
ಮುಂಬೈ(ಏ.03): ಟೀಂ ಇಂಡಿಯಾ ವಿಶ್ವಕಪ್ ಟ್ರೋಫಿ ಗೆಲುವಿನ ವರ್ಷಾಚಣರಣೆ ಸಂಭ್ರಮ ಈ ಬಾರಿ ಸಾಮಾಜಿಕ ಜಾಲತಾಣಕ್ಕೆ ಸೀಮಿತವಾಗಿತ್ತು. ಕಾರಣ ಕೊರೋನಾ ಲಾಕ್ಡೌನ್. ಟೀಂ ಇಂಡಿಯಾ ಕ್ರಿಕೆಟಿಗರು, ಅಭಿಮಾನಿಗಳು ವಿಶ್ವಕಪ್ ಗೆಲುವಿನ ನೆನಪನ್ನು ಮೆಲುಕುಹಾಕಿದ್ದಾರೆ. ಈ ವೇಳೆ ಮುಂಬೈ ಪೊಲೀಸರು ಕೂಡ ಐತಿಹಾಸಿಕ ಗೆಲುವನ್ನು ನನೆಪಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಧೋನಿ ಸಿಡಿಸಿದ ಸಿಕ್ಸರ್ ಹಾಗೂ ರವಿ ಶಾಸ್ತ್ರಿ ಕಮೆಂಟರಿಯನ್ನು ಬಳಸಿ ಇದೀಗ ಮುಂಬೈ ಪೊಲೀಸರು ಕೊರೋನಾ ವೈರಸ್ ಜಾಗೃತಿ ಮೂಡಿಸುತ್ತಿದ್ದಾರೆ.
ಸಚಿನ್, ಕೊಹ್ಲಿ ಸೇರಿ 40 ಕ್ರೀಡಾಪಟುಗಳ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ!
2011ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನಾಯಕ ಎಂ.ಎಸ್.ಧೋನಿ ಭರ್ಜರಿ ಸಿಕ್ಸರ್ ಸಿಡಿಸಿ ಭಾರತಕ್ಕೆ 6 ವಿಕೆಟ್ ಗೆಲುವು ತಂದುಕೊಟ್ಟಿದ್ದರು. ಈ ವೇಳೆ ರವಿ ಶಾಸ್ತ್ರಿ, ಧೋನಿ ಫಿನೀಶ್ ಇಟ್ ಆಫ್ ಇನ್ ಸ್ಟೈಲ್. ಇಂಡಿಯಾ ಲಿಫ್ಟ್ ದಿ ವರ್ಲ್ಡ್ ಕಪ್, ಆಫ್ಟರ್ 28 ಇಯರ್(ತಮ್ಮ ಎಂದಿನ ಶೈಲಿಯಲ್ಲಿ ಧೋನಿ ಪಂದ್ಯ ಮುಗಿಸಿದ್ರು, ಭಾರತ 28 ವರ್ಷಗಳ ಬಳಿಕ ವಿಶ್ವಕಪ್ ಟ್ರೋಫಿ ಗೆದ್ದುಕೊಂಡಿತು) ಎಂದು ಕಮೆಂಟರಿ ಹೇಳಿದ್ದರು. ಇದೀಗ ಧೋನಿ ಇದೇ ಸಿಕ್ಸರ್ ಚಿತ್ರ ಹಾಗೂ ಶಾಸ್ತ್ರಿ ಕಮೆಂಟರಿ ಮೂಲಕ ಭಾರತ ಒಗ್ಗಟ್ಟಿನಿಂದ ಕೊರೋನಾ ವೈರಸ್ ಮುಗಿಸೋಣ ಎಂದು ಮುಂಬೈ ಪೊಲೀಸರು ಟ್ವೀಟ್ ಮಾಡಿದ್ದಾರೆ.
2011ರಲ್ಲಿ ಟೀಂ ಇಂಡಿಯಾ ಗುರಿ ಬೆನ್ನಟ್ಟಿದ ಬಳಿಕ ನಾವೆಲ್ಲ ಮನೆಯಿಂದ ಹೊರಬಂದು ಸಂಭ್ರಮಿಸಿದ್ದೇವೆ. 2020ರಲ್ಲಿ ನಾವೆಲ್ಲ ಮನೆಯಲ್ಲಿ ಕೂತ ಭಾರತ ಈ ಗುರಿ ಮುಟ್ಟುವ ತನಕ ಕಾಯೋಣ ಎಂದು ಟ್ವೀಟ್ ಮಾಡಿದ್ದಾರೆ. ಮುಂಬೈ ಪೊಲೀಸರು ಈ ಟ್ವೀಟ್ ಮೂಲಕ ಎಲ್ಲರು ಸುರಕ್ಷಿತವಾಗಿರಿ. ಯಾರೂ ಕೂಡ ಮನೆಯಿಂದ ಹೊರಬರಬೇಡಿ. ಕೊರೋನಾ ವೈರಸ್ ವಿರುದ್ಧ ಎಲ್ಲರೂ ಜೊತೆಯಾಗಿ ಹೋರಾಡೋಣ ಗೆಲುವು ಸಾಧಿಸೋಣ ಎಂಬ ಸಂದೇಶವನ್ನು ಸಾರಿದ್ದಾರೆ. ಭಾರತದಲ್ಲಿ ಅತೀ ಹೆಚ್ಚು ಕೊರೋನಾ ಸೋಂಕು ಹರಡಿರುವುದು ಮಹಾರಾಷ್ಟ್ರದಲ್ಲಿ. ಮಹಾರಾಷ್ಟ್ರದಲ್ಲಿ ಕರೋನಾ ಸೋಂಕಿತರ ಸಂಖ್ಯೆ 350 ಗಡಿ ಸಮೀಪಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.