
ಮುಂಬೈ(ಡಿ.28): ಕ್ರಿಕೆಟ್ನಿಂದ ದೂರ ಉಳಿದಿರುವ ಎಂ.ಎಸ್.ಧೋನಿ ಮತ್ತೆ ತಂಡಕ್ಕೆ ವಾಪಸ್ಸಾಗಲಿ ಅನ್ನೋದು ಅಭಿಮಾನಿಗಳ ಆಶಯ. ಸದ್ಯ ಧೋನಿ ಬದಲು ತಂಡ ಸೇರಿಕೊಂಡಿರುವ ರಿಷಪ್ ಪಂತ್ ಕಳಪೆ ಪ್ರದರ್ಶನ ಅಭಿಮಾನಿಗಳ ಚಿಂತೆ ಹೆಚ್ಚಿಸಿದೆ. ಧೋನಿ ವಿದಾಯ ಹೇಳಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಧೋನಿ ಕರಿಯರ್ ಕುರಿತು ಮಾತನಾಡಿದ್ದಾರೆ.
ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 15 ವರ್ಷ ಪೂರೈಸಿದ ಧೋನಿ
ಎಂ.ಎಸ್.ಧೋನಿ ತಮ್ಮ ಕ್ರಿಕೆಟ್ ಕರಿಯರ್ ಕುರಿತು ನಾಯಕ ವಿರಾಟ್ ಕೊಹ್ಲಿ ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥರ ಜೊತೆ ಮಾತನಾಡಿದ್ದಾರೆ. ಈ ಇದೀಗ ನಾನು ಧೋನಿ ಭವಿಷ್ಯ ಕುರಿತು ಹೇಳಿಕೆ ನೀಡುವುದು ಸರಿಯಲ್ಲ. ಧೋನಿ ನನ್ನ ಬಳಿ ಯಾವುದೇ ರೀತಿ ಮಾತುಕತೆ ನಡೆಸಿಲ್ಲ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.
ಇದನ್ನೂ ಓದಿ: ವಿಸ್ಡನ್ ದಶಕದ ಏಕದಿನ ತಂಡ ಪ್ರಕಟ; 3 ಭಾರತೀಯರಿಗೆ ಸ್ಥಾನ!.
ಮತ್ತೊಬ್ಬ ಧೋನಿ ಸಿಗಲಾರ. ಆದರೆ ಹೊಸ ವಿಕೆಟ್ ಕೀಪರ್ ರೆಡಿ ಮಾಡೋ ಜವಾಬ್ದಾರಿ ಆಯ್ಕೆ ಸಮಿತಿಗಿದೆ ಎಂದು ಗಂಗೂಲಿ ಹೇಳಿದ್ದಾರೆ. ನಾಯಕ ಹಾಗೂ ಆಯ್ಕೆ ಸಮಿತಿ ಜೊತೆ ಧೋನಿ ಮಾತನಾಡಿದ ಬಳಿಕವೂ ತಂಡಕ್ಕೆ ಆಯ್ಕೆಯಾಗಿಲ್ಲ ಎಂದಾದರೆ ಧೋನಿ ಕ್ರಿಕೆಟ್ನಿಂದ ನಿವತ್ತಿಗೆ ಸಜ್ಜಾಗಿದ್ದಾರೆ ಅನ್ನೋ ಆತಂಕ ಅಭಿಮಾನಿಗಳನ್ನು ಕಾಡುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.