
ಬೆಂಗಳೂರು[ನ.14]: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಯ ಗುಂಪು ಹಂತದ ಕೊನೆಯ 2 ಪಂದ್ಯಗಳಿಗೆ ಕರ್ನಾಟಕ ರಾಜ್ಯ ತಂಡದಲ್ಲಿ 4 ಬದಲಾವಣೆ ಮಾಡಲಾಗಿದೆ. ಕೆ.ಎಲ್ ರಾಹುಲ್, ರೋನಿತ್ ಮೋರೆ, ಮನೋಜ್ ಬಂಡಗೆ ತಂಡ ಸೇರ್ಪಡೆಗೊಂಡಿದ್ದಾರೆ.
IPL 2020: ಕನ್ನಡಿಗರ ತಂಡವಾಗಿ ಬದಲಾದ ಕಿಂಗ್ಸ್ ಇಲೆವನ್ ಪಂಜಾಬ್..!
ಮನೀಶ್ ಪಾಂಡೆ, ಸರ್ವಿಸಸ್ ವಿರುದ್ಧದ ಪಂದ್ಯದಲ್ಲಿ ತಂಡ ಕೂಡಿಕೊಂಡಿದ್ದರು. ಮೊದಲ 4 ಪಂದ್ಯಗಳಲ್ಲಿ 15 ಆಟಗಾರರ ತಂಡದಲ್ಲಿ ಸ್ಥಾನ ಪಡೆದಿದ್ದ ಅನಿರುದ್ಧ ಜೋಶಿ, ಪ್ರತೀಕ್ ಜೈನ್, ರವಿಕುಮಾರ ಸಮರ್ಥ್, ನಿಹಾಲ್ ಉಲ್ಲಾಳ್ರನ್ನು ಕೈಬಿಡಲಾಗಿದೆ.
ಮನೀಶ್ ಪಾಂಡೆ ಭರ್ಜರಿ ಶತಕ, ಕರ್ನಾಟಕಕ್ಕೆ ಬೃಹತ್ ಗೆಲುವು!
ಕರ್ನಾಟಕ ತಂಡವು ’ಎ’ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಇದುವರೆಗೂ ಲೀಗ್ ಹಂತದಲ್ಲಿ ಆಡಿದ 4 ಪಂದ್ಯಗಳಲ್ಲಿ 3 ಗೆಲುವು ಹಾಗೂ ಒಂದು ಸೋಲು ಸಹಿತ 12 ಅಂಕ ಗಳಿಸಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಬರೋಡ ವಿರುದ್ಧ ಹೊರತುಪಡಿಸಿ ಉಳಿದ ಮೂರು ತಂಡಗಳ ವಿರುದ್ಧವೂ ಕರ್ನಾಟಕ ತಂಡ ಗೆಲುವಿನ ಸಿಹಿಯುಂಡಿದೆ. ಅದರಲ್ಲೂ ಕಳೆದೆರಡು ಪಂದ್ಯಗಳಲ್ಲಿ ದೇವದತ್ ಪಡಿಕ್ಕಲ್ ಹಾಗೂ ಮನೀಶ್ ಪಾಂಡೆ ಅಜೇಯ ಶತಕ ಸಿಡಿಸಿ ಮಿಂಚಿದ್ದರು. ಈಗಾಗಲೇ ವಿಜಯ್ ಹಜಾರೆ ಟ್ರೋಫಿ ಗೆದ್ದು ಬೀಗಿರುವ ಹಾಲಿ ಚಾಂಪಿಯನ್ ಕರ್ನಾಟಕ, ಇದೀಗ ಮತ್ತೊಮ್ಮೆ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಎತ್ತಿಹಿಡಿಯುವ ಕನವರಿಕೆಯಲ್ಲಿದೆ.
ತಂಡ: ಮನೀಶ್ ಪಾಂಡೆ (ನಾಯಕ), ಕರುಣ್ ನಾಯರ್, ರೋಹನ್, ದೇವದತ್, ರಾಹುಲ್, ಗೌತಮ್, ಪ್ರವೀಣ್ ದುಬೆ, ಪವನ್ ದೇಶಪಾಂಡೆ, ಲವ್ನಿತ್, ಸುಚಿತ್, ಮಿಥುನ್, ಕೌಶಿಕ್, ಶ್ರೇಯಸ್, ರೋನಿತ್, ಮನೋಜ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.