
ಬೆಂಗಳೂರು (ಜ.30): ಕರ್ನಾಟಕ ತಂಡದ ತಂಡದ ನಾಯಕ ಮಯಾಂಕ್ ಅಗರ್ವಾಲ್ ಅವರಿಗೆ ವಿಮಾನದಲ್ಲಿಯೇ ಅಕಸ್ಮಾತ್ ಆಗಿ ಆಸಿಡ್ ಕುಡಿದಿರುವ ಶಂಕೆ ವ್ಯಕ್ತವಾಗಿದೆ. ಕರ್ನಾಟಕ ರಣಜಿ ತಂಡದೊಂದಿಗೆ ಸೂರತ್ಗೆ ವಿಮಾನದಲ್ಲಿ ಪ್ರಯಾಣ ನಡೆಸುವ ವೇಳೆ ಈ ಘಟನೆ ಸಂಭವಿಸಿದೆ. ತ್ರಿಪುರಾದ ಅಗರ್ತಲಾದಿಂದ ಸೂರತ್ಗೆ ಪ್ರಯಾಣ ಮಾಡುವಾಗ ಈ ಘಟನೆ ನಡೆದಿದೆ. ಮಧ್ಯಾಹ್ನ ಮೂರು ಗಂಟೆಯ ವೇಳೆಗೆ ವಿಮಾನದಲ್ಲಿ ಕುಳಿತಿದ್ದ ಮಯಾಂಕ್ ಅಗರ್ವಾಲ್ ಸೀಟಿನ ಮುಂಭಾಗದಲ್ಲಿ ಇಟ್ಟಿದ್ದ ನೀರನ್ನು ಕುಡಿದಿದ್ದರು. ನೀರು ಕುಡಿಯುತಿದ್ದಂತೆ ನಾಲಿಗೆ, ಬಾಯಿ, ಕೆನ್ನೆ ಸುಟ್ಟು ಹೋದ ಅನುಭವವಾಗಿದೆ. ಮಾತಾಡಲು ಸಾಧ್ಯವಾಗದೆ ಮಯಾಂಕ್ ಅಗರ್ವಾಲ್ ಸೀಟ್ನಲ್ಲಿಯೇ ಒರಗಿ ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೂಡಲೇ ಅವರನ್ನು ಅಗರ್ತಲಾದ ಐಎಲ್ಎಸ್ ಆಸ್ಪತ್ರೆಗೆ ಮಯಾಂಕ್ ಶಿಫ್ಟ್ ಮಾಡಲಾಗಿದೆ. ಮಯಾಂಕ್ ಅಗರ್ವಾಲ್ ಅವರಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ತ್ರಿಪುರ ವಿರುದ್ಧ ರಣಜಿ ಪಂದ್ಯ ಗೆದ್ದಿದ್ದ ಕರ್ನಾಟಕ, ತನ್ನ ಮುಂದಿನ ಪಂದ್ಯಕ್ಕಾಗಿ ಸೂರತ್ಗೆ ಪ್ರಯಾಣ ನಡೆಸುವ ಹಾದಿಯಲ್ಲಿತ್ತು.
ಮಯಾಂಕ್ ಅಗರ್ವಾಲ್ರನ್ನು ಆಸ್ಪತ್ರೆಗೆ ಒಂದು ಕಡಡೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದರೆ, ಇನ್ನೊಂದೆಡೆ ವಿಮಾನದ ಸಿಬ್ಬಂದಿಗಳು ನೀರಿನ ಬಾಟಲ್ಅನ್ನು ವಶಕ್ಕೆ ಪಡೆದುಕೊಂಡು, ಅದರ ತನಿಖೆ ಆರಂಭಿಸಿದ್ದಾರೆ. ಕರ್ನಾಟಕ ರಣಜಿ ತಂಡವಾಗಲಿ, ವಿಮಾನದ ಸಿಬ್ಬಂದಿಯಾಗಲಿ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.
ಸದ್ಯದ ಮಾಹಿತಿಯ ಪ್ರಕಾರ ವಿಮಾನದ ಸಿಬ್ಬಂದಿ ನೀರಿನ ಬಾಟಲಿ ಇಡುವ ಜಾಗದಲ್ಲಿ ಆಸಿಡ್ ಇಟ್ಟಿದ್ದೇ ಈ ಅವಾಂತರಕ್ಕೆ ಕಾರಣ ಎನ್ನಲಾಗಿದೆ. ನೀರು ಎಂದುಕೊಂಡು ಮಯಾಂಕ್ ಅಗರ್ವಾಲ್ ಇದನ್ನು ಕುಡಿದಿದ್ದಾರೆ. ಕುಡಿದ ಬೆನ್ನಲ್ಲಿಯೇ ಸುಟ್ಟ ಅನುಭವವಾಗಿದ್ದರಿಂದ ಅಲ್ಲಿಯೇ ಉಗುಳಿದಿದ್ದಾರೆ. ಆಸಿಡ್ನ ಅಂಶ ಹೊಟ್ಟಗೆ ಹೋಗಿರುವ ಸಾಧ್ಯತೆ ಕಡಿಮೆ ಎನ್ನಲಾಗಿದ್ದು, ಅವರ ಆರೋಗ್ಯದ ಬಗ್ಗೆ ವೈದ್ಯರು ಹೆಚ್ಚಿನ ಗಮನ ನೀಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.