್ ತೆಂಡುಲ್ಕರ್ ಪಾದಾರ್ಪಣೆ ಮಾಡಿದ್ದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆಲವೇ ದಿನದಲ್ಲಿ ಸ್ಮೃತಿ ಮಂಧನಾ ಮದುವೆ ಆಘಾತದಿಂದ ಹೊರಬಂದಿದ್ದೇಗೆ? 3 ವರ್ಷ ಹಿಂದೆ ಹೇಳಿದ್ದ ಟಿಪ್ಸ್
ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟಿ20 ಪಂದ್ಯಕ್ಕೂ ಮೊದಲು ಗೊಂದಲಕ್ಕೆ ಸಿಲುಕಿದ ಗೌತಮ್ ಗಂಭೀರ್!