KL Rahul Kannada: 'ಅದು ಕನ್ನಡ್ ಅಲ್ಲ ಕನ್ನಡ..' ಮತ್ತೊಮ್ಮೆ ಕನ್ನಡಿಗರ ಹೃದಯ ಗೆದ್ದ ಕೆ ಎಲ್ ರಾಹುಲ್..!

Published : Feb 24, 2024, 05:02 PM IST
KL Rahul Kannada: 'ಅದು ಕನ್ನಡ್ ಅಲ್ಲ ಕನ್ನಡ..' ಮತ್ತೊಮ್ಮೆ ಕನ್ನಡಿಗರ ಹೃದಯ ಗೆದ್ದ ಕೆ ಎಲ್ ರಾಹುಲ್..!

ಸಾರಾಂಶ

ಐಪಿಎಲ್‌ಗಾಗಿ ಸ್ಟಾರ್ ಸ್ಪೋರ್ಟ್ಸ್‌ ವಾಹಿನಿಯ ಹುಡುಗನೊಬ್ಬ ಕೆ ಎಲ್ ರಾಹುಲ್‌ಗೆ ಡೈಲಾಗ್ ಸ್ಕ್ರಿಪ್ಟ್ ನೀಡುತ್ತಾನೆ. ಬೇರೆ ಬೇರೆಯ ಭಾಷೆಯ ಸ್ಕ್ರಿಪ್ಟ್‌ ಬಗ್ಗೆ ಮಾತನಾಡುವಾಗ ಕನ್ನಡದ ಬಗ್ಗೆ ಮಾತನಾಡಿದ್ದಾರೆ.

ಬೆಂಗಳೂರು(ಫೆ.24): ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಕೆ ಎಲ್ ರಾಹುಲ್, ಸದ್ಯ ಫಿಟ್ನೆಸ್ ಸಮಸ್ಯೆಯಿಂದಾಗಿ ಇಂಗ್ಲೆಂಡ್ ಎದುರಿನ ಕಳೆದ ಮೂರು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದರ ನಡುವೆ ಮುಂಬರುವ 17ನೇ ಆವತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಾಗಿ ಟಿವಿ ನೇರ ಪ್ರಸಾರದ ಮಾಧ್ಯಮ ಹಕ್ಕು ಹೊಂದಿರುವ ಸ್ಟಾರ್ ಸ್ಪೋರ್ಟ್ಸ್ ವಾಹಿನಿಯು ಹಲವು ತಾರಾ ಕ್ರಿಕೆಟಿಗರ ಬಳಿ ಜಾಹಿರಾತುಗಳನ್ನು ರೆಡಿ ಮಾಡಿಸುತ್ತಿದೆ. ಇಂತಹ ಸಂದರ್ಭದಲ್ಲಿ ಹಿಂದಿವಾಲನಿಗೆ ಕನ್ನಡಿಗ ಕೆ ಎಲ್ ಕನ್ನಡ ಪಾಠ ಮಾಡಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಹೌದು. ಐಪಿಎಲ್‌ಗಾಗಿ ಸ್ಟಾರ್ ಸ್ಪೋರ್ಟ್ಸ್‌ ವಾಹಿನಿಯ ಹುಡುಗನೊಬ್ಬ ಕೆ ಎಲ್ ರಾಹುಲ್‌ಗೆ ಡೈಲಾಗ್ ಸ್ಕ್ರಿಪ್ಟ್ ನೀಡುತ್ತಾನೆ. ಬೇರೆ ಬೇರೆಯ ಭಾಷೆಯ ಸ್ಕ್ರಿಪ್ಟ್‌ ಬಗ್ಗೆ ಮಾತನಾಡುವಾಗ ಕನ್ನಡದ ಬಗ್ಗೆ ಮಾತನಾಡಿದ್ದಾರೆ. ಮ್ಯಾಚ್‌ ಡೇ ಪ್ರೋಮೋ ಇಂಗ್ಲೀಷ್, ಮ್ಯಾಚ್‌ ಡೇ ಪ್ರೋಮೋ ಹಿಂದಿ, ಮ್ಯಾಚ್‌ ಡೇ ಪ್ರೋಮೋ ಕನ್ನಡ ಎನ್ನುತ್ತಿರುವಾಗಲೇ ಹಿಂದಿವಾಲ ಹುಡುಗ ಕನ್ನಡ್ ಎನ್ನತ್ತಾನೆ. ನಿಮಗೆ ಎಷ್ಟು ಸಲ ಹೇಳಬೇಕು. ಅದು ಕನ್ನಡ್ ಅಲ್ಲ ಕನ್ನಡ ಎಂದು ಕೆ ಎಲ್ ರಾಹುಲ್ ಆ ಹುಡುಗನ ಮೇಲೆ ರೇಗುತ್ತಾರೆ. ಬಳಿಕ ಕನ್ನಡ್ ಅಲ್ಲ ಕನ್ನಡ ಅಂತ ಹೇಳು ಎಂದು ಹಿಂದಿವಾಲ ಬಾಯಲ್ಲಿ ಕನ್ನಡ ಹೇಳಿಸುತ್ತಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

'ನಂಗೂ ಭಯ ಆಗುತ್ತೆ..!': ಗರ್ಲ್ ಫ್ಯಾನ್‌ಗೆ ಯಶಸ್ವಿ ಜೈಸ್ವಾಲ್ ಹೀಗಂದಿದ್ದೇಕೆ..? ವಿಡಿಯೋ ವೈರಲ್

ಹೀಗಿದೆ ನೋಡಿ ಆ ವಿಡಿಯೋ:

ಇನ್ನು ಐಪಿಎಲ್ ವಿಚಾರಕ್ಕೆ ಬರುವುದಾದರೇ, 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮಾರ್ಚ್ 22ರಿಂದ ಆರಂಭವಾಗಲಿದೆ. ಚೆನ್ನೈನ ಚೆಪಾಕ್‌ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇನ್ನು ಕನ್ನಡಿಗ ಕೆ ಎಲ್ ರಾಹುಲ್, ಲಖನೌ ಸೂಪರ್ ಜೈಂಟ್ಸ್‌ ತಂಡವನ್ನು ನಾಯಕನಾಗಿ ಮುನ್ನಡೆಸಲು ಸಜ್ಜಾಗಿದ್ದಾರೆ. 

WPL 2024: ಬೆಂಗಳೂರಿನಲ್ಲಿಂದು ಆರ್‌ಸಿಬಿ vs ಯುಪಿ ವಾರಿಯರ್ಸ್‌ ಫೈಟ್

ಲಖನೌ ಸೂಪರ್ ಜೈಂಟ್ಸ್ ತಂಡವು ಕಳೆದೆರಡು ಆವೃತ್ತಿಯ ಐಪಿಎಲ್‌ನಲ್ಲೂ ಅದ್ಭುತ ಪ್ರದರ್ಶನದ ಮೂಲಕ ಪ್ಲೇ ಆಫ್ ಪ್ರವೇಶಿಸಿದೆಯಾದರೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಈ ಬಾರಿ ಶತಾಯಗತಾಯ ಕಪ್ ಗೆಲ್ಲಲು ಕೆ ಎಲ್ ರಾಹುಲ್ ಪಡೆ ಐಪಿಎಲ್ ಕಪ್ ಗೆಲ್ಲಲು ಎದುರು ನೋಡುತ್ತಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!