IPL 2023: ಲಖನೌ ಸೂಪರ್ ಜೈಂಟ್ಸ್‌ ನೂತನ ಜೆರ್ಸಿ ಅನಾವರಣ ಮಾಡಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ..!

Published : Mar 07, 2023, 05:13 PM IST
IPL 2023: ಲಖನೌ ಸೂಪರ್ ಜೈಂಟ್ಸ್‌ ನೂತನ ಜೆರ್ಸಿ ಅನಾವರಣ ಮಾಡಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ..!

ಸಾರಾಂಶ

ಲಖನೌ ಸೂಪರ್ ಜೈಂಟ್ಸ್ ತಂಡದ ನೂತನ ಜೆರ್ಸಿ ಅನಾವರಣ ಜೆರ್ಸಿ ಅನಾವರಣ ಕಾರ್ಯಕ್ರಮದಲ್ಲಿ ಜಯ್ ಶಾ ಭಾಗಿ ಇನ್ನಾದರೂ ಲಖನೌ ತಂಡದ ಅದೃಷ್ಟ ಬದಲಾಗುತ್ತಾ?

ನವದೆಹಲಿ(ಮಾ.07): ಬಹುನಿರೀಕ್ಷಿತ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೀಗಿರುವಾಗಲೇ ಲಖನೌ ಸೂಪರ್ ಜೈಂಟ್ಸ್‌ ತಂಡವು ಟೂರ್ನಿಗೆ ಎಲ್ಲರಿಗಿಂತ ಮುಂಚಿತವಾಗಿಯೇ ಸಜ್ಜಾದಂತೆ ಕಂಡು ಬರುತ್ತಿದ್ದು, ಇದೀಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಲಖನೌ ಸೂಪರ್‌ ಜೈಂಟ್ಸ್ ತಂಡದ ಜೆರ್ಸಿ ಅನಾವರಣ ಮಾಡಿದ್ದಾರೆ. ಈ ಬಾರಿ ಕೆ ಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು ಕಡು ನೀಲಿ ಬಣ್ಣದ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ.

ಕಳೆದ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್‌ ತಂಡವು ತಿಳಿ ನೀಲಿ ಮಿಶ್ರಿತ ಜೆರ್ಸಿಯಲ್ಲಿ ಕಣಕ್ಕಿಳಿದಿತ್ತು. ತಾನಾಡಿದ ಚೊಚ್ಚಲ ಆವೃತ್ತಿಯ ಐಪಿಎಲ್‌ನಲ್ಲೇ ಲಖನೌ ಸೂಪರ್ ಜೈಂಟ್ಸ್ ತಂಡವು ಪ್ಲೇ ಆಫ್ ಹಂತವನ್ನು ಪ್ರವೇಶಿಸಿತ್ತಾದರೂ, ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಎದುರು ಮುಗ್ಗರಿಸುವ ಮೂಲಕ ನಿರಾಸೆ ಅನುಭವಿಸಿತ್ತು. 

ಜೆರ್ಸಿ ಅನಾವರಣ ಸಂದರ್ಭದಲ್ಲಿ ಲಖನೌ ಸೂಪರ್ ಜೈಂಟ್ಸ್‌ ಫ್ರಾಂಚೈಸಿಯು ಫ್ಯಾಷನ್ ಶೋ ಏರ್ಪಡಿಸಿತ್ತು. ಈ ಫ್ಯಾಷನ್ ಶೋನಲ್ಲಿ ಲಖನೌ ಸೂಪರ್ ಜೈಂಟ್ಸ್‌ನ ಹಲವು ತಾರೆಯರು ಪಾಲ್ಗೊಂಡಿದ್ದರು. ಲಖನೌ ಸೂಪರ್ ಜೈಂಟ್ಸ್ ತಂಡದ ಜೆರ್ಸಿ ಅನಾವರಣ ಕಾರ್ಯಕ್ರಮದಲ್ಲಿ ರವಿ ಬಿಷ್ಣೋಯಿ, ಆವೇಶ್ ಖಾನ್, ಜಯದೇವ್ ಉನಾದ್ಕತ್, ದೀಪಕ್ ಹೂಡಾ ಹಾಗೂ ನಾಯಕ ಕೆ ಎಲ್ ರಾಹುಲ್ ಅವರು ಹಾಜರಿದ್ದರು. ಇನ್ನುಳಿದಂತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಲಖನೌ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ, ಹಾಗೂ ಟೀಂ ಮೆಂಟರ್ ಗೌತಮ್ ಗಂಭೀರ್ ಕೂಡಾ ಉಪಸ್ಥಿತರಿದ್ದರು. ನೂತನ ಜೆರ್ಸಿಯು ಲಖನೌ ಸೂಪರ್ ಜೈಂಟ್ಸ್ ತಂಡದ ಅದೃಷ್ಟವನ್ನು ಬದಲಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಆತ್ಮೀಯ ಗೆಳೆಯ ವಿರಾಟ್ ಕೊಹ್ಲಿಯನ್ನೇ ಮರೆತ ಎಬಿಡಿ..! ವಿರಾಟ್-ಗೇಲ್‌ಗಿಂತ ಈತನೇ ಅತಿದೊಡ್ಡ ಮ್ಯಾಚ್ ವಿನ್ನರ್‌ ಅಂತೆ..!

ಕಳೆದ ಆವೃತ್ತಿಯಲ್ಲಿ ನೂತನವಾಗಿ ಇಂಡಿಯನ್‌ ಪ್ರೀಮಿಯರ್ ಲೀಗ್‌ಗೆ ಪ್ರವೇಶ ಪಡೆದ ಲಖನೌ ಸೂಪರ್ ಜೈಂಟ್ಸ್‌ ತಂಡವು ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ತೋರುವ ಮೂಲಕ ಲೀಗ್ ಹಂತದ ಅಂತ್ಯದ ವೇಳೆಗೆ ಮೂರನೇ ಸ್ಥಾನ ಪಡೆದಿತ್ತು. 14 ಪಂದ್ಯಗಳನ್ನಾಡಿ 9 ಗೆಲುವು ಹಾಗೂ 5 ಸೋಲು ಸಹಿತ 18 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದಿತ್ತು. ಇನ್ನು ರಾಜಸ್ಥಾನ ರಾಯಲ್ಸ್ ಕೂಡಾ 18 ಅಂಕ ಪಡೆದಿತ್ತಾದರೂ, ನೆಟ್‌ರನ್‌ ರೇಟ್‌ ಉತ್ತಮವಾಗಿದ್ದರಿಂದ, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದು, ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡಲು ಅರ್ಹತೆ ಗಿಟ್ಟಿಸಿಕೊಂಡಿತ್ತು. ಇನ್ನು ನಾಯಕನ ಆಟವಾಡಿದ್ದ ಕೆ ಎಲ್ ರಾಹುಲ್ 15 ಪಂದ್ಯಗಳನ್ನಾಡಿ 51.33ರ ಬ್ಯಾಟಿಂಗ್ ಸರಾಸರಿಯಲ್ಲಿ 616 ರನ್ ಚಚ್ಚಿದ್ದರು. ಆದರೆ ಈ ಬಾರಿಯ ಫಾರ್ಮ್‌ ಸಮಸ್ಯೆ ಎದುರಿಸುತ್ತಿರುವ ಕೆ ಎಲ್ ರಾಹುಲ್, ಐಪಿಎಲ್‌ನಲ್ಲಿ ಯಾವ ರೀತಿ ಪ್ರದರ್ಶನ ತೋರಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ICC Men’s T20 World Cup: ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ: ಅಚ್ಚರಿಯ ಆಯ್ಕೆ, ಗಿಲ್‌ಗಿಲ್ಲ ಸ್ಥಾನ
ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ