'ಆದಷ್ಟು ಬೇಗ ಡಾಕ್ಟರ್ ಆಗ್ತೇನೆ': ಇಂಟ್ರೆಸ್ಟಿಂಗ್ ಮಾಹಿತಿ ಹಂಚಿಕೊಂಡ ಐಪಿಎಲ್‌ನ ಸ್ಟಾರ್ ಕ್ರಿಕೆಟರ್!

Published : Dec 09, 2024, 03:33 PM IST
'ಆದಷ್ಟು ಬೇಗ ಡಾಕ್ಟರ್ ಆಗ್ತೇನೆ': ಇಂಟ್ರೆಸ್ಟಿಂಗ್ ಮಾಹಿತಿ ಹಂಚಿಕೊಂಡ ಐಪಿಎಲ್‌ನ ಸ್ಟಾರ್ ಕ್ರಿಕೆಟರ್!

ಸಾರಾಂಶ

ಕೆಕೆಆರ್ ತಂಡದ ಸ್ಟಾರ್ ಆಟಗಾರ ವೆಂಕಟೇಶ್ ಅಯ್ಯರ್ ಫೈನಾನ್ಸ್‌ನಲ್ಲಿ ಪಿಎಚ್‌ಡಿ ಪದವಿ ಪಡೆಯುತ್ತಿದ್ದಾರೆ. ಐಪಿಎಲ್ ಹರಾಜಿನಲ್ಲಿ 23.75 ಕೋಟಿಗೆ ಮಾರಾಟವಾದ ಅವರು, ಕ್ರಿಕೆಟ್ ಜೊತೆಗೆ ಶಿಕ್ಷಣವೂ ಮುಖ್ಯ ಎಂದಿದ್ದಾರೆ. ಶ್ರೇಯಸ್ ಅಯ್ಯರ್ ಬೇರೆ ತಂಡ ಸೇರಿದ್ದರಿಂದ ಕೆಕೆಆರ್ ನಾಯಕತ್ವಕ್ಕೆ ವೆಂಕಿ ರೇಸ್‌ನಲ್ಲಿದ್ದಾರೆ.

ನವದೆಹಲಿ: ಕಳೆದ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಕೆಕೆಆರ್ ತಂಡವು ಚಾಂಪಿಯನ್ ಆಗುವಲ್ಲಿ ಎಡಗೈ ಸ್ಪೋಟಕ ಬ್ಯಾಟರ್ ವೆಂಕಟೇಶ್ ಅಯ್ಯರ್ ಮಹತ್ವದ ಪಾತ್ರ ವಹಿಸಿದ್ದರು. ಇದೀಗ ವೆಂಕಟೇಶ್ ಅಯ್ಯರ್ ಇನ್ನು ಕೆಲವೇ ವರ್ಷಗಳಲ್ಲಿ ಡಾಕ್ಟರ್ ವೆಂಕಟೇಶ್ ಅಯ್ಯರ್ ಎಂದು ಕರೆಸಿಕೊಳ್ಳಲಿದ್ದಾರೆ. 

ಇತ್ತೀಚೆಗಷ್ಟೇ ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆದ 2025ನೇ ಸಾಲಿನ ಐಪಿಎಲ್ ಹರಾಜಿನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 23.75 ಕೋಟಿ ರುಪಾಯಿ ನೀಡಿ ವೆಂಕಟೇಶ್ ಅಯ್ಯರ್ ಅವರನ್ನು ಮತ್ತೊಮ್ಮೆ ತನ್ನ ತೆಕ್ಕೆಗೆ ಸೆಳೆದುಕೊಂಡಿತ್ತು. ಇದರೊಂದಿಗೆ ವೆಂಕಿ ಅಯ್ಯರ್, ಐಪಿಎಲ್ ಹರಾಜಿನಲ್ಲಿ 4ನೇ ದುಬಾರಿ ಆಟಗಾರನಾಗಿ ಹೊರಹೊಮ್ಮಿದ್ದರು. ಇದೀಗ 29 ವರ್ಷದ ವೆಂಕಟೇಶ್ ಅಯ್ಯರ್, ಕ್ರಿಕೆಟ್‌ನ ಜತೆಜತೆಗೆ ಶಿಕ್ಷಣದ ಮಹತ್ವವನ್ನು ಸಾರಿ ಹೇಳಿದ್ದಾರೆ.

ಸತತವಾಗಿ ಅತಿಹೆಚ್ಚು ಟೆಸ್ಟ್ ಸೋಲು ಕಂಡ ಭಾರತದ ಕ್ಯಾಪ್ಟನ್ ಯಾರು? ಧೋನಿ, ಕೊಹ್ಲಿ ಸಾಲಿಗೆ ಸೇರಿದ ರೋಹಿತ್ ಶರ್ಮಾ!

ಫೈನಾನ್ಸ್‌ನಲ್ಲಿ PhD ಮಾಡುತ್ತಿರುವ ವೆಂಕಟೇಶ್ ಅಯ್ಯರ್:

ಇಂಡಿಯನ್ ಎಕ್ಸ್‌ಪ್ರೆಸ್ ಜತೆಗಿನ ಮಾತುಕತೆ ವೇಳೆ ವೆಂಕಟೇಶ್ ಅಯ್ಯರ್, 'ಫೈನಾನ್ಸ್ ವಿಭಾಗದಲ್ಲಿ ನಾನು ಪಿಎಚ್‌ಡಿ ಮಾಡುತ್ತಿದ್ದೇನೆ. ಮುಂದಿನ ಬಾರಿ ನೀವು ನನ್ನನ್ನು ಸಂದರ್ಶನ ಮಾಡುವಾಗ ಡಾಕ್ಟರ್ ವೆಂಕಟೇಶ್ ಎಂದು ಕರೆಯುತ್ತೀರ. ಶಿಕ್ಷಣ ಎನ್ನುವುದು ಯಾವಾಗಲೂ ನಿಮ್ಮ ಜತೆಯೇ ಇರುತ್ತದೆ. ಕ್ರಿಕೆಟರ್ ಆದವರು 60 ವರ್ಷಗಳ ವರೆಗೆ ಆಟವಾಡಲು ಸಾಧ್ಯವಿಲ್ಲ. ಹೆಚ್ಚಿನ ಶಿಕ್ಷಣ ಪಡೆದುಕೊಳ್ಳುವುದರಿಂದಾಗಿ ನನಗೆ ಮೈದಾನದಲ್ಲಿಯೂ ಉತ್ತಮ ತೀರ್ಮಾನ ತೆಗೆದುಕೊಳ್ಳಲು ಸಹಾಯ ಮಾಡುತ್ತದೆ' ಎಂದು ವೆಂಕಿ ಅಯ್ಯರ್ ಹೇಳಿದ್ದಾರೆ.

ಅಡಿಲೇಡ್ ಟೆಸ್ಟ್ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾಗೆ ಮತ್ತೊಂದು ಬಿಗ್ ಶಾಕ್!

ಕೆಕೆಆರ್ ಕ್ಯಾಪ್ಟನ್ ರೇಸ್‌ನಲ್ಲಿದ್ದಾರೆ ವೆಂಕಿ:

ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕೆಕೆಆರ್ ತಂಡದ ದುಬಾರಿ ಆಟಗಾರನಾಗಿ ವೆಂಕಟೇಶ್ ಅಯ್ಯರ್ ಹೊರಹೊಮ್ಮಿದ್ದಾರೆ. ಇದೀಗ ಕೆಕೆಆರ್ ತಂಡವನ್ನು ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿಸಿದ್ದ ನಾಯಕ ಶ್ರೇಯಸ್ ಅಯ್ಯರ್, ಪಂಜಾಬ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಕೆಕೆಆರ್ ತಂಡದ ನಾಯಕ ಸ್ಥಾನಕ್ಕೆ ಅಜಿಂಕ್ಯ ರಹಾನೆ ಹಾಗೂ ವೆಂಕಟೇಶ್ ಅಯ್ಯರ್ ನಡುವೆ ಪೈಪೋಟಿ ಏರ್ಪಟ್ಟಿದೆ. ಮುಂಬರುವ ಐಪಿಎಲ್ ಟೂರ್ನಿಯಲ್ಲಿ ವೆಂಕಿ ಅಯ್ಯರ್ ಕೆಕೆಆರ್ ತಂಡದ ನಾಯಕರಾದರೂ ಅಚ್ಚರಿಯಿಲ್ಲ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಆ್ಯಶಸ್ ಸರಣಿ: ಸತತ ಎರಡು ಪಂದ್ಯ ಗೆದ್ದು ಬೀಗಿದ್ದ ಆಸೀಸ್‌ಗೆ ಆಘಾತ, ಸ್ಟಾರ್ ಬೌಲರ್ ಹೊರಕ್ಕೆ!
ಮದ್ಯ ಮಾರಾಟಕ್ಕೆ ಇಳಿದ ಯುವರಾಜ್‌ ಸಿಂಗ್‌, ಒಂದು ತಿಂಗಳ ಸಂಬಳಕ್ಕೆ ಬರುತ್ತೆ ಒಂದು ಬಾಟಲ್‌!