ಬಿಸಿಸಿಐ ಚಾಟಿಗೆ ಬಗ್ಗಿದ ಶ್ರೇಯಸ್‌ ಅಯ್ಯರ್, ಇಶಾನ್‌ ಕಿಶನ್!

Published : Aug 14, 2024, 03:08 PM IST
ಬಿಸಿಸಿಐ ಚಾಟಿಗೆ ಬಗ್ಗಿದ ಶ್ರೇಯಸ್‌ ಅಯ್ಯರ್, ಇಶಾನ್‌ ಕಿಶನ್!

ಸಾರಾಂಶ

ಟೀಂ ಇಂಡಿಯಾ ಕ್ರಿಕೆಟಿಗರಾದ ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್ ಕೊನೆಗೂ ಬಿಸಿಸಿಐ ಸಲಹೆ ಪಾಲಿಸಲು ಮುಂದಾಗಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ನವದೆಹಲಿ: ಬಿಸಿಸಿಐ ಮಾತು ಧಿಕ್ಕರಿಸಿ ದೇಸಿ ಕ್ರಿಕೆಟ್‌ನಿಂದ ದೂರ ಉಳಿದಿದ್ದ ಶ್ರೇಯಸ್‌ ಅಯ್ಯರ್‌ ಹಾಗೂ ಇಶಾನ್‌ ಕಿಶನ್‌ಗೆ ಬಿಸಿ ತಟ್ಟಿದ್ದು, ಭಾರತ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಬಿಸಿಸಿಐ ಮಾತು ಕೇಳಬೇಕು ಎನ್ನುವ ಅರಿವಾಗಿದೆ.

ಕಳೆದ ಋತುವಿನ ರಣಜಿ ಟ್ರೋಫಿಯಲ್ಲಿ ಆಡುವಂತೆ ಸೂಚಿಸಿದ್ದರೂ, ಮಾತು ಕೇಳದೆ ಐಪಿಎಲ್‌ ತಯಾರಿಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಈ ಬಾರಿ ತಮಿಳುನಾಡು ಕ್ರಿಕೆಟ್‌ ಸಂಸ್ಥೆ ಆಯೋಜಿಸಲಿರುವ ಬುಚ್ಚಿ ಬಾಬು ಆಹ್ವಾನಿತ ಪ್ರಥಮ ದರ್ಜೆ ಟೂರ್ನಿಯಲ್ಲಿ ಆಡಲಿದ್ದಾರೆ. ಶ್ರೇಯಸ್‌ ಮುಂಬೈ ತಂಡದ ಪರ ಆಡಲಿದ್ದು, ಇಶಾನ್‌ ಜಾರ್ಖಂಡ್‌ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಒಲಿಂಪಿಕ್ ಗೋಲ್ಡನ್ ಬಾಯ್‌ ಯುಲೋಗೆ ಜೀವನಪೂರ್ತಿ ಉಚಿತ ಊಟ! ಐಶಾರಾಮಿ ಮನೆ ಗಿಫ್ಟ್

ಶ್ರೇಯಸ್ ಹಾಗೂ ಕಿಶನ್‌ ಇಬ್ಬರನ್ನೂ ಬಿಸಿಸಿಐ ತನ್ನ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಹೊರಗಿಟ್ಟಿದ್ದು, ಟಿ20 ವಿಶ್ವಕಪ್‌ಗೂ ಕಡೆಗಣಿಸಿತ್ತು. ಕೆಕೆಆರ್‌ ತಂಡ ಬಿಟ್ಟು ಗಂಭೀರ್‌ ಭಾರತ ತಂಡದ ಕೋಚ್‌ ಆಗಿ ಬಂದ ಮೇಲೆ, ಕೆಕೆಆರ್‌ ನಾಯಕ ಶ್ರೇಯಸ್‌ರನ್ನು ಲಂಕಾ ಪ್ರವಾಸಕ್ಕೆ ಆಯ್ಕೆ ಮಾಡಲಾಯಿತು. ಆದರೆ, ಕಿಶನ್‌ ಬಗ್ಗೆ ಬಿಸಿಸಿಐಗೆ ಈಗಲೂ ಸಮಾಧಾನ ಇಲ್ಲ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್ 5ರಿಂದ ಬೆಂಗ್ಳೂರಲ್ಲಿ ದುಲೀಪ್‌ ಟ್ರೋಫಿ ಕ್ರಿಕೆಟ್‌: ಸ್ಟಾರ್‌ ಆಟಗಾರರು ಕಣಕ್ಕೆ

ಬೆಂಗಳೂರು: ಈ ಬಾರಿ ದುಲೀಪ್‌ ಟ್ರೋಫಿ ದೇಸಿ ಕ್ರಿಕೆಟ್‌ ಟೂರ್ನಿಗೆ ಸೆ.5ರಂದು ಬೆಂಗಳೂರಿನಲ್ಲಿ ಚಾಲನೆ ಸಿಗಲಿದೆ. 4 ತಂಡಗಳ ನಡುವಿನ ಟೂರ್ನಿ ಈ ಮೊದಲು ಆಂಧ್ರಪ್ರದೇಶದ ಅನಂತಪುರದಲ್ಲಿ ನಿಗದಿಯಾಗಿತ್ತು. ಆದರೆ ಮೊದಲ ಪಂದ್ಯದಲ್ಲಿ ತಾರಾ ಆಟಗಾರರು ಪಾಲ್ಗೊಳ್ಳುವ ಕಾರಣ ಪಂದ್ಯವನ್ನು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ಬಿಸಿಸಿಐ ನಿರ್ಧರಿಸಿದೆ.

ಈ ಬಾರಿ ಟೂರ್ನಿಯಲ್ಲಿ ಹಲವು ತಾರಾ ಆಟಗಾರರು ಕಣಕ್ಕಿಳಿಯುವ ನಿರೀಕ್ಷೆಯಿದ್ದರೂ, ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಗೈರಾಗಲಿದ್ದಾರೆ. ವೇಗಿ ಜಸ್‌ಪ್ರೀತ್‌ ಬುಮ್ರಾ, ಸ್ಪಿನ್ನರ್‌ ಆರ್‌.ಅಶ್ವಿನ್‌ ಕೂಡಾ ಟೂರ್ನಿಗೆ ಅಲಭ್ಯರಾಗಲಿದ್ದಾರೆ. ಇವರೆಲ್ಲರೂ ಸೆ.19ರಿಂದ ಬಾಂಗ್ಲಾದೇಶ ವಿರುದ್ಧ ಆರಂಭಗೊಳ್ಳಲಿರುವ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಪಾಲ್ಗೊಳ್ಳಲಿರುವ ಕಾರಣ ದೇಸಿ ಟೂರ್ನಿಯಿಂದ ವಿನಾಯಿತಿ ನೀಡಲಾಗಿದೆ.

ಸಚಿನ್, ಸೆಹ್ವಾಗ್, ಯುವಿ ಆಟ ಕಣ್ತುಂಬಿಕೊಳ್ಳಲು ರೆಡಿಯಾಗಿ; ಅಭಿಮಾನಿಗಳಿಗೆ ಬಿಸಿಸಿಐ ಗುಡ್‌ ನ್ಯೂಸ್..?

ಉಳಿದಂತೆ ಕೆ.ಎಲ್‌.ರಾಹುಲ್‌, ರಿಷಭ್‌ ಪಂತ್‌, ಸೂರ್ಯಕುಮಾರ್‌ ಯಾದವ್‌, ರವೀಂದ್ರ ಜಡೇಜಾ, ಶುಭ್‌ಮನ್‌ ಗಿಲ್‌, ಶ್ರೇಯಸ್‌ ಅಯ್ಯರ್‌, ಕುಲ್ದೀಪ್‌ ಯಾದವ್‌ ಸೇರಿ ಹಲವು ಆಟಗಾರರು ದುಲೀಪ್‌ ಟ್ರೋಫಿಯಲ್ಲಿ ಆಡಲಿದ್ದಾರೆ ಎಂದು ತಿಳಿದುಬಂದಿದೆ.

ಶಮಿ ಕಮ್‌ಬ್ಯಾಕ್‌?: ಕಳೆದ ವರ್ಷ ಏಕದಿನ ವಿಶ್ವಕಪ್‌ನಲ್ಲಿ ಕೊನೆ ಬಾರಿ ಭಾರತವನ್ನು ಪ್ರತಿನಿಧಿಸಿದ್ದ ವೇಗಿ ಮೊಹಮದ್‌ ಶಮಿ ಟೂರ್ನಿ ಮೂಲಕ ಮತ್ತೆ ಕಮ್‌ಬ್ಯಾಕ್‌ ಮಾಡುವ ನಿರೀಕ್ಷೆಯಿದೆ. ದೀರ್ಘ ಕಾಲದಿಂದ ಭಾರತ ತಂಡ ಹಾಗೂ ದೇಸಿ ಕ್ರಿಕೆಟ್‌ನಿಂದ ದೂರ ಉಳಿದಿರುವ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಇಶಾನ್‌ ಕಿಶನ್‌ ಕೂಡಾ ಆಯ್ಕೆಗೆ ಲಭ್ಯವಿರುವ ಬಗ್ಗೆ ವರದಿಯಾಗಿದೆ.

ಈ ಸಲ ವಲಯಗಳ ಬದಲು ಭಾರತದ 4 ತಂಡದ ಸ್ಪರ್ಧೆ

ಸಾಮಾನ್ಯವಾಗಿ ದುಲೀಪ್‌ ಟ್ರೋಫಿ 6 ವಲಯಗಳ ನಡುವೆ ನಡೆಯುತ್ತವೆ. ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ, ಕೇಂದ್ರ ಹಾಗೂ ಈಶಾನ್ಯ ತಂಡಗಳು ಕಣಕ್ಕಿಳಿಯುತ್ತವೆ. ಆದರೆ ಈ ಬಾರಿ ತಂಡಗಳ ಸಂಖ್ಯೆ 4ಕ್ಕೆ ಇಳಿಸಲಾಗಿದೆ. ಭಾರತ ‘ಎ’, ಭಾರತ ‘ಬಿ’, ಭಾರತ ‘ಸಿ’ ಹಾಗೂ ಭಾರತ ‘ಡಿ’ ಎಂದು ವಿಂಗಡಿಸಲಾಗಿದೆ. ಆಟಗಾರರನ್ನು ಬಿಸಿಸಿಐ ಆಯ್ಕೆ ಸಮಿತಿಯೇ ಆಯ್ಕೆ ಮಾಡಲಿದೆ. ಕಳೆದ ಬಾರಿ ನಡೆದಿದ್ದ ಟೂರ್ನಿಯಲ್ಲಿ ದಕ್ಷಿಣ ವಲಯ ತಂಡ ಚಾಂಪಿಯನ್‌ ಆಗಿತ್ತು. ಫೈನಲ್‌ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಿತ್ತು.

ಸಚಿನ್, ಸೆಹ್ವಾಗ್, ಯುವಿ ಆಟ ಕಣ್ತುಂಬಿಕೊಳ್ಳಲು ರೆಡಿಯಾಗಿ; ಅಭಿಮಾನಿಗಳಿಗೆ ಬಿಸಿಸಿಐ ಗುಡ್‌ ನ್ಯೂಸ್..?

ಟೂರ್ನಿ ಮಾದರಿ ಹೇಗೆ?

ಟೂರ್ನಿಯ 4 ತಂಡಗಳು ರೌಂಡ್‌ ರಾಬಿನ್‌ ಮಾದರಿಯಲ್ಲಿ 1 ಬಾರಿ ಪರಸ್ಪರ ಮುಖಾಮುಖಿಯಾಗಲಿವೆ. ಲೀಗ್‌ ಹಂತದ ಮುಕ್ತಾಯಕ್ಕೆ ಅಗ್ರಸ್ಥಾನ ಪಡೆದ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಗುತ್ತದೆ. ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳು ನಡೆಯಲಿವೆ.

ಟೂರ್ನಿ ನೋಡಿ ಬಾಂಗ್ಲಾ ಸರಣಿಗೆ ತಂಡದ ಆಯ್ಕೆ

ದುಲೀಪ್‌ ಟ್ರೋಫಿ ಸೆ.22ಕ್ಕೆ ಮುಕ್ತಾಯಗೊಳ್ಳಲಿದೆ. ಇದಕ್ಕೂ ಮುನ್ನವೇ ಅಂದರೆ ವಿರುದ್ಧ ಸೆ.19ರಿಂದ ಬಾಂಗ್ಲಾ ಸರಣಿ ಆರಂಭಗೊಳ್ಳಲಿದೆ. ದುಲೀಪ್‌ ಟ್ರೋಫಿಯ ಮೊದಲ 2 ಹಂತದ ಪಂದ್ಯಗಳಲ್ಲಿ ನೀಡಿದ ಪ್ರದರ್ಶನ ನೋಡಿ ಬಾಂಗ್ಲಾ ಸರಣಿಗೆ ತಂಡ ಆಯ್ಕೆ ಮಾಡಿಕೊಳ್ಳಲು ಬಿಸಿಸಿಐ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

WPLನ ಹೊಸ ತಾರೆ: ಯಾರು ಈ 16ರ ಹರೆಯದ ಚೋಟಿ ಶಫಾಲಿ
ಧನಶ್ರೀ ವರ್ಮಾ ಜತೆಗಿನ ವಿಚ್ಛೇದನದ ಬಳಿಕ ಯಜುವೇಂದ್ರ ಚಾಹಲ್‌ಗೆ ಇನ್ನೊಂದು ಆಘಾತ!