ಆಯ್ಕೆ ಸಮಿತಿಯಿಂದ ನಿರ್ಲಕ್ಷ್ಯ; ಪ್ಲಾನ್ 'ಬಿ'ಗೆ ಧೋನಿ ಸಜ್ಜು!

Published : Oct 26, 2019, 06:05 PM IST
ಆಯ್ಕೆ ಸಮಿತಿಯಿಂದ ನಿರ್ಲಕ್ಷ್ಯ; ಪ್ಲಾನ್ 'ಬಿ'ಗೆ ಧೋನಿ ಸಜ್ಜು!

ಸಾರಾಂಶ

ಎಂ.ಎಸ್.ಧೋನಿ ಬದಲು ಹೊಸಬರಿಗೆ ಅವಕಾಶ ನೀಡುವ  ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ. ಪ್ರಸಾದ್ ಹೇಳಿಕೆಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಟೀಂ ಇಂಡಿಯಾ ಅವಕಾಶ ವಂಚಿತವಾಗಿರುವ ಧೋನಿ ಹೊಸ ಪ್ಲಾನ್ ಮಾಡಿದ್ದಾರೆ. 

ರಾಂಚಿ(ಅ.26): ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ವಿದಾಯದ ಸಮಯ ಹತ್ತಿರವಾಗುತ್ತಿದೆ. ಬಾಂಗ್ಲಾದೇಶ ವಿರುದ್ದದ ಸರಣಿಗೆ ತಂಡ ಆಯ್ಕೆಯಾದಗ ಧೋನಿ ಅಭಿಮಾನಿಗಳಿಗೆ ಅಚ್ಚರಿ ಕಾದಿತ್ತು. ಧೋನಿಯನ್ನು ಆಯ್ಕೆ ಸಮತಿ ನಿರ್ಲಕ್ಷ್ಯಿಸಿತ್ತು. ಈ ಮೂಲಕ ಸತತ 3ನೇ ಸರಣಿಯಿಂದ ಧೋನಿ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಧೋನಿ ಇದೀಗ ಪ್ಲಾನ್ ಬಿ ಜಾರಿ ಮಾಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ಲೆಜೆಂಡ್, ಗ್ರೇಟ್ ಎಂದು ಹೇಳಿ ಧೋನಿ ಕಡೆಗಣಿಸಿದ ಬಿಸಿಸಿಐ!

2019ರ ವಿಶ್ವಕಪ್ ಟೂರ್ನಿ ಬಳಿಕ ಧೋನಿ ಕ್ರಿಕೆಟ್‌ ಅಖಾಡಕ್ಕಿಳಿದಿಲ್ಲ. ಇದೀಗ ಬಾಂಗ್ಲಾ ಸರಣಿಯಿಂದ ಔಟಾದ ಬೆನ್ನಲ್ಲೇ, ಧೋನಿ, ತಮ್ಮ ತವರೂರು ರಾಂಚಿಯಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಲು ಮುಂದಾಗಿದ್ದಾರೆ. ಆರಂಭಿಕ ಹಂತದಲ್ಲಿ ರಾಂಚಿಯಲ್ಲಿ ಆರಂಭಿಸಿ, ಬಳಿಕ ಭಾರತದ ಎಲ್ಲಾ ನಗರಗಳಲ್ಲಿ ಹಾಗೂ ವಿದೇಶದಲ್ಲಿ ಧೋನಿ ಕ್ರಿಕೆಟ್ ಅಕಾಡೆಮಿ ಆರಂಭಿಸಲು ಚಿಂತನೆ ನಡೆಸಿದ್ದಾರೆ.

ಇದನ್ನೂ ಓದಿ: ಕಾರು ತೊಳೆದು ಸುಸ್ತಾದ ಧೋನಿಗೆ ಪುತ್ರಿ ಝಿವಾ ಮಸಾಜ್!

ಧೋನಿ ಬಾಲ್ಯದ ಗೆಳೆಯ ಹಾಗೂ ಆಕ್ರಾ ಸ್ಪೋರ್ಟ್ ಅಕಾಡೆಮಿ ಮ್ಯಾನೇಜರ್ ಮಿಹಿರ್ ದಿವಾಕರ್, ಧೋನಿ ಕ್ರಿಕೆಟ್ ಅಕಾಡೆಮಿಗೆ ಸ್ಥಳ ಗುರುತಿಸಲು ಮುಂದಾಗಿದ್ದಾರೆ. ಸ್ಥಳೀಯ ಶಾಲೆ ಜೊತೆ ಒಪ್ಪಂದ ಮಾಡಿಕೊಳ್ಳೋ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೆ ಕ್ರಿಕೆಟ್ ತರಬೇತಿ ನೀಡಲು ಯೋಜನೆ ಹಾಕಿಕೊಂಡಿದ್ದಾರೆ. 

ಎಲ್ಲವೂ ಪ್ಲಾನ್ ಪ್ರಕಾರ ನಡೆದರೆ,  2020ರ ವೇಳೆಗೆ ಧೋನಿ ಕ್ರಿಕೆಟ್ ಅಕಾಡೆಮಿ ರಾಂಚಿಯಲ್ಲಿ ತಲೆ ಎತ್ತಲಿದೆ. ಇತ್ತ ಟೀಂ ಇಂಡಿಯಾದಲ್ಲಿ ಅವಕಾಶ ಕಡಿಮೆಯಾಗುತ್ತಿರುವ ಕಾರಣ, ಧೋನಿ ಕ್ರಿಕೆಟ್‌ಗೆ ವಿದಾಯ ಹೇಳಿ ಕ್ರಿಕೆಟ್ ಅಕಾಡೆಮಿಯಲ್ಲಿ ಜ್ಯೂನಿಯರ್ ಧೋನಿಯನ್ನು ರೆಡಿ ಮಾಡುವ ಸಾಧ್ಯತೆ ಹೆಚ್ಚಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆಎಸ್‌ಸಿಎ ಚುನಾವಣೆ: ಅಸ್ತಿತ್ವದಲ್ಲೇ ಇಲ್ಲದ ಕ್ಲಬ್‌ಗಳ ಹೆಸರು ಮತದಾನ ಪಟ್ಟಿಯಲ್ಲಿ ಪತ್ತೆ!
ಭಾರತ-ಆಫ್ರಿಕಾ ಫೈನಲ್ ಫೈಟ್: ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?