Shreyas Iyer: ರೋಹಿತ್ ಅಲ್ಲ, ಆತನೇ ನನಗೆ ಬೆಂಬಲ ನೀಡಿದ್ದು! ಅಯ್ಯರ್ ಬಿಚ್ಚಿಟ್ಟ ಆ ಒಂದು ರಹಸ್ಯ ಏನು ಗೊತ್ತಾ?

Published : Jul 01, 2026, 02:27 PM IST
Shreyas Iyer

ಸಾರಾಂಶ

ಟಿ-20 ತಂಡದ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್‌ರಿಂದ ಶ್ರೇಯಸ್ ಅಯ್ಯರ್ ವಹಿಸಿಕೊಂಡಿದ್ದಾರೆ. ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ, ಆ ಇಬ್ಬರಿಂದ ಪಡೆದ ಅಮೂಲ್ಯ ಮಾರ್ಗದರ್ಶನವು ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಶ್ರೇಯಸ್ ಬಹಿರಂಗಪಡಿಸಿದ್ದಾರೆ. ಅವರು ಯಾರು ಗೊತ್ತಾ?

ಕಳೆದ ಬಾರಿ ಟಿ-20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಸೂರ್ಯಕುಮಾರ ಬದಲಿಗೆ ಶ್ರೇಯಸ್‌ ಅವರಿಗೆ ಟೀಮ್‌ ಇಂಡಿಯಾ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು. ಇದೀಗ ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಶ್ರೇಯಸ್ ಪ್ರಮುಖ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ಹಾಗಾದರೆ, ಇಲ್ಲಿ ಶ್ರೇಯಸ್ ರೋಹಿತ್‌ ಹಾಗೂ ಸೂರ್ಯಕುಮಾರ ಹೆಸರು ಉಲ್ಲೇಖ ಮಾಡಿದ್ದಾದರೂ ಏಕೆ? ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ಕುಸಿದ ಸೂರ್ಯ ಫಾರ್ಮ!

ಈ ಹಿಂದೆ ತಂಡವನ್ನು ಟಿ20 ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ಸೂರ್ಯಕುಮಾರ್ ಯಾದವ್ ಅವರ ಬದಲಿಗೆ ಶ್ರೇಯಸ್ ಅವರಿಗೆ ಟೀಮ್ ಇಂಡಿಯಾದ ಜವಾಬ್ದಾರಿ ನೀಡಲಾಯಿತು. ಸೂರ್ಯಕುಮಾರ್ ಅವರ ಬ್ಯಾಟಿಂಗ್ ಫಾರ್ಮ್ ಕುಸಿತ ಮತ್ತು ಆಯ್ಕೆ ಸಮಿತಿಯ ದೀರ್ಘಾವಧಿಯ ಪ್ರಾಜೆಕ್ಟ್ ಗಮನದಲ್ಲಿಟ್ಟುಕೊಂಡು ಈ ನಾಯಕತ್ವ ಬದಲಾವಣೆ ಮಾಡಲಾಗಿದೆ ಎಂದು ಕೆಲ ಮೂಲಗಳು ತಿಳಿಸಿವೆ. ಆದ್ದರಿಂದ ತಂಡದಲ್ಲಿ ಹೊಸ ಮುಖಗಳ ಉದಯವಾಗಲಿರುವುದು ಈಗ ಖಚಿತವಾಗಿದೆ.

ಶ್ರೇಯಸ್‌ ಹೇಳಿದ್ದೇನು?

ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಪ್ರವಾಸಕ್ಕೆ ಹೊರಡುವ ಮೊದಲು ಹೊಸ ಬದಲಾವಣೆಗಳೊಂದಿಗೆ ನಾಯಕತ್ವ ವಹಿಸಿಕೊಳ್ಳುತ್ತಿರುವ ಶ್ರೇಯಸ್ ಅಯ್ಯರ್, ಮಾಜಿ ಟಿ20 ನಾಯಕರಾದ ಸೂರ್ಯಕುಮಾರ್ ಯಾದವ್ ಹಾಗೂ ಹಿಟ್‌ ಮ್ಯಾನ್ ರೋಹಿತ್ ಶರ್ಮಾ ಕುರಿತು ಅಚ್ಚರಿ ಹೇಳಿಕೆಯೊಂದನ್ನು ಹಂಚಿಕೊಂಡಿದ್ದಾರೆ. ಅದೇನು ಎಂದು ನೋಡೋಣ ಬನ್ನಿ.

ಸಂದರ್ಶನದಲ್ಲಿ ಶ್ರೇಯಸ್‌ ಹೇಳಿದ್ದಿಷ್ಟೇ!

ಬಿಸಿಸಿಐ ಟಿವಿಗೆ ನೀಡಿದ ಸಂದರ್ಶನದಲ್ಲಿ ಶ್ರೇಯಸ್ ಅಯ್ಯರ್, ದೇಶೀಯ ಕ್ರಿಕೆಟ್‌ನೊಂದಿಗೆ ಸೂರ್ಯಕುಮಾರ್ ಯಾದವ್ ಅವರೊಂದಿಗೆ ಬಹಳ ನಿಕಟ ಸಂಪರ್ಕ ಹೊಂದಿದ್ದೇನೆ. ಅಲ್ಲದೇ ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಸೂರ್ಯಕುಮಾರ್ ಯಾದವ್ ತಮಗೆ ಅಮೂಲ್ಯ ಮಾರ್ಗದರ್ಶನ ನೀಡಿದ್ದರು ಎಂದು ಹೇಳುವ ಮೂಲಕ ಶ್ರೇಯಸ್ ಹೇಳಿಕೊಂಡಿದ್ದಾರೆ.

ರೋಹಿತ್‌ ಕುರಿತು ಹೇಳಿದ್ದೇನು?

ತಂಡದ ನಿರ್ವಹಣೆ ಹೇಗೆ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ವಿಭಿನ್ನ ಕಷ್ಟಕರ ಸಂದರ್ಭಗಳಲ್ಲಿ ಆಟಗಾರರ ಮನಸ್ಥಿತಿ ಹೇಗೆ ನಿಭಾಯಿಸಬೇಕು ಎಂಬುದರ ಕುರಿತು ಸೂರ್ಯ ಮತ್ತು ರೋಹಿತ್ ಬಹಳ ಮುಖ್ಯ ಮಾಹಿತಿ ನೀಡಿದ್ದಾರೆ. ಅವರು ನೀಡಿದ ಮಾರ್ಗದರ್ಶನ ನನ್ನ ಆತ್ಮವಿಶ್ವಾಸ ಹೆಚ್ಚಿಸಲು ಸಹಾಯ ಮಾಡಿದೆ ಎಂದು ಶ್ರೇಯಸ್ ಅಯ್ಯರ್‌ ಹೇಳಿದ್ದಾರೆ.

ನವೋಧ್ಯಾಯದ ಆರಂಭ!

ಗೌತಮ್ ಗಂಭೀರ್ ಅವರ ಪಾತ್ರವನ್ನು ಉಲ್ಲೇಖಿಸಿ ಮಾತನಾಡಿದ ಶ್ರೇಯಸ್, ನಾವು ಈ ಹಿಂದೆ ವಿಶ್ವ ಚಾಂಪಿಯನ್ ಆಗಿದ್ದೆವೆ, ಅದೂ ನಿಜ. ಆದರೆ ಈಗ ಹೊಸ ಅಧ್ಯಾಯ ಆರಂಭವಾಗುತ್ತಿದೆ. ನನ್ನ ನಾಯಕತ್ವದಲ್ಲಿ, ನಾವು ಮತ್ತೊಮ್ಮೆ 'ಶೂನ್ಯ'ದಿಂದ ಪ್ರಾರಂಭಿಸಿ ಯಶ ಗಳಿಸುತ್ತೇವೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬರುವ ಟಿ-20 ವಿಶ್ವಕಪ್‌ನಲ್ಲಿ ಭಾರತ ಹೇಗೆ ಪ್ರದರ್ಶನ ತೋರಲಿದೆ ಎನ್ನುವುದರ ಮೇಲೆ ಅಭಿಮಾನಿಗಳ ಕಣ್ಣು ನೆಟ್ಟಿವೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾರ್ಪೋರೇಟ್ ಕಿಂಗ್ ಆಗಲು ಹೊರಟ ಕೊಹ್ಲಿ, ಯುವರಾಜ್ ಬೆಂಬಲಿತ ಸ್ಪೋರ್ಟ್ಸ್ ಸ್ಟಾರ್ಟ್‌ಅಪ್ ಖರೀದಿಗೆ ತಯಾರಿ
ಭಾರತ ಎದುರಿನ ಮೊದಲ ಟಿ20 ಪಂದ್ಯಕ್ಕೆ ಬಲಿಷ್ಠ ಇಂಗ್ಲೆಂಡ್ ಪ್ಲೇಯಿಂಗ್ XI ಪ್ರಕಟ; 2 ಮೇಜರ್ ಚೇಂಜ್, ಜೋಫ್ರಾ ಆರ್ಚರ್‌ಗಿಲ್ಲ ಸ್ಥಾನ!