
ಬೆಂಗಳೂರು(ಏ.21): ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಜೂ.1ರಿಂದ 29ರ ವರೆಗೂ ವೆಸ್ಟ್ಇಂಡೀಸ್, ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಐರ್ಲೆಂಡ್ ಹಾಗೂ ಸ್ಕಾಟ್ಕೆಂಡ್ ತಂಡಗಳಿಗೆ ಪ್ರಾಯೋಜಕತ್ವ ನೀಡಲಿದೆ. ಕ್ರಿಕೆಟ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡುತ್ತಿರುವುದು ಇದೇ ಮೊದಲು.
ಈ ಬೆಳವಣಿಗೆಯನ್ನು ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಖಚಿತಪಡಿಸಿರುವ ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ಅವರು, ‘ಶನಿವಾರ (ಏ.20)ರಂದು ಒಪ್ಪಂದ ಅಧಿಕೃತಗೊಂಡಿದೆ.
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ 'ಕನ್ನಡದ ನಂದಿನಿ'..? ಪ್ರಾಯೋಜಕತ್ವ ಪಡೆಯುವ ನಿರೀಕ್ಷೆಯಲ್ಲಿ KMF
ಸ್ಕಾಟ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳ ಆಟಗಾರರ ಜೆರ್ಸಿಯ ತೋಳಿನ ಭಾಗ (ಉದಾ. ಬಲಗೈ ಆಟಗಾರನ ಎಡ ತೋಳು, ಎಡಗೈ ಆಟಗಾರ ಬಲ ತೋಳು)ದ ಮೇಲೆ ಕೆಎಂಎಫ್ನ ಲೋಗೋ ಇರಲಿದೆ. ಈ ಎರಡೂ ತಂಡಗಳ ಆಟಗಾರರು ನಂದಿನಿ ಉತ್ಪನ್ನಗಳ ಜಾಹೀರಾತು, ಸಾಮಾಜಿಕ ತಾಣಗಳಲ್ಲಿ ನಡೆಸುವ ಅಭಿಯಾನ, ಫೋಟೋಶೂಟ್ಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವಕಪ್ ವೇಳೆ ಜಾಹೀರಾತುಗಳು ಪ್ರಸಾರಗೊಳ್ಳಲಿವೆ. ಇದು ಕರ್ನಾಟಕದಲ್ಲಿರುವ ಪ್ರತಿಯೊಬ್ಬರಿಗೂ ಹೆಮ್ಮೆಯ ಸಂಗತಿ ಎನಿಸಿದೆ’ ಎಂದಿದ್ದಾರೆ.
‘ವಿಶ್ವಕಪ್ ವೇಳೆ ಕೆಎಂಎಫ್ನ ಉತ್ಪನ್ನಗಳು ಅಮೆರಿಕದಲ್ಲಿ ಲಭ್ಯವಿರಲಿದ್ದು, ಕರ್ನಾಟಕದ ಬ್ರ್ಯಾಂಡ್ಗೆ ಜಾಗತಿಕ ಮನ್ನಣೆ ಸಿಗುವಂತೆ ಮಾಡುವುದು ನಮ್ಮ ಗುರಿ’ ಎಂದು ಜಗದೀಶ್ ಹೇಳಿದ್ದಾರೆ.
ಅಂಪೈರಿಂಗ್ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಅಶುತೋಶ್, ಈಗ ಪಂಜಾಬ್ ಪಾಲಿನ ಆಪತ್ಬಾಂಧವ..!
ಕಳೆದ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ನಲ್ಲಿ ಬೆಂಗಳೂರು ಬುಲ್ಸ್ ತಂಡಕ್ಕೆ ಕೆಎಂಎಫ್ ಪ್ರಾಯೋಜಕತ್ವ ನೀಡಿತ್ತು. ಸದ್ಯ ನಡೆಯುತ್ತಿರುವ ಐಪಿಎಲ್ನಲ್ಲಿ ಆರ್ಸಿಬಿ ತಂಡದ ಪ್ರಾಯೋಜಕತ್ವ ಪಡೆಯಲು ಪ್ರಯತ್ನಿಸಿದರೂ, ತಂಡ ನಿಗದಿಪಡಿಸಿರುವ ದುಬಾರಿ ಮೊತ್ತವನ್ನು ಭರಿಸುವುದು ಕಷ್ಟವೆನಿಸಿದ ಕಾರಣ ಯೋಜನೆಯನ್ನು ಕೈಬಿಡಲಾಯಿತು ಎಂದು ಜಗದೀಶ್ ಮಾಹಿತಿ ಹಂಚಿಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.