
ಬೆಂಗಳೂರು(ಜು.11): ಕಳೆದೆರೆಡು ವರ್ಷಗಳಿಂದ ಟೀಂ ಇಂಡಿಯಾಗೆ ಇಂಜುರಿಯದ್ದೇ ದೊಡ್ಡ ಸಮಸ್ಯೆಯಾಗಿದೆ. T20 ವಿಶ್ವಕಪ್ ಮತ್ತು WTC ಫೈನಲ್ ವೇಳೆಯು ಇದೇ ಸಮಸ್ಯೆ ತಂಡವನ್ನ ಕಾಡಿತ್ತು. ಈಗ ಏಕದಿನ ವಿಶ್ವಕಪ್ ಟೂರ್ನಿ ಹತ್ತಿರವಾಗ್ತಿದ್ರು ಪ್ರಮುಖ ಆಟಗಾರರಿನ್ನು, ಇಂಜುರಿಯಿಂದ ಚೇತರಿಸಿಕೊಂಡಿಲ್ಲ. ಆದ್ರೆ, ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ, ಸದ್ಯದಲ್ಲೇ ತಂಡಕ್ಕೆ ವಾಪಸ್ಸಾಗಲಿದ್ದಾರೆ.
ಇಂಜುರಿಯಿಂದಾಗಿ ಕಳೆದೊಂದು ವರ್ಷದಿಂದ ಜಸ್ಪ್ರೀತ್ ಬುಮ್ರಾ ತಂಡದಿಂದ ಹೊರಗುಳಿದಿದ್ದಾರೆ. ಕಳೆದ ವರ್ಷ ಜೂನ್ನಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ್ದ ಏಕದಿನ ಪಂದ್ಯವೇ ಲಾಸ್ಟ್.! ಅದಾದ ನಂತರ ಬುಮ್ರಾ ಮತ್ತೆ ಬಾಲ್ ಮುಟ್ಟಿಲ್ಲ. ಏಷ್ಯಾಕಪ್, T20 ವಿಶ್ವಕಪ್ ಟೂರ್ನಿಗಳಲ್ಲಿ ಬುಮ್ರಾ ಅಲಭ್ಯತೆ ತಂಡಕ್ಕೆ ಕಾಡಿತ್ತು. ಆದ್ರೀಗ, ಬುಮ್ರಾ ಕಮ್ಬ್ಯಾಕ್ಗೆ ಮುಹೂರ್ತ ನಿಗದಿಯಾಗಿದೆ.
ಕಮ್ಬ್ಯಾಕ್ ಸರಣಿಯಲ್ಲೇ ಬುಮ್ರಾಗೆ ನಾಯಕನ ಪಟ್ಟ..!
ಯೆಸ್, ಇಂಜುರಿಯಿಂದ ಬುಮ್ರಾ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಐರ್ಲೆಂಡ್ ವಿರುದ್ಧದ T20 ಸರಣಿ ವೇಳೆ ತಂಡಕ್ಕೆ ಕಮ್ಬ್ಯಾಕ್ ಮಾಡಲಿದ್ದಾರೆ. ಅಲ್ಲದೇ, ಕಮ್ಬ್ಯಾಕ್ ಸರಣಿಯಲ್ಲೇ ಬುಮ್ರಾಗೆ ನಾಯಕನ ಪಟ್ಟ ಕಟ್ಟಲು BCCI ಯೋಚಿಸ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ T20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಯುವಪಡೆಯನ್ನ ಮುನ್ನಡೆಸಲಿದ್ದಾರೆ. ಈ ಸರಣಿ ಮುಗಿದ ಕೆಲವೇ ದಿನಗಳಲ್ಲಿ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ T20 ಸರಣಿ ಆಡಲಿದೆ. ಇದಾದ ಕೆಲವೇ ದಿನಗಳಲ್ಲಿ ಏಷ್ಯಾಕಪ್ ಆರಂಭವಾಗಲಿದೆ.
ಇನ್ನೂ ಒಂದು ವರ್ಷ ಕ್ರಿಕೆಟ್ನಿಂದ ರಿಷಭ್ ಪಂತ್ ದೂರ..! ವಿಶ್ವಕಪ್ಗೂ ಮುನ್ನ ಟೀಂ ಇಂಡಿಯಾಗೆ ಶಾಕ್..!
ವರ್ಕ್ಲೋಡ್ ಕಡಿಮೆ ಮಾಡೋ ಉದ್ದೇಶದಿಂದ ಹಾರ್ದಿಕ್ ಪಾಂಡ್ಯಗೆ ಐರ್ಲೆಂಡ್ ಸರಣಿಯಿಂದ ರೆಸ್ಟ್ ನೀಡುವ ಸಾಧ್ಯತೆ ಇದೆ. ಇದರಿಂದ ಬುಮ್ರಾ ನಾಯಕತ್ವದಲ್ಲಿ IPLನಲ್ಲಿ ಮಿಂಚಿದ ಯುವ ಆಟಗಾರರಿಗೆ ಚಾನ್ಸ್ ನೀಡುವ ಪ್ಲಾನ್ BCCIನದ್ದಾಗಿದೆ. ಮತ್ತೊಂದೆಡೆ ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್ ದೃಷ್ಟಿಯಿಂದ ಬುಮ್ರಾ ಫಿಟ್ನೆಸ್ ಟೀಂ ಇಂಡಿಯಾಗೆ ತುಂಬಾನೇ ಅಗತ್ಯವಾಗಿದೆ. ಇದಕ್ಕಾಗಿ ಐರ್ಲೆಂಡ್ ಸರಣಿಯಲ್ಲಿ ಬುಮ್ರಾರನ್ನ ಕಣಕ್ಕಿಳಿಸಲಾಗುತ್ತಿದೆ.
ಐಪಿಎಲ್ ಸ್ಟಾರ್ಗಳಿಗೆ ಸಿಗಲಿದ್ಯಾ ಐರ್ಲೆಂಡ್ ಟಿಕೆಟ್..?
ಯೆಸ್, ವೆಸ್ಟ್ ಇಂಡೀಸ್ ವಿರುದ್ಧದ T20 ಸರಣಿಯಲ್ಲೇ ರಿಂಕು ಸಿಂಗ್ಗೆ ಚಾನ್ಸ್ ಸಿಗುತ್ತೆ ಅಂತ ಹೇಳಲಾಗಿತ್ತು. ಆದ್ರೆ, ರಿಂಕುಗೆ ವಿಂಡೀಸ್ ಫ್ಲೈಟ್ ಟಿಕೆಟ್ ಮಿಸ್ ಆಗಿದೆ. ಇದರಿಂದ ಐರ್ಲೆಂಡ್ಗೆ ರಿಂಕುರನ್ನ ಕಳಿಸಿಸಲು ಬಿಸಿಸಿಐ ಮುಂದಾಗಿದೆ. ರಿಂಕು ಸಿಂಗ್ ಜೊತೆಗೆ ರಾಹುಲ್ ತ್ರಿಪಾಠಿ, ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ವರುಣ್ ಚಕ್ರವರ್ತಿ, ಸುಯಶ್ ಶರ್ಮಗೂ ತಂಡದಲ್ಲಿ ಅವಕಾಶ ಸಿಗಲಿದೆ ಅನ್ನೋ ಮಾತುಗಳು ಕೇಳಿ ಬರ್ತಿವೆ.
ODI World Cup 2023: ಈಡನ್ ಗಾರ್ಡನ್ಸ್ ಪಂದ್ಯಗಳ ಟಿಕೆಟ್ ಬೆಲೆ ಪ್ರಕಟ..! IPL ಗಿಂತ ವಿಶ್ವಕಪ್ ಟಿಕೆಟ್ ಚೀಪ್
ಒಟ್ಟಿನಲ್ಲಿ ಐರ್ಲೆಂಡ್ ವಿರುದ್ಧ ಬುಮ್ರಾ ಟೀಂ ಇಂಡಿಯಾಗೆ ರೀ ಎಂಟ್ರಿ ನೀಡಲಿದ್ದಾರೆ. ಆದ್ರೆ, ಐರೀಶ್ ನೆಲದಲ್ಲಿ ಬುಮ್ರಾ ಮೊದಲಿನಂತೆ ಅಬ್ಬರಿಸ್ತಾರಾ..? ಹಳೆಯ ಖದರ್ ತೋರಿಸ್ತಾರಾ ಅನ್ನೋದನ್ನ ಕಾದು ನೋಡ್ಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.