ಟೀಂ ಇಂಡಿಯಾ ಕ್ರಿಕೆಟಿಗನ ತಂದೆಗೆ 7 ವರ್ಷ ಜೈಲು; 11 ವರ್ಷಗಳ ಬಳಿಕ ಕೋರ್ಟ್‌ನಿಂದ ಶಿಕ್ಷೆ ಪ್ರಕಟ!

Published : Dec 25, 2024, 04:55 PM IST
ಟೀಂ ಇಂಡಿಯಾ ಕ್ರಿಕೆಟಿಗನ ತಂದೆಗೆ 7 ವರ್ಷ ಜೈಲು; 11 ವರ್ಷಗಳ ಬಳಿಕ ಕೋರ್ಟ್‌ನಿಂದ ಶಿಕ್ಷೆ ಪ್ರಕಟ!

ಸಾರಾಂಶ

ಮಾಜಿ ಕ್ರಿಕೆಟಿಗ ನಮನ್ ಓಝಾ ತಂದೆ ವಿನಯ್ ಓಝಾರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಬ್ಯಾಂಕ್ ಆಫ್ ಮಹಾರಾಷ್ಟ್ರದ ಬ್ರ್ಯಾಂಚ್‌ವೊಂದರಲ್ಲಿ 1.25 ಕೋಟಿ ರೂ. ವಂಚನೆ ಪ್ರಕರಣದಲ್ಲಿ ದೋಷಿ ಎಂದು ಮುಲ್ತಾಯಿ ನ್ಯಾಯಾಲಯ ತೀರ್ಪು ನೀಡಿದೆ. 7 ಲಕ್ಷ ರೂ. ದಂಡವನ್ನೂ ವಿಧಿಸಲಾಗಿದೆ. ಈ ಪ್ರಕರಣದ ಮಾಸ್ಟರ್ ಮೈಂಡ್‌ಗೆ 10 ವರ್ಷ ಜೈಲು ಶಿಕ್ಷೆ.

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ವಿಕೆಟ್ ಕೀಪರ್ ಬ್ಯಾಟರ್ ನಮನ್ ಓಝಾ ಪಾಲಿಗೆ ದುಃಖಕರ ಸುದ್ದಿಯೊಂದು ಹೊರಬಿದ್ದಿದೆ. ನಮನ್ ಓಝಾ ಅವರ ತಂದೆ ವಿನಯ್ ಓಝಾ ಅವರು ಬ್ಯಾಂಕಿನ ಹಣ ದುರುಪಯೋಗ ಪಡಿಸಿಕೊಂಡ ಪ್ರಕರಣದಡಿ ಆರೋಪ ಸಾಬೀತಾಗಿರುವುದರಿಂದ 7 ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದಾರೆ. ಬರೋಬ್ಬರಿ 11 ವರ್ಷಗಳ ವಿಚಾರಣೆಯ ಬಳಿಕ ಕೋರ್ಟ್ ಮಹತ್ವದ ತೀರ್ಮಾನವನ್ನು ಪ್ರಕಟಿಸಿದೆ.

ಬ್ಯಾಂಕ್ ಆಫ್ ಮಹಾರಾಷ್ಟ್ರದ ಒಂದು ಬ್ರ್ಯಾಂಚ್ ಮಧ್ಯಪ್ರದೇಶದ ಜೋಲಖೇಡ ಎಂಬ ಹಳ್ಳಿಯಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಈ ಬ್ಯಾಂಕ್‌ನಲ್ಲಿ ನಮನ್ ಓಝಾ ಅವರ ತಂದೆ ವಿನಯ್ ಓಝಾ ಅವರು ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 2013ರಲ್ಲಿ ಈ ಬ್ಯಾಂಕ್‌ನಿಂದ ಸುಮಾರು 1.25 ಕೋಟಿ ರುಪಾಯಿ ವಂಚನೆ ಮಾಡಿದ್ದಾರೆ ಎಂದು ವಿನಯ್ ಓಝಾ ಅವರು ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಅಲ್ಲಿನ ಮುಲ್ತಾಯಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮುಲ್ತಾಯಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಈ ಪ್ರಕರಣದ ಮಾಸ್ಟರ್ ಮೈಂಡ್ ಅಭಿಷೇಕ್ ರತ್ನಂ ಸೇರಿದಂತೆ ಈ ಕೆಲವು ಪ್ರಮುಖರಿಗೆ ಶಿಕ್ಷೆ ಪ್ರಕಟಿಸಿದೆ.

ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ಫಿಟ್ ಆದ ಟೀಂ ಇಂಡಿಯಾ ದುಷ್ಮನ್; ರೋಹಿತ್ ಪಡೆಗೆ ಶುರುವಾಯ್ತು ಟೆನ್ಷನ್!

ಈ ಪ್ರಕರಣದ ಮಾಸ್ಟರ್ ಮೈಂಡ್ ಅಭಿಷೇಕ್ ರತ್ನಂ ಅವರಿಗೆ ಕೋರ್ಟ್ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದರ ಜತೆಗೆ 80 ಲಕ್ಷ ರುಪಾಯಿ ದಂಡ ವಿಧಿಸಿದೆ. ಇನ್ನು ನಮನ್ ಓಝಾ ಅವರ ತಂದೆ ವಿನಯ್ ಓಝಾ ಅವರಿಗೆ 7 ವರ್ಷ ಜೈಲು ಹಾಗೂ 7 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ. ಇನ್ನು ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬ್ಯಾಂಕಿನ ಬ್ರೋಕರ್‌ಗಳಾದ ಧನ್‌ರಾಜ್ ಪವರ್ ಹಾಗೂ ಲಖನ್ ಹಿಂಗ್ವೆ ಅವರಿಗೆ 7 ವರ್ಷ ಜೈಲು ಹಾಗೂ ತಲಾ 7 ಲಕ್ಷ ರುಪಾಯಿ ದಂಡ ವಿಧಿಸಿದೆ.

ಮಧ್ಯಪ್ರದೇಶದಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಮಹಾರಾಷ್ಟ್ರದ ಜೋಲಖೇಡ ಬ್ರ್ಯಾಂಚ್‌ನಲ್ಲಾದ ಕೋಟ್ಯಾಂತರ ರುಪಾಯಿ ಅವ್ಯವಹಾರ ಮುಲ್ತಾಯಿ ಬ್ಲಾಕ್ ಸೇರಿದಂತೆ ಆ ಭಾಗದಲ್ಲೇ ದೊಡ್ಡ ಸದ್ದು ಮಾಡಿತ್ತು. ಹೈಪ್ರೊಫೈಲ್ ಕೇಸ್ ಆಗಿದ್ದರಿಂದ ಕೋರ್ಟ್ ತೀರ್ಪಿನ ಕುರಿತಂತೆ ಸಾಕಷ್ಟು ಕುತೂಹಲವವಿತ್ತು. ಆದರೆ ಮುಲ್ತಾಯಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ವಾದವಿವಾದ ಹಾಗೂ ಸೂಕ್ತ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ತಪ್ಪಿತಸ್ತರಿಗೆ ಕಠಿಣ ಶಿಕ್ಷೆ ಪ್ರಕಟಿಸಿದೆ. ಈ ಮೂಲಕ ಭ್ರಷ್ಟಾಚಾರ ಮಾಡುವವರಿಗೆ ಈ ತೀರ್ಪು ಶಿಕ್ಷೆ ತಪ್ಪಿದ್ದಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ
ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ