
ಬೆಂಗಳೂರು (ಮೇ.30) ಇಂಡಿಯನ್ ಪ್ರೀಮಿಯರ್ ಲೀಗ್ನ (IPL) ಫೈನಲ್ನಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್(Bangalore Royal Challengers) 2ನೇ ಬಾರಿಗೆ ವಿಜೇತರಾದರೆ ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಲು ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.
ಐಪಿಎಲ್ ಫೈನಲ್ಗೆ ಸತತ ಎರಡನೇ ಬಾರಿ ಆರ್ಸಿಬಿ(RCB) ಪ್ರವೇಶಿಸಿ, ಭಾನುವಾರ ಫೈನಲ್ ಪಂದ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರಿಗೆ ಪೊಲೀಸರು ಕೆಲ ಸೂಚನೆಗಳನ್ನು ನೀಡಿದ್ದಾರೆ. ಕಳೆದ ಬಾರಿಯ ಚಿನ್ನಸ್ವಾಮಿ ಕ್ರೀಡಾಂಗಣ(Chinnaswamy Stadium)ದ ಬಳಿ ಕಾಲ್ತುಳಿತದಲ್ಲಿ 11 ಆರ್ಸಿಬಿ ಅಭಿಮಾನಿಗಳ ಸಾವಿನ ಕರಾಳ ದುರಂತ ಹಿನ್ನಲೆಯಲ್ಲಿ ಮುಂಜಾಗ್ರತೆವಹಿಸಿರುವ ಪೊಲೀಸರು, ಪ್ರಸಕ್ತ ಸಾಲಿನಲ್ಲಿ ಐಪಿಎಲ್ ಗೆದ್ದರೆ ಆರ್ಸಿಬಿ ಅಭಿಮಾನಿಗಳ ಸಡಗರಕ್ಕೆ ಬ್ರೇಕ್ ಹಾಕಿದ್ದಾರೆ.
ಫೈನಲ್ ಪಂದ್ಯದ ಫಲಿತಾಂಶ ನಂತರ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆ ಇಲ್ಲ
ರಸ್ತೆಗಳಿಗೆ ಮುಖಮಾಡಿರುವ ಎಲ್ಇಡಿ ವಾಲ್ಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಅನುಮತಿ ಇಲ್ಲದೆ ಅಳವಡಿಸಬಾರದು.
ಪಟಾಕಿ ಸಿಡಿಸಬಾರದು, ಅಪಾಯಕಾರಿ ವಸ್ತುಗಳನ್ನು ಬಳಸಬಾರದು. ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಶಾಂತಿ ಮತ್ತು ಶಿಸ್ತು ಕಾಪಾಡುವುದು.
ಸಂಚಾರ ಪೊಲೀಸರ ನೀಡುವ ಸಲಹೆ-ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು.
ಬೈಕ್ ರ್ಯಾಲಿ, ಅತಿವೇಗ ಚಾಲನೆ, ಸ್ಟಂಟ್, ಹಾರ್ನ್ ದುರುಪಯೋಗ ಮತ್ತು ರಸ್ತೆ ತಡೆ ನಿಷೇಧ
ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಅಶಾಂತಿ ಸೃಷ್ಟಿಸುವುದು, ಜಗಳವಾಡುವುದು ಅಥವಾ ಅಸಭ್ಯ ವರ್ತನೆಗೆ ತಡೆ
ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್, ದ್ವೇಷಪೂರಿತ ಸಂದೇಶ ಅಥವಾ ವದಂತಿಗಳಿಗೆ ಬ್ರೇಕ್
ಪಂದ್ಯ ಫಲಿತಾಂಶದ ಹೆಸರಿನಲ್ಲಿ ಇತರ ತಂಡದ ಅಭಿಮಾನಿಗಳನ್ನು ಪ್ರಚೋದಿಸುವುದು, ನಿಂದಿಸುವುದು ಅಥವಾ ಜಗಳಕ್ಕೆ ಕಾರಣವಾಗುವಂತೆ ವರ್ತಿಸಬಾರದು
ಕಾನೂನು-ಸುವ್ಯವಸ್ಥೆ, ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂಬುದನ್ನು ಮರೆಯಬಾರದು
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.