
ನವದೆಹಲಿ(ಜು.26): ಇಡೀ ದೇಶವೇ ಇಂದು(ಜು.26) ಅತ್ಯಂತ ಸಡಗರದಿಂದ 22ನೇ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸುತ್ತಿದೆ. 1999ರಲ್ಲಿ ನೆರೆಯ ಪಾಕಿಸ್ತಾನದ ಸೈನಿಕರ ಕುತಂತ್ರವನ್ನು ಭಾರತೀಯ ವೀರ ಯೋಧರು ಮೆಟ್ಟಿನಿಂತು ಟೈಗರ್ ಹಿಲ್ಸ್ ವಶಪಡಿಸಿಕೊಂಡ ನೆನಪಿಗಾಗಿ ಕಾರ್ಗಿಲ್ ವಿಜಯ ದಿನವನ್ನಾಗಿ ಆಚರಿಸಲಾಗುತ್ತಿದೆ.
ಭಾರತ ಹಾಗೂ ಪಾಕಿಸ್ತಾನ ಸೈನಿಕರ ನಡುವಿನ ಕಾರ್ಗಿಲ್ ಯುದ್ದವು ಮೇ 2, 1999ರಲ್ಲಿ ಆರಂಭವಾಗಿ ಜುಲೈ 26ಕ್ಕೆ ಕೊನೆಗೊಂಡಿತು. ಕಾರ್ಗಿಲ್ ವಶಪಡಿಸಿಕೊಳ್ಳಲು ಹವಣಿಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ವೀರ ಯೋಧರು ಮುಟ್ಟಿ ನೋಡಿಕೊಳ್ಳುವಂತಹ ಉತ್ತರವನ್ನು ನೀಡಿದ್ದರು. ಅಂದಿನ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ನಾವು ಕಾರ್ಗಿಲ್ ಯುದ್ದ ಗೆದ್ದಿದ್ದೇವೆ ಎಂದು ಘೋಷಿಸುವ ಮೂಲಕ ಯುದ್ದಕ್ಕೆ ಅಂತ್ಯಬಿದ್ದಿತು.
ಎಂದೂ ಮರೆಯದ ಕಾರ್ಗಿಲ್ ಸಮರ: ದುಷ್ಟ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದ ಭಾರತ!
ಈ ಭೀಕರ ಯುದ್ದದಲ್ಲಿ ಭಾರತದ 527 ಮಂದಿ ವೀರ ಮರಣವನ್ನಪ್ಪಿದರೆ, ಪಾಕಿಸ್ತಾನದ 1200ಕ್ಕೂ ಅಧಿಕ ದುಷ್ಟರು ಭಾರತದ ಸೈನಿಕರ ಗುಂಡಿಗೆ ಬಲಿಯಾಗಿದ್ದರು. ಭಾರತೀಯ ವೀರ ಯೋಧರ ಶೌರ್ಯ, ಸಾಹಸಗಳನ್ನು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ನುಡಿನಮನ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್, ಸುರೇಶ್ ರೈನಾ, ವಿವಿಎಸ್ ಲಕ್ಷ್ಮಣ್, ಗೌತಮ್ ಗಂಭೀರ್ ಟ್ವೀಟ್ ಮೂಲಕ ವೀರ ಯೋಧರ ಬಲಿದಾನಕ್ಕೆ ನುಡಿನಮನ ಸಲ್ಲಿಸಿದ್ದಾರೆ.
ಈ ಯುದ್ದಕ್ಕೇಕೆ ಅಷ್ಟೊಂದು ಮಹತ್ವ?
ಭಾರತೀಯ ಯುದ್ದ ಇತಿಹಾಸದಲ್ಲಿ ಕಾರ್ಗಿಲ್ ಯುದ್ದಕ್ಕೆ ಮಹತ್ತರವಾದ ಸ್ಥಾನವಿದೆ. ಪ್ರತಿಕೂಲದ ಪರಿಸ್ಥಿತಿಯ ಹೊರತಾಗಿಯೂ ದೇಶದ ರಕ್ಷಣೆಯ ವಿಚಾರದಲ್ಲಿ ಜೀವದ ಹಂಗು ತೊರೆದು ಹೋರಾಡುವ ಮೂಲಕ ಕಾರ್ಗಿಲ್ ವಶಪಡಿಸಿಕೊಳ್ಳುವಲ್ಲಿ ಭಾರತೀಯ ಯೋಧರು ಯಶಸ್ವಿಯಾಗಿದ್ದು ಒಂದು ಐತಿಹಾಸಿಕ ಕ್ಷಣವೆಂದರೆ ತಪ್ಪಾಗಲಾರದು. ಹೀಗಾಗಿ ಜುಲೈ 26ರಂದು ಪ್ರತಿ ವರ್ಷ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.