
ಲಂಡನ್(ಏ.11): ಕೊರೋನಾ ವೈರಸ್ ಕಾರಣ ಐಪಿಎಲ್ ಟೂರ್ನಿ ರದ್ದಾಗಿದೆ. ಹೀಗಾಗಿ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಟೀಂ ಇಂಡಿಯಾಗೆ ಕಮ್ಬ್ಯಾಕ್ ಮಾಡಲಿದ್ದಾರೆ ಅನ್ನೋ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಇತ್ತ ಆಯ್ಕೆ ಸಮಿತಿ ಕೂಡ ಐಪಿಎಲ್ ಪ್ರದರ್ಶನ ಆಧರಿಸಿ ಧೋನಿ ಆಯ್ಕೆ ನಡೆಯಲಿದೆ ಎಂದಿದ್ದರು. ಆದರೆ ಅದ್ಯಾವುದು ಆಗಲೇ ಇಲ್ಲ. ಇದರ ಬೆನ್ನಲ್ಲೇ ಧೋನಿ ನಿವೃತ್ತಿಗೆ ಒತ್ತಡಗಳು ಕೇಳಿಬರುತ್ತಿದೆ.
ನಿವೃತ್ತಿ ಮಾತುಗಳು ಕೇಳಿ ಬರುತ್ತಿರುವ ಈ ಸಂದರ್ಭದಲ್ಲಿ ಇಂಗ್ಲೆಂಡ್ ಮಾಜಿ ನಾಯಕ ನಾಸಿರ್ ಹುಸೈನ್ ಭಾರತೀಯರಿಗೆ ಸಲಹೆ ನೀಡಿದ್ದಾರೆ. ಧೋನಿ ನಿವೃತ್ತಿಗೆ ಒತ್ತಡ ಹೇರುವುದು ಸೂಕ್ತವಲ್ಲ. ಕಾರಣ ಧೋನಿ ಈ ಪೀಳಿಗೆಯ ಕ್ರಿಕೆಟಿಗ. ಧೋನಿ ನಿವೃತ್ತಿಯಾದರೆ ಮತ್ತೊಬ್ಬ ಧೋನಿ ಸಿಗಲಾರ. ಇಷ್ಟೇ ಅಲ್ಲ ಈ ಪೀಳಿಗೆಯಲ್ಲಿ ಮತ್ತೊಬ್ಬ ಧೋನಿ ಹುಟ್ಟಲಾರ. ಹೀಗಾಗಿ ಧೋನಿ ತಂಡದಲ್ಲಿರುವುದು ಸೂಕ್ತ ಎಂದಿದ್ದಾರೆ.
39 ವರ್ಷದ ಧೋನಿಯಲ್ಲಿನ್ನು ಕ್ರಿಕೆಟ್ ಬಾಕಿ ಇದೆ. ಟೀಂ ಇಂಡಿಯಾಗೆ ಸಾಕಷ್ಟು ಕೊಡುಗೆ ನೀಡಲು ಬಾಕಿ ಇದೆ. ಮತ್ತೊಂದು ಟ್ರೋಫಿ ಗೆಲ್ಲಿಸಿಕೊಡುವ ಶಕ್ತಿ, ಸಾಮರ್ಥ್ಯ ಹಾಗೂ ಫಿಟ್ನೆಸ್ ಧೋನಿ ಬಳಿ ಇದೆ. ಹೀಗಿರುವಾಗ ಧೋನಿ ನಿವೃತ್ತಿ ಬಯಸುವುದು ಎಷ್ಟು ಸರಿ ಎಂದು ನಾಸಿರ್ ಹುಸೈನ್ ಪ್ರಶ್ನಿಸಿದ್ದಾರೆ.
2019ರ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಧೋನಿ ಕೊನೆಯಬಾರಿಗೆ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ಟೀಂ ಇಂಡಿಯಾದಿಂದ ದೂರ ಉಳಿದ ಧೋನಿ ಯಾವುದೇ ಕ್ರಿಕೆಟ್ ಪಂದ್ಯ ಆಡಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.