ಉತ್ತರ ಪ್ರದೇಶ ಮೇಲೆ ಬ್ಯಾಟಿಂಗ್‌ ಪ್ರಹಾರ, ಸಿಕೆ ನಾಯ್ಡು ಟ್ರೋಫಿ ಗೆದ್ದ ಕರ್ನಾಟಕ

Published : Mar 13, 2024, 07:04 PM IST
ಉತ್ತರ ಪ್ರದೇಶ ಮೇಲೆ ಬ್ಯಾಟಿಂಗ್‌ ಪ್ರಹಾರ, ಸಿಕೆ ನಾಯ್ಡು ಟ್ರೋಫಿ ಗೆದ್ದ ಕರ್ನಾಟಕ

ಸಾರಾಂಶ

ಸಮ್ರನ್‌ ನೇತೃತ್ವದ ಕರ್ನಾಟಕ 23 ವಯೋಮಿತಿ ತಂಡ, ಬುಧವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಕ್ತಾಯಗೊಂಡ ಕರ್ನಲ್‌ ಸಿಕೆ ನಾಯ್ಡು ಟ್ರೋಫಿಯಲ್ಲಿ ಪ್ರಶಸ್ತಿ ಜಯಿಸಿದೆ.  

ಬೆಂಗಳೂರು (ಮಾ.13): ಕರ್ನಾಟಕ ತಂಡ ಮೊಟ್ಟಮೊದಲ ಬಾರಿಗೆ ಸಿಕೆ ನಾಯ್ಡು ಟ್ರೋಫಿ ಚಾಂಪಿಯನ್‌ ಆಗಿದೆ. ಕರ್ನಾಟಕ ಹಾಗೂ ಉತ್ತರ ಪ್ರದೇಶ ತಂಡಗಳ ನಡುವೆ ಬುಧವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 23 ವಯೋಮಿತಿಯ ಸಿಕೆ ನಾಯ್ಡು ಕ್ರಿಕೆಟ್‌ ಟೂರ್ನಿಯ ಫೈನಲ್‌ನ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು. ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಪಡೆದುಕೊಂಡ ಆಧಾರದಲ್ಲಿ ಕರ್ನಾಟಕ ತಂಡ ಚಾಂಪಿಯನ್‌ ಎನಿಸಿಕೊಂಡಿತು. ಬಿಸಿಸಿಐ ನಡೆಸುವ ದೇಶದ ಪ್ರಮುಖ 23 ವಯೋಮಿತಿ ಟೂರ್ನಿಯನ್ನು 2007-08ರ ಋತುವಿನಿಂದ ಸಿಕೆ ನಾಯ್ಡು 23 ವಯೋಮಿತಿ ಕ್ರಿಕೆಟ್‌ ಟೂರ್ನಿ ಎನ್ನುವ ಹೆಸರಿನಲ್ಲಿ ಆಡಿಸಲಾಗುತ್ತದೆ. ಸಿಕೆ ನಾಯ್ಡು ಟ್ರೋಫಿ ಎಂದು ಹೆಸರು ಪಡೆದುಕೊಂಡ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ತಂಡ ಈ ಟ್ರೋಫಿ ಜಯಿಸಿದೆ. ಫೈನಲ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಕರ್ನಾಟಕ ತಂಡ 358 ರನ್‌ ಪೇರಿಸಿದರೆ, ಪ್ರತಿಯಾಗಿ ಉತ್ತರ ಪ್ರದೇಶ 139 ರನ್‌ಗೆ ಆಲೌಟ್‌ ಆಗಿತ್ತು. 2ನೇ ಇನ್ನಿಂಗ್ಸ್‌ನಲ್ಲಿ ಕರ್ನಾಟಕ 585 ರನ್‌ಗಳ ಭರ್ಜರಿ ಮೊತ್ತ ಪೇರಿಸಿತ್ತು. ಗೆಲುವಿಗಾಗಿ ಅಸಾಧ್ಯ 805 ರನ್‌ಗಳ ಗುರಿ ಪಡೆದುಕೊಂಡಿದ್ದ ಉತ್ತರ ಪ್ರದೇಶ 6 ವಿಕೆಟ್‌ಗೆ 174 ರನ್‌ ಬಾರಿಸಿ ಪಂದ್ಯವನ್ನು ಡ್ರಾ ಮಾಡಿಕೊಂಡಿತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!