IPL Auction 2023 ಕೊನೆಗೂ ಕನ್ನಡಿಗನ ಖರೀದಿಸಿದ ಆರ್‌ಸಿಬಿ!

Published : Dec 23, 2022, 07:33 PM ISTUpdated : Dec 23, 2022, 07:38 PM IST
IPL Auction 2023 ಕೊನೆಗೂ ಕನ್ನಡಿಗನ ಖರೀದಿಸಿದ ಆರ್‌ಸಿಬಿ!

ಸಾರಾಂಶ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕೊನೆಗೂ ಒರ್ವ ಕನ್ನಡಿಗ ಸೇರಿಕೊಂಡಿದ್ದಾರೆ. ಮಿನಿ ಹರಾಜಿನಲ್ಲಿ  ಕರ್ನಾಟಕದ ಪ್ರಮುಖ ಆಟಗಾರರ ಖರೀದಿಗೆ ಆಸಕ್ತಿ ತೋರದ ಆರ್‌ಸಿಬಿ ಕೊನೆಗೂ ಯುವ ಪ್ರತಿಭಾನ್ವಿತ ಕ್ರಿಕೆಟಿಗನಿಗೆ ಮಣೆ ಹಾಕಿದೆ.

ಕೊಚ್ಚಿ(ಡಿ.23): ಐಪಿಎಲ್ 2023ಕ್ಕೆ ತಯಾರಾಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಒಬ್ಬನೇ ಒಬ್ಬ ಕನ್ನಡಿಗನಿಲ್ಲ ಅನ್ನೋ ಕೊರಗನ್ನು ತಂಡ ನೀಗಿಸಿದೆ. ಐಪಿಎಲ್ ಮನಿ ಹರಾಜಿನಲ್ಲಿ ಕರ್ನಾಟಕದ ಮಯಾಂಕ್ ಅಗರ್ವಾಲ್, ಮನೀಶ್ ಪಾಂಡೆ ಸೇರಿದಂತೆ ಟೀಂ ಇಂಡಿಯಾಗೆ ಆಡಿದ ಪ್ರಮುಖ ಆಟಗಾರರನ್ನು ಖರೀದಿಸಲು ನಿರಾಸಕ್ತಿ ತೋರಿದ್ದ ಆರ್‌ಸಿಬಿ ಕೊನೆಗೆ ಪ್ರತಿಭಾನ್ವಿತ ಯುವ ಕ್ರಿಕೆಟಿಗ ಮನೋಜ್ ಭಂಡಾಜೆ ಮಣೆ ಹಾಕಿದೆ. ಸದ್ಯ ಆರ್‌ಸಿಬಿ ತಂಡದಲ್ಲಿರುವ ಏಕೈಕ ಕನ್ನಡಿಗ ಅನ್ನೋ ಹೆಗ್ಗಳಿಕೆಗೆ ಮನೋಜ್ ಭಂಡಾಜೆ ಪಾತ್ರರಾಗಿದ್ದಾರೆ. ಮನೋಜ್ ಭಂಡಾಜೆ ಮೂಲ ಬೆಲೆ 20 ಲಕ್ಷ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಕೊಂಡಿದ್ದಾರೆ.

ಈ ಬಾರಿಯ ಹರಾಜಿನಲ್ಲಿ ಆರ್‌ಸಿಬಿ ತಂಡ ನಿರೀಕ್ಷಿತ ಮಟ್ಟದಲ್ಲಿ ಆಟಗಾರರ ಖರೀದಿಗೆ ಆಸಕ್ತಿ ತೋರಿಲ್ಲ. ಇದು ಅಭಿಮಾನಿಗಳ ಆಕ್ರೋಶಕ್ಕೂ ಕಾರಣವಾಗಿದೆ. ಆದರೆ ಮನೋಜ್ ಭಂಡಾಜೆ ಖರೀದಿ ಮೂಲಕ  ಅಪ್ಪಟ ಕನ್ನಡ ಮಣ್ಣಿನ ಸೊಗಡಿನ ಆಟಗಾರನೊಬ್ಬ ತಂಡ ಸೇರಿಕೊಂಡ ಸಮಾಧಾನ ಇದೀಗ ಅಭಿಮಾನಿಗಳಿಗೆ ಆಗಿದೆ. ರಾಯಚೂರಿನ ಮನೋಜ್ ಭಂಡಾಜೆ ಆಲ್ರೌಂಡರ್ ಕ್ರಿಕೆಟಿಗನಾಗಿ ದೇಶಿ ಟೂರ್ನಿಗಳಲ್ಲಿ ಮಿಂಚಿದ್ದಾರೆ.

IPL Auction 2023 ನಾಮಕಾವಾಸ್ತೆಗೆ ಬಿಡ್ಡಿಂಗ್ ಮಾಡಿ ತೆಪ್ಪಗೆ ಕೂತ ಆರ್‌ಸಿಬಿ ಫುಲ್ ಟ್ರೋಲ್!

ಎಡಗೈ ಬ್ಯಾಟ್ಸ್‌ಮನ್ ಹಾಗೂ ಬಲಗೈ ಮೀಡಿಯಂ ಫಾಸ್ಟ್ ಬೌಲರ್ ಆಗಿರುವ ಮನೋಜ್ ಭಂಡಾಜೆ, 2019ರಲ್ಲಿ ಸೈಯದ್ ಮುಷ್ತಾಕ್ ಆಲಿ ಟೂರ್ನಿ ಮೂಲಕ ದೇಶಿಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 

ಮನೋಜ್ ಭಂಡಾಜೆ ಬೆನ್ನಲ್ಲೇ ಮತ್ತೊರ್ವ ಯುವ ಕ್ರಿಕೆಟಿಗ, ಉತ್ತರಖಂಡದ ರಾಜನ್ ಕುಮಾರ್‌ಗೆ ಆರ್‌ಸಿಬಿ ಮಣೆ ಹಾಕಿದೆ. 20 ಲಕ್ಷ ರೂಪಾಯಿ ಮೂಲ ಬೆಲೆಯ ರಾಜನ್ ಕುಮಾರ್‌ಗೆ 70 ಲಕ್ಷ ರೂಪಾಯಿ ನೀಡಿ ಆರ್‌ಸಿಬಿ ಖರೀದಿಸಿದೆ. ಇನ್ನು ಅಲ್ರೌಂಡರ್ ಸೋನು ಯಾದವ್ ಅವರನ್ನು ಮೂಲ ಬೆಲೆ 20 ಲಕ್ಷ ರೂಪಾಯಿ ನೀಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿಸಿದೆ.

ಐಪಿಎಲ್ 2023 ಹರಾಜಿನಲ್ಲಿ ಆರ್‌ಸಿಬಿ ಖರೀದಿಸಿದ ಆಟಗಾರರ ವಿವರ

ವಿಲ್ ಜಾಕ್ಸ್, 3.2 ಕೋಟಿ ರೂಪಾಯಿ
ರೀಸ್ ಟಾಪ್ಲೆ, 1.90 ಕೋಟಿ ರೂಪಾಯಿ
ಹಿಮಾಂಶು ಶರ್ಮಾ, 20 ಲಕ್ಷ ರೂಪಾಯಿ
ಮನೋಜ್ ಭಂಡಾಜೆ, 20 ಲಕ್ಷ ರೂಪಾಯಿ
ರಾಜನ್ ಕುಮಾರ್, 70 ಲಕ್ಷ ರೂಪಾಯಿ
ಸೋನು ಯಾದವ್, 20 ಲಕ್ಷ ರೂಪಾಯಿ

ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ನಗುವಿಗೆ ಕ್ಲೀನ್ ಬೋಲ್ಡ್, ಹರಾಜಿನಲ್ಲಿ ವೈರಲ್ ವಿಡಿಯೋ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಬಾಕಿ ಉಳಿದಿರುವುದು 2.55 ಕೋಟಿ ರೂಪಾಯಿ ಮಾತ್ರ. ಈ ಹಣದಲ್ಲಿ ಆಟಾಗರರ ಖರೀದಿ ಮಾಡಬೇಕಿದೆ. ಆರಂಭದಿಂದಲೂ ಬಹುಬೇಡಿಕೆಯ ಆಟಗಾರರ ಖರೀದಿಗೆ ಆರ್‌ಸಿಬಿ ಹಿಂದೇಟು ಹಾಕಿತ್ತು. ಹಣದ ಅಭಾವದಿಂದ ಆರ್‌ಸಿಬಿ ಐಪಿಎಲ್ ಹರಾಜಿನಲ್ಲಿ ಸುಮ್ಮನೆ ಕುಳಿತಿತ್ತು. ಇದರಿಂದ ಸಾಮಾಜಿಕ ಜಾಲತಾದಲ್ಲಿ ಟ್ರೋಲ್ ಆಯಿತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?