ಲಾಕ್‌ಡೌನ್ 4.0: ಕ್ರಿಕೆಟ್, ಕ್ರೀಡಾ ಚಟುವಟಿಕೆಗೆ ಅನುಮತಿ ಆದ್ರೆ ಷರತ್ತು ಅನ್ವಯ!

Suvarna News   | Asianet News
Published : May 17, 2020, 08:22 PM ISTUpdated : May 17, 2020, 08:30 PM IST
ಲಾಕ್‌ಡೌನ್ 4.0: ಕ್ರಿಕೆಟ್, ಕ್ರೀಡಾ ಚಟುವಟಿಕೆಗೆ ಅನುಮತಿ ಆದ್ರೆ ಷರತ್ತು ಅನ್ವಯ!

ಸಾರಾಂಶ

ಕೊರೋನಾ ವೈರಸ್ ನಿಯಂತ್ರಣಕ್ಕೆ ಇದೀಗ ಲಾಕ್‌ಡೌನ್ 4.0 ನಾಳೆಯಿಂದ(ಮೇ.18)ರಿಂದ ಆರಂಭಗೊಳ್ಳುತ್ತಿದೆ. ನೂತನ ಲಾಕ್‌ಡೌನ್ 4.0 ನಿಯಮದಲ್ಲಿ ಹಲವು ವಲಯಗಳಿಗೆ ವಿನಾಯಿತಿ ನೀಡಲಾಗಿದೆ. ಇದರಲ್ಲಿ ಕ್ರಿಕೆಟ್ ಕ್ರೀಡಾಂಗಣ, ಕ್ರೀಡಾ ಕಾಂಪ್ಲೆಕ್ಸ್ ತೆರೆಯಲು ಅನುಮತಿ ನೀಡಲಾಗಿದ್ದು, ಷರತ್ತು ವಿಧಿಸಿದೆ.

ನವದೆಹಲಿ(ಮೇ.17): ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಹೇರಲಾಗಿದ್ದ ಲಾಕ್‌ಡೌನ್ 3.0 ಅಂತ್ಯವಾಗುತ್ತಿದ್ದು, ಇದೀಗ ಕೇಂದ್ರ ಸರ್ಕಾರ ಲಾಕ್‌ಡೌನ್ 4.0 ಹೇರಲಾಗಿದೆ. ಮೇ.18 ರಿಂದ ಮೇ.31ರ ವರೆಗೆ ಲಾಕ್‌ಡೌನ್ 4.0 ಜಾರಿಯಲ್ಲಿರಲಿದೆ. ನೂತನ ಲಾಕ್‌ಡೌನ್ ನಿಯಮದಲ್ಲಿ ಕ್ರೀಡಾ ಚಟುವಟಿಕೆಗೆ ಅನುಮತಿ ನೀಡಲಾಗಿದೆ. ಆದರೆ ಕೆಲ ಷರತ್ತುಗಳನ್ನು ವಿಧಿಸಲಾಗಿದೆ.

1 ಓವರ್ ಎಂದು ಒಂದು ದಿನ ಬ್ಯಾಟಿಂಗ್; ದ್ರಾವಿಡ್ ಜೊತೆಗಿನ ಜೊತೆಯಾಟ ನೆನಪಿಸಿದ ಲಕ್ಷ್ಮಣ್!.

ಕ್ರೀಡಾಪಟುಗಳ ತರಬೇತಿ, ಕ್ರಿಕೆಟಿಗರ ಅಭ್ಯಾಸ, ನೆಟ್ ಪ್ರಾಕ್ಟೀಸ್‌ಗೆ ಕ್ರೀಡಾಂಗಣಗಳನ್ನು, ಕ್ರೀಡಾ ಕಾಂಪ್ಲೆಕ್ಸ್‌ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಪ್ರೇಕ್ಷರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಮುಖವಾಗಿ SAI(ಕ್ರೀಡಾ ಪ್ರಾಧಿಕಾರ)ಅಧೀನದಲ್ಲಿರುವ ಕ್ರೀಡಾ ಕಾಂಪ್ಲೆಕ್ಸ್‌ಗಳಲ್ಲಿ ಕ್ರೀಡಾಪಟುಗಳಿಗೆ ತರಬೇತಿ ನೀಡಲಾಗುತ್ತದೆ. ಅದರಲ್ಲೂ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಕ್ರೀಡಾಪಟುಗಳಿಗೆ ತರಬೇತಿ ನೀಡಲಾಗುತ್ತದೆ. ಇದಕ್ಕೆ ಅವಕಾಶ ನೀಡಲಾಗಿದೆ.

ಮೋದಿ ಹೇಳಿದಂತೆ ಮೇ.31ರ ವರೆಗೆ ಲಾಕ್‌ಡೌನ್ ವಿಸ್ತರಣೆ‌: ಏನಿರುತ್ತೆ? ಏನಿರಲ್ಲ?.

ಸಾಯಿ ಸೆಂಟರ್‌ ಬೆಂಗಳೂರು ಹಾಗೂ ಪಟಿಯಾಲದ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ಗಳು ಕ್ರೀಡಾಪಟುಗಳ ತರಬೇತಿಗಾಗಿ ತೆರೆಯಲಾಗುತ್ತಿದೆ. ಆರಂಭಿಕ ಹಂತದಲ್ಲಿ ಕೇವಲ 2 ಕ್ರೀಡಾ ತರಬೇತಿ ಸೆಂಟರ್ ಹಾಗೂ ಕ್ರೀಡಾ ಕಾಂಪ್ಲೆಕ್ಸ್ ತೆರೆಯಲಾಗುತ್ತಿದೆ. ಕಳೆದ ವಾರ ಕೇಂದ್ರ ಕ್ರೀಡಾ ಮಂತ್ರಿ ಕಿರಣ್ ರಿಜಿಜು ಈ ಕುರಿತು ಸುಳಿವು ನೀಡಿದ್ದರು. ಇದೀಗ ಕೇಂದ್ರ ಗೃಹ ಇಲಾಖೆ ಬಿಡುಗಡೆ ಮಾಡಿರುವ ಲಾಕ್‌ಡೌನ್ 4.0 ಮಾರ್ಗಸೂಚಿಯಲ್ಲಿ ಈ ಕುರಿತು ಹೇಳಲಾಗಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!
ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ