
ಹೈದರಾಬಾದ್(ಜು.11): ಮಾಜಿ ಕ್ರಿಕೆಟಿಗ, ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಮೊಹಮ್ಮದ್ ಅಜರುದ್ದೀನ್ ಅವರನ್ನು ಬಿಸಿಸಿಐ ಕಾರ್ಯಕಾರಣಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಿದೆ. ಈ ಮೂಲಕ ಭ್ರಷ್ಟಾಚಾರ ಆರೋಪದಡಿ ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಸ್ಥಾನದಿಂದ ವಜಾಗೊಂಡು ಮತ್ತೆ ಮರುನೇಮಕ ಗೊಂಡಿದ್ದ ಅಜರ್ಗೆ ಇದೀಗ ಜಾಕ್ಪಾಟ್ ಸಿಕ್ಕಿದೆ.
ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಮೊಹಮ್ಮದ್ ಅಜರುದ್ದೀನ್ ಸಸ್ಪೆಂಡ್..!
7 ಮಂದಿ ಸದಸ್ಯರ ಬಿಸಿಸಿಐ ಕಾರ್ಯಕಾರಣಿ ಸಮಿತಿ ಸೇರಿಕೊಂಡಿರುವ ಮೊಹಮ್ಮದ್ ಅಜರುದ್ದೀನ್, 2021-22ರ ದೇಶಿ ಟೂರ್ನಿಯ ಮೇಲ್ವಿಚಾರಣೆ ಮಾಡಲಿದ್ದಾರೆ. ಅಜರ್ ಜೊತೆ ಜಯದೇವ್ ಷಾ, ರೋಹನ್ ಜೇಟ್ಲಿ, ಯುಧ್ವೀರ್ ಸಿಂಗ್, ದೇವಾಜಿತ್ ಸೈಕಿಯಾ, ಅವಿಶೇಕ್ ದಾಲ್ಮಿಯಾ ಮತ್ತು ಕರ್ನಾಟಕ ಕ್ರಿಕಟ್ ಸಂಸ್ಥೆಯ ಸಂತೋಷ್ ಮೆನನ್ ಇತರ ಸದಸ್ಯರಾಗಿದ್ದಾರೆ.
ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿ ಅಜರುದ್ದೀನ್ ಮರು ನೇಮಕ..
ಕೊರೋನಾ ಕಾರಣ ಕಡಿತಗೊಳಿಸಿರುವ ದೇಶಿ ಕ್ರಿಕೆಟಿಗರ ಪರಿಹಾರ ಪ್ಯಾಕೇಜ್ ಸೇರಿದಂತೆ ಪ್ರಮುಖ ವಿಚಾರಗಳ ಕುರಿತು ಈ ಸಮಿತಿ ಮೇಲ್ವಿಚಾರಣೆ ನಡೆಸಲಿದೆ. ಕಳೆದ ವರ್ಷ ದೇಶಿ ಟೂರ್ನಿ ಆಯೋಜನೆ ಪೂರ್ಣ ಪ್ರಮಾಣದಲ್ಲಿ ಸಾಧ್ಯವಾಗಿಲ್ಲ. ಹೀಗಾಗಿ ಕ್ರಿಕೆಟಿಗ ಒಪ್ಪಂದದ ಗಳಿಕೆ, ಪರಿಹಾರ ಪ್ಯಾಕೇಜ್ ಸೇರಿದಂತೆ ಕ್ರಿಕೆಟಿಗರ ಹಾಗೂ ದೇಶಿ ಟೂರ್ನಿ ಕುರಿತು ಮೇಲ್ವಿಚಾರಣೆ ಮಾಡಲಿದೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.