KPL ಮ್ಯಾಚ್ ಫಿಕ್ಸಿಂಗ್: ಪ್ರಮುಖ ಕ್ರಿಕೆಟಿಗರಿಗೆ ಗಂಡಾಂತರ..?

Published : Nov 28, 2019, 02:51 PM ISTUpdated : Nov 29, 2019, 12:16 PM IST
KPL ಮ್ಯಾಚ್ ಫಿಕ್ಸಿಂಗ್: ಪ್ರಮುಖ ಕ್ರಿಕೆಟಿಗರಿಗೆ ಗಂಡಾಂತರ..?

ಸಾರಾಂಶ

ಕರ್ನಾಟಕ ಪ್ರೀಮಿಯರ್ ಲೀಗ್ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಟೂರ್ನಿಯಲ್ಲಿ ಪಾಲ್ಗೊಂಡ ಎಲ್ಲಾ ಆಟಗಾರರ ಎದೆಯಲ್ಲಿ ಢವ ಢವ ಶುರುವಾಗಿದೆ. ಯಾಕೆ ಹೀಗೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...

ಬೆಂಗಳೂರು[ನ.28]: ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಡೆದಿದೆ ಎನ್ನಲಾದ ಮ್ಯಾಚ್ ಫಿಕ್ಸಿಂಗ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಕರ್ನಾಟಕದ ಪ್ರಮುಖ ಆಟಗಾರರು ಈ ಪ್ರಕರಣದ ಸುಳಿಗೆ ಸಿಲುಕುವ ಸಾಧ್ಯತೆಯಿದೆ ಎಂದು ಸಿಸಿಬಿ ಮೂಲಗಳು ಸುವರ್ಣ ನ್ಯೂಸ್ ಗೆ ತಿಳಿಸಿವೆ.

KPL ಮ್ಯಾಚ್ ಫಿಕ್ಸಿಂಗ್: CCB ನೋಟಿಸ್, ಅಂತಾರಾಷ್ಟ್ರೀಯ ಕ್ರಿಕೆಟಿಗನ ಎದೆಯಲ್ಲಿ ಢವ ಢವ..!

ಇದೀಗ ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಬಗ್ಗೆ ಬೆಂಗಳೂರಿನ ಸಿಸಿಬಿ ಅಧಿಕಾರಿಗಳು ಚುರುಕಿನ ಕಾರ್ಯಾಚರಣೆ ಮುಂದುವರೆಸಿದ್ದು, ಟೂರ್ನಿಯಲ್ಲಿ ಪಾಲ್ಗೊಂಡ 7 ತಂಡಗಳ ಪ್ರಮುಖ ಆಟಗಾರರು ಸೇರಿದಂತೆ ನೂರಕ್ಕೂ ಹೆಚ್ಚು ಆಟಗಾರರನ್ನು ವಿಚಾರಣೆಗೊಳಪಡಿಸಲು ಮುಂದಾಗಿದೆ. ಈಗಾಗಲೇ ಕೆಲ ತಂಡಗಳ ಮಾಲೀಕರನ್ನು ವಿಚಾರಣೆಗೊಳಪಡಿಸಿರುವ ಸಿಸಿಬಿ ಪೋಲಿಸರು, ಮುಂದುವರಿದ ಭಾಗವಾಗಿ ಪ್ರತಿ ಆಟಗಾರರ ಹೇಳಿಕೆ ಪಡೆಯಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. 

ಹಿರಿಯ ಆಟಗಾರರಿಂದ ಬೆಟ್ಟಿಂಗ್ ಕೃತ್ಯ; ವಿಚಾರಣೆ ಬಳಿಕ ಬುಲ್ಸ್ ಮಾಲೀಕನ ಹೇಳಿಕೆ!

ವರದಿ ಕೇಳಿದ ಐಸಿಸಿ:

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ತನಿಖೆ ಚುರುಕುಗೊಂಡ ಬೆನ್ನಲ್ಲೇ, ಸಿಸಿಬಿ ಮೇಲೆ ಒತ್ತಡ ಹೇರುವಂತಹ ಕೆಲಸ ನಡೆಯುತ್ತಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಇದೀಗ ಸಿಸಿಬಿ ಬೆನ್ನಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ[ICC] ನಿಂತಿದ್ದು, ಸಿಸಿಬಿ ತನಿಖೆಗೆ ಯಾರೂ ಅಡ್ಡಿಪಡಿಸುವಂತಿಲ್ಲ ಎಂದು ಖಡಕ್ ಸೂಚನೆ ರವಾನಿಸಿದೆ.

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಬಗ್ಗೆ ಈವರೆಗೆ ನಡೆದಿರುವ ತನಿಖಾ ವರದಿ ಸಲ್ಲಿಸುವಂತೆ ಸಿಸಿಬಿಗೆ ಐಸಿಸಿ ವರದಿ ಕೇಳಿದೆ. ಐಸಿಸಿ ನೀಡಿದ ಕೆಲ ಸೂಕ್ಷ್ಮ ಮಾಹಿತಿ ಅನ್ವಯ ತನಿಖೆ ಚುರುಕುಗೊಂಡಿದ್ದು, ದೊಡ್ಡ-ದೊಡ್ಡ ತಲೆಗಳೇ ಉರುಳುವ ಸೂಚನೆಯನ್ನು ಸಿಸಿಬಿ ಅಧಿಕಾರಿಗಳು ನೀಡಿದ್ದಾರೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ
ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ