
ಬೆಂಗಳೂರು(ಫೆ.19): 14ನೇ ಆವೃತ್ತಿಯ ಐಪಿಎಲ್ ಆಟಗಾರರ ಹರಾಜಿನಲ್ಲಿ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಕೇವಲ 3 ಆಟಗಾರರನ್ನಷ್ಟೇ ಖರೀದಿಸಿದೆ. ಆರೆಂಜ್ ಆರ್ಮಿ ಈ ಬಾರಿ ಆಫ್ಘಾನಿಸ್ತಾನದ ಸ್ಪಿನ್ನರ್ ಮುಜೀಬ್ ಉರ್ ರೆಹಮಾನ್, ಜಗದೀಶ್ ಸುಚಿತ್ ಹಾಗೂ ಕೇದಾರ್ ಜಾಧವ್ರನ್ನು ಖರೀದಿಸಿದೆ.
ಆಫ್ಘನ್ ಸ್ಪಿನ್ ಪ್ರತಿಭೆ ಮುಜೀಬ್ ಉರ್ ರೆಹಮಾನ್ ಖರೀದಿಗೆ ಹೈದ್ರಾಬಾದ್ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಕೇದಾರ್ ಜಾಧವ್ರನ್ನು ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಖರೀದಿಸಿದ್ದೇಕೆ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿವೆ. ಕಳೆದ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅಗತ್ಯವಾದ ಸಂದರ್ಭದಲ್ಲಿ ರನ್ಗಳಿಸಲು ಪರದಾಡಿದ್ದ ಜಾಧವ್ ಅವರನ್ನು ಈ ಬಾರಿ ಹೈದ್ರಾಬಾದ್ ಫ್ರಾಂಚೈಸಿ ಖರೀದಿಸಿದ್ದಕ್ಕೆ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದಾರೆ.
ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪಾರ್ಟಿ ಕೇಳಿದರು: ಗೌತಮ್
ಕಳೆದ ಆವೃತ್ತಿಯಲ್ಲಿ ಸಿಎಸ್ಕೆ ತಂಡದ ಪರ ಕೇದಾರ್ ಜಾಧವ್ ಆಟವನ್ನು ಹೈದ್ರಾಬಾದ್ ಟ್ರೋಲ್ ಮಾಡಿತ್ತು, ಆದರೆ ಇದೀಗ ಹೈದ್ರಾಬಾದ್ ಫ್ರಾಂಚೈಸಿಯೇ ಜಾಧವ್ರನ್ನು ಖರೀದಿಸಿದೆ ಎಂದು ನೆಟ್ಟಿಗನೊಬ್ಬ ಕಾಲೆಳೆದಿದ್ದಾನೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.