
ಬೆಂಗಳೂರು(ನ.22): ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಡೆದಿರುವ ಫಿಕ್ಸಿಂಗ್ ಪ್ರಕರಣ ದಿನದಿಂದ ದಿನಕ್ಕೆ ವಿಸ್ತಾರವಾಗುತ್ತಿದೆ. ಪ್ರತಿ ದಿನ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ಈಗಾಗಲೇ ಬಳ್ಳಾರಿ ಟಸ್ಕರ್ಸ್ ಆಟಗಾರರ ವಿಚಾರಣೆ ನಡೆಸಿರುವ ಪೊಲೀಸರು ಇದೀಗ ಬೆಂಗಳೂರು ಬ್ಲಾಸ್ಟರ್ಸ್ ತಂಡದ ಆಟಗಾರ ಹಾಗೂ ಕೋಚ್ ಮೇಲೆ ಪೊಲೀಸರ ಕಣ್ಣು ಬಿದ್ದಿದೆ.
ಇದನ್ನೂ ಓದಿ: KPL-TNPL ಗೂ ಇದೆಯಾ ಮ್ಯಾಚ್ ಫಿಕ್ಸಿಂಗ್ ನಂಟು..?
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ಮಾಹಿತಿಗಳು ಲಭ್ಯವಾಗಿದೆ. ಈ ಮಾಹಿತಿ ಆಧಾರದಲ್ಲಿ ಎಸಿಪಿ ಎಸ್ ಎಂ.ನಾಗರಾಜ್ ಭಾರತೀನಗರ ರಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಫಿಕ್ಸಿಂಗ್ ಸಂಬಂಧ ಸಿಸಿಬಿ ಮುಂದೆ ಹಾಜರಾಗುವಂತೆ ಬೆಂಗಳೂರು ಬ್ಲಾಸ್ಟರ್ಸ್ ಆಟಗಾರರಾದ ಎಂ.ವಿಶ್ವನಾಥನ್, ವಿನು ಪ್ರಸಾದ್ ಹಾಗೂ ಕೋಚ್ಗೆ ನೋಟೀಸ್ ನೀಡಲಾಗಿದೆ.
ಇದನ್ನೂ ಓದಿ: KPL ಫಿಕ್ಸಿಂಗ್: ಹೆಣ್ಣಿನ ಆಸೆಗೆ ಮಣ್ಣು ತಿಂದ್ರಾ ಕ್ರಿಕೆಟರ್ಸ್?
ಭಾರತೀನಗರದ ಲೆಮನ್ ಟ್ರೀ ಹೋಟೇಲ್ ನಲ್ಲಿ ನಡೆದಿತ್ತೆನ್ನಲಾದ ಫಿಕ್ಸಿಂಗ್ ವಿಚಾರದ ಕುರಿತು ಪೊಲೀಸರಿಗೆ ಮಹತ್ವದ ಸುಳಿವು ನೀಡಿದೆ. ಎಫ್ ಐ ಆರ್ ಸಂಬಂಧ ಬೆಂಗಳೂರು ಬ್ಲಾಸ್ಟರ್ಸ್ ತಂಡದ ಆಟಗಾರ ಹಾಗೂ ಕೋಚ್ ಗೆ ಐ ಓ ಪ್ರಕಾಶ್ ನೋಟೀಸ್ ನೀಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.