
ಮುಂಬೈ(ಏ.21): ಐಪಿಎಲ್ ಟೂರ್ನಿ 15ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಹರ್ಭಜನ್ ಸಿಂಗ್ ಬದಲು ಕಮಲೇಶ್ ನಾಗರಕೋಟಿ ತಂಡ ಸೇರಿಕೊಂಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ ಆಲ್ರೌಂಡರ್ ಡ್ವೇನ್ ಬ್ರಾವೋಗೆ ವಿಶ್ರಾಂತಿ ನೀಡಲಾಗಿದೆ. ಬ್ರಾವೋ ಬದಲು ಎನ್ಗಿಡಿ ತಂಡ ಸೇರಿಕೊಂಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಸತತ 2 ಗೆಲುವು ಕಾಣೋ ಮೂಲಕ ಆತ್ಮವಿಶ್ವಾಸದಲ್ಲಿದೆ. ಇದೀಗ ಕೆಕೆಆರ್ ವಿರುದ್ಧವೂ ಗೆಲವು ಸಾಧಿಸಿ ಹ್ಯಾಟ್ರಿಕ್ ಕನಸು ನನಸು ಮಾಡಲು ಸಜ್ಜಾಗಿದೆ. ಇತ್ತ ಕೆಕಆರ್ ಆಡಿದ 3 ಪಂದ್ಯದಲ್ಲಿ ಕೇವಲ 1 ಗೆಲುವು ಕಂಡಿದೆ. ಹೀಗಾಗಿ ಕೆಕಆರ್ ಭರ್ಜರಿ ಕಮ್ಬ್ಯಾಕ್ ಎದರುನೋಡುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.