
ಗಬ್ಬಾ(ಜ.15): ಸಿಡ್ನಿ ಟೆಸ್ಟ್ ಪಂದ್ಯದಲ್ಲಿನ ಭಾರತೀಯ ಬೌಲರ್ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಮೇಲೆ ಜನಾಂಗೀಯ ನಿಂದನೆ ಮಾಡಲಾಗಿತ್ತು. ಈ ಕುರಿತು ಟೀಂ ಇಂಡಿಯಾ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ. ಇನ್ನು ಆಸ್ಟ್ರೇಲಿಯಾ ನಾಯಕ ಟಿಮ್ ಪೈನೆ ಸೇರದಂತೆ ಮಾಜಿ ಕ್ರಿಕೆಟಿಗರು, ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು. ಆದರೆ ಆಸ್ಟ್ರೇಲಿಯಾ ಅಭಿಮಾನಿಗಳ ವರ್ತನೆ ಬದಲಾಗಿಲ್ಲ.
ಸಿರಾಜ್ ಮೇಲೆ ಮತ್ತೆ ಜನಾಂಗೀಯ ನಿಂದನೆ; 6 ಪ್ರೇಕ್ಷಕರ ಹೊರದಬ್ಬಿದ ಸಿಬ್ಬಂದಿ!..
4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಅಭಿಮಾನಿಗಳು ಮತ್ತೆ ಜನಾಂಗೀಯ ನಿಂದನೆ ಮಾಡಿದ್ದಾರೆ. ಫೀಲ್ಡಿಂಗ್ ಮಾಡುತ್ತಿದ್ದ ವೇಗಿ ಮೊಹಮ್ಮದ್ ಸಿರಾಜ್ಗೆ ನಿಂದನೆ ಮಾಡಿದ್ದಾರೆ. ಹುಳ, ಕೋತಿ ಎಂದು ಕರೆದಿದ್ದಾರೆ. ಈ ಕುರಿತು ಟೀಂ ಇಂಡಿಯಾ ಮ್ಯಾಚ್ ರೆಫ್ರಿಗೆ ದೂರು ನೀಡಿದೆ. ಸಿರಾಜ್ ಮಾತ್ರವಲ್ಲ ವಾಶಿಂಗ್ಟನ್ ಸುಂದರ್ಗೂ ಇದೇ ರೀತಿ ನಿಂದನೆ ಮಾಡಲಾಗಿದೆ.
ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಅಭಿಮಾನಿಗಳ ವರ್ತನೆಗೆ ಕ್ರಿಕೆಟ್ ಆಸ್ಟ್ರೇಲಿಯಾ ಕ್ಷಣೆ ಕೇಳಿತ್ತು. ಇದೀಗ ಗಬ್ಬಾದಲ್ಲೂ ಇದೇ ರೀತಿ ವರ್ತನೆ ಮರುಕಳಿಸಿದೆ. ಇದೀಗ ಗಬ್ಬಾ ಟೆಸ್ಟ್ ಪಂದ್ಯದಲ್ಲಿನ ಘಟನೆ ಕುರಿತು ಆಸ್ಟ್ರೇಲಿಯಾ ತನಿಖೆ ನಡೆಸುತ್ತಿದೆ. ಇತ್ತ ಐಸಿಸಿ ಈ ಕುರಿತು ಕ್ರಮ ಕೈಗೊಳ್ಳುವಂತೆ ಕ್ರಿಕೆಟ್ ಆಸ್ಟ್ರೇಲಿಯಾಗೆ ಸೂಚಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.