
ಐಪಿಎಲ್ (IPL) ಅಂಗಳದಲ್ಲಿ ಒಂದು ಸುದ್ದಿ ಭಾರೀ ಸಂಚಲನ ಸೃಷ್ಟಿಸುತ್ತಿದೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮುಂಬರುವ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಆಡಲಿದ್ದಾರೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಈ 'ಬಿಗ್ ಟ್ರೇಡ್' ಡೀಲ್ ಅಷ್ಟು ಸುಲಭವಾಗಿಲ್ಲ. ಹಾರ್ದಿಕ್ನನ್ನು ಬಿಟ್ಟುಕೊಡಲು ಮುಂಬೈ ಇಂಡಿಯನ್ಸ್ ಮಾಲೀಕರು ಸಿಎಸ್ಕೆ ಮುಂದೆ ಇಟ್ಟಿರುವ ಡಿಮಾಂಡ್ ಕೇಳಿ ಫ್ರಾಂಚೈಸಿಗಳೇ ಬೆಚ್ಚಿಬಿದ್ದಿವೆ!
ವರದಿಗಳ ಪ್ರಕಾರ..ಐಪಿಎಲ್ 2026ರ ಸೀಸನ್ ಮುಗಿದ ನಂತರ ಹಾರ್ದಿಕ್ ಪಾಂಡ್ಯ ಮುಂಬೈ ತಂಡವನ್ನು ತೊರೆಯುವುದು ಬಹುತೇಕ ಖಚಿತ. ಸ್ಟಾರ್ ಆಲ್ರೌಂಡರ್ ಹಾರ್ದಿಕ್ನನ್ನು ಹೇಗಾದರೂ ಮಾಡಿ ತಂಡಕ್ಕೆ ಸೇರಿಸಿಕೊಳ್ಳಲು ಸಿಎಸ್ಕೆ ಹವಣಿಸುತ್ತಿದೆ. ಮುಂಬೈ ಇಂಡಿಯನ್ಸ್ ಮಾತ್ರ ಹಾರ್ದಿಕ್ ಬದಲಿಗೆ ಚೆನ್ನೈನ ಅತಿ ದೊಡ್ಡ ಮ್ಯಾಚ್ ವಿನ್ನರ್ ಶಿವಂ ದುಬೆ ಮತ್ತು ಯುವ ಸೆನ್ಸೇಷನ್ ಆಯುಷ್ ಮ್ಹತ್ರೆ ಅವರನ್ನು ಟ್ರೇಡ್ನಲ್ಲಿ ನೀಡಬೇಕು ಎಂದು ಪಟ್ಟು ಹಿಡಿದಿದೆ ಎನ್ನಲಾಗಿದೆ.
ಭವಿಷ್ಯದ ಆಶಾಕಿರಣ ಎನ್ನಲಾಗಿರುವ ಯುವ ಆಟಗಾರ ಆಯುಷ್ ಮ್ಹತ್ರೆಯನ್ನು ಬಿಟ್ಟುಕೊಡಲು ಸಿಎಸ್ಕೆ ಮ್ಯಾನೇಜ್ಮೆಂಟ್ ಸಿದ್ಧವಿಲ್ಲ. ಹೀಗಾಗಿ ಸಿಎಸ್ಕೆ ಒಂದು ಬದಲಿ ಆಫರ್ ನೀಡಿದೆ ಎಂದು ತಿಳಿದುಬಂದಿದೆ. ಶಿವಂ ದುಬೆ ಅವರ ಜೊತೆಗೆ ಹೆಚ್ಚುವರಿಯಾಗಿ ₹10 ಕೋಟಿ ನಗದು ನೀಡಲು ಸಿಎಸ್ಕೆ ಒಪ್ಪಿಕೊಂಡಿದೆ ಎನ್ನಲಾಗುತ್ತಿದೆ. ಸೌತ್ ಆಫ್ರಿಕಾದ ಸ್ಟಾರ್ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ ವಿಚಾರದಲ್ಲೂ ಚರ್ಚೆಗಳು ನಡೆಯುತ್ತಿವೆ ಎಂಬ ಮಾಹಿತಿ ಹೊರಬಿದ್ದಿದೆ.
ಒಂದು ವೇಳೆ ಮುಂಬೈ ಮತ್ತು ಸಿಎಸ್ಕೆ ನಡುವಿನ ಈ ಮಾತುಕತೆ ವಿಫಲವಾದರೆ ಹಾರ್ದಿಕ್ ಪಾಂಡ್ಯರನ್ನು ಸೆಳೆಯಲು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಕೂಡ ಸಿದ್ಧವಾಗಿದೆ. ಹಾರ್ದಿಕ್ ಪಾಂಡ್ಯ ಮಾತ್ರ ಎಂ.ಎಸ್. ಧೋನಿ ಅವರೊಂದಿಗೆ ಮಾತನಾಡಿದ್ದು, ಧೋನಿ ಮಾರ್ಗದರ್ಶನದಲ್ಲಿ ಸಿಎಸ್ಕೆ ಪರ ಆಡಲು ಮೊದಲ ಆದ್ಯತೆ ನೀಡಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಟ್ರೇಡ್ ಯಶಸ್ವಿಯಾದರೆ, ಇದು ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಮತ್ತು ಪವರ್ಫುಲ್ ಆಟಗಾರರ ಅದಲು-ಬದಲು ಪ್ರಕ್ರಿಯೆಯಾಗಲಿದೆ. ₹10 ಕೋಟಿ ನಗದು ಮತ್ತು ಸ್ಟಾರ್ ಆಲ್ರೌಂಡರ್ ಶಿವಂ ದುಬೆ ಅವರ ಬಲಿಯಾಗುತ್ತಾ? ಅಥವಾ ಮುಂಬೈ ತನ್ನ ಡಿಮಾಂಡ್ ಬದಲಿಸಿಕೊಳ್ಳುತ್ತಾ? ಎಂಬುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.