
ಮುಂಬೈ(ಜೂ.14): ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್(34) ಆತ್ಮಹತ್ಯೆಯನ್ನು ಯಾರಿಗೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪ್ರತಿಭಾನ್ವಿತ ನಟ, ಎಲ್ಲಾ ಸವಾಲಗಳನ್ನು ಯಶಸ್ವಿಯಾಗಿ ಮೆಟ್ಟಿ ನಿಂತ ಮಗಧೀರ, ಆತ್ಮಹತ್ಯೆ ಕುರಿತು ಸಿನಿಮಾ ಮಾಡಿದ್ದ ಸುಶಾಂತ್, ಸೂಸೈಡ್ ಮಾಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಯುವ ನಟನ ಸಾವಿಗೆ ಪ್ರಧಾನಿ ಮೋದಿ, ಬಾಲಿವುಡ್ ಸೆಲೆಬ್ರೆಟಿ ಹಾಗೂ ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ. ಮಾಜಿ ಕ್ರಿಕೆಟಿಗ ಕಿರಣ್ ಮೊರೆ ಆಘಾತ ವ್ಯಕ್ತಪಡಿಸಿದ್ದಾರೆ.
ಧೋನಿ ಅನ್ಟೋಲ್ಡ್ ಸ್ಟೋರಿ ಹೇಳಿ ತನ್ನ ಕತೆ ಯಾರಿಗೂ ಹೇಳದೆ ಹೋದ ಸುಶಾಂತ್ !
2016ರಲ್ಲಿ ಎಂ.ಎಸ್.ಧೋನಿ, ದಿ ಅನ್ಟೋಲ್ಡ್ ಸ್ಟೋರಿ ಚಿತ್ರ ಬಿಡುಗಡೆಯಾಗಿತ್ತು. ಕ್ರಿಕೆಟಿಗ ಎಂ.ಎಸ್.ಧೋನಿ ಪಾತ್ರದಲ್ಲಿ ಸುಶಾಂತ್ ಸಿಂಗ್ ಅದ್ಭುತವಾಗಿ ಅಭಿನಯಿಸಿದ್ದರು. ಧೋನಿಯ ಎಲ್ಲಾ ಕ್ರಿಕೆಟ್ ಶೈಲಿಯನ್ನು ಕರಗತ ಮಾಡಿಕೊಂಡಿದ್ದರು. ಸುಶಾಂತ್ ಸಿಂಗ್ ರಜಪೂತ್ಗೆ ಕ್ರಿಕೆಟ್ ತರಬೇತಿ ನೀಡಿದ್ದು, ಇದೇ ಕಿರಣ್ ಮೋರೆ.
ಬಾಲಿವುಡ್ ನಟ ಸುಶಾಂತ್ ಸೂಸೈಡ್, ಮತ್ತೆ ಲಾಕ್ಡೌನ್ಗೆ ಮೋದಿ ಡಿಸೈಡ್?ಜೂ.14ರ ಟಾಪ್ 10 ಸುದ್ದಿ!...
ಬಾಲಿವುಡ್ ನಟನಿಗೆ ಕ್ರಿಕೆಟ್ ಪಾಠ ಹೇಳಿಕೊಟ್ಟು ಕಿರಣ್ ಮೋರೆ ಸೈ ಎನಿಸಿಕೊಂಡಿದ್ದರು. ಮೋರೆ ಹೇಳಿದ ಎಲ್ಲಾ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸುತ್ತಿದ್ದ ಸುಶಾಂತ್ ಬಹುಬೇಗನೆ ವೃತ್ತಿಪರ ಕ್ರಿಕಿಟಿನಷ್ಟು ಬ್ಯಾಟಿಂಗ್ ಪರ್ಫಾಮೆನ್ಸ್ ನೀಡಿದ್ದರು. ಇದೀಗ ಇದೇ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದಾಗ ಕಿರಣ್ ಮೋರೆಗೆ ಆಘಾತವಾಗಿದೆ.
ಸುಶಾಂತ್ ಸಿಂಗ್ ಆತ್ಮಹತ್ಯೆ ಆಘಾತ ತಂದಿದೆ. ಎಂ.ಎಸ್.ಧೋನಿ ಚಿತ್ರಕ್ಕಾಗಿ ಸುಶಾಂತ್ ಸಿಂಗ್ಗೆ ಕ್ರಿಕೆಟ್ ತರಬೇತಿ ನೀಡಿದ್ದೆ. ಇದೀಗ ಸುಶಾಂತ್ ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಹುಬೇಗನ ಅಗಲಿಬಿಟ್ಟೆ ಗೆಳೆಯ ಎಂದು ಕಿರಣ್ ಮೋರೆ ಟ್ವೀಟ್ ಮಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.