
ಬೆಂಗಳೂರು(ಮಾ.12): ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಹುತೇಕ ಎಲ್ಲಾ ಕಾರ್ಯಕ್ರಮಗಳು ರದ್ದಾಗುತ್ತಿದೆ. ಕ್ರೀಡಾಕೂಟ ಮುಂದೂಡಿಕೆಯಾಗುತ್ತಿದೆ. ಇದೀಗ ವೈರಸ್ ಆತಂಕ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೂ ತಟ್ಟಿದೆ. ಮಾರ್ಚ್ 22ರಂದು ಆಯೋಜಿಸಲಾಗಿದ್ದ ಕೆಎಸ್ಸಿಎ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಮುಂದೂಡಲಾಗಿದೆ.
ಇದನ್ನೂ ಓದಿ: ಕ್ರಿಕೆಟ್ಗೆ ತಟ್ಟಿತೂ ಕೊರೋನಾ ವೈರಸ್; ಪಂದ್ಯ ಮುಂದೂಡಿಕೆ!
ಈ ಬಾರಿಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಯ್ಯದ್ ಮುಷ್ತಾಕ್ ಆಲಿ ಹಾಗೂ ವಿಜಯ್ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ ತಂಡದ ಕ್ರಿಕೆಟಿಗರು ಅಭಿನಂದಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿತ್ತು. ಇದರ ಜೊತೆಗೆ ಪ್ರತಿ ವರ್ಷದಂತೆ ಕಳೆದ ಸಾಲಿನಲ್ಲಿ ಉತ್ತಮ ಪ್ರದರ್ಶನ ನೀಡಿದ ಪ್ರತಿಭಾನ್ವಿತ ಕ್ರಿಕೆಟಿಗರಿಗೆ ಪ್ರಶಸ್ತಿ ನೀಡಲಾಗುತ್ತಿತ್ತು
ಇದನ್ನೂ ಓದಿ:ಈ ವರ್ಷ IPL ಆಯೋಜನೆ ಬೇಡವೆಂದ ವಿದೇಶಾಂಗ ಸಚಿವಾಲಯ..!
ಆದರೆ ಕೊರೋನಾ ವೈರಸ್ ಆತಂಕದಿಂದ ಮೇ 22 ರಂದು ಆಯೋಜಿಸಿದ್ದ ಸಮಾರಂಭವನ್ನು ಮುಂದೂಡಲಾಗಿದೆ. ಈ ಕುರಿತು ಸಭೆ ನಡೆಸಿದ ಕೆಎಸ್ಸಿಎ ಪದಾಧಿಕಾರಿಗಳು ಸಮಾರಂಭ ಮುಂದೂಡಲು ನಿರ್ಧರಿಸಿದ್ದಾರೆ. ಕೊರೋನಾ ವೈರಸ್ ಹತೋಟಿಗೆ ಬಂದ ಬಳಿಕ ನೂತನ ದಿನಾಂಕ ಪ್ರಕಟಿಸಲಾಗುವುದು ಎಂದು ಕೆಎಸ್ಸಿಎ ಮಾಧ್ಯಮ ವಕ್ತಾರ ವಿನಯ್ ಮೃತ್ಯುಂಜಯ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.