ಬೆಂಗಳೂರು ಟೆಸ್ಟ್: 36 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಪಂದ್ಯ ಗೆದ್ದ ನ್ಯೂಜಿಲೆಂಡ್

Published : Oct 20, 2024, 12:28 PM ISTUpdated : Oct 20, 2024, 12:38 PM IST
ಬೆಂಗಳೂರು ಟೆಸ್ಟ್: 36 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಪಂದ್ಯ ಗೆದ್ದ ನ್ಯೂಜಿಲೆಂಡ್

ಸಾರಾಂಶ

ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 8 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. 

ಬೆಂಗಳೂರು: ಮೊದಲ ಇನ್ನಿಂಗ್ಸ್‌ನಲ್ಲಿ ಅಲ್ಪ ಮೊತ್ತಕ್ಕೆ ಕುಸಿದ ಪರಿಣಾಮ ಭಾರತ ಕ್ರಿಕೆಟ್ ತಂಡವು ಮೊದಲ ಟೆಸ್ಟ್ ಪಂದ್ಯವನ್ನು ಕೈಚೆಲ್ಲಿದೆ. ಭಾರತ ಎದುರು 8 ವಿಕೆಟ್ ಭರ್ಜರಿ ಗೆಲುವು ಸಾಧಿಸಿದ ನ್ಯೂಜಿಲೆಂಡ್ ತಂಡವು ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇನ್ನು ಇದರೊಂದಿಗೆ ಬರೋಬ್ಬರಿ 36 ವರ್ಷಗಳ ಬಳಿಕ ನ್ಯೂಜಿಲೆಂಡ್ ತಂಡವು ಭಾರತದ ನೆಲದಲ್ಲಿ ಮೊದಲ ಟೆಸ್ಟ್ ಗೆಲುವಿನ ರುಚಿ ಕಂಡಿದೆ.

ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗೆಲ್ಲಲು 107 ರನ್‌ಗಳ ಸಾಧಾರಣ ಗುರಿ ಪಡದ ನ್ಯೂಜಿಲೆಂಡ್ ತಂಡವು ಮೊದಲ ಓವರ್‌ನಲ್ಲೇ ನಾಯಕ ಟಾಮ್ ಲೇಥಮ್ ವಿಕೆಟ್ ಕಳೆದುಕೊಂಡಿತು. ಜಸ್ಪ್ರೀತ್ ಬುಮ್ರಾ, ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಲೇಥಮ್ ಅವರನ್ನು ಎಲ್‌ಬಿ ಬಲೆಗೆ ಕೆಡವಿದರು. ಇನ್ನು ಮತ್ತೋರ್ವ ಆರಂಭಿಕ ಬ್ಯಾಟರ್ ಡೆವೊನ್ ಕಾನ್ವೆ(17)ಯನ್ನು  ಬುಮ್ರಾ ಪೆವಿಲಿಯನ್‌ಗೆ ಅಟ್ಟಿದರು. ಆಗ ನ್ಯೂಜಿಲೆಂಡ್‌ ಸ್ಕೋರ್ 2 ವಿಕೆಟ್ ನಷ್ಟಕ್ಕೆ 35 ರನ್.

ರೋಹಿತ್ ಶರ್ಮಾ ತೆಗೆದುಕೊಂಡ ಆ ಒಂದು ಕೆಟ್ಟ ನಿರ್ಧಾರದಿಂದ 36 ವರ್ಷಗಳ ಬಳಿಕ ಭಾರತಕ್ಕೆ ಸೋಲಾಗುತ್ತಾ?

ಇದಾದ ಬಳಿಕ ಜತೆಯಾದ ರಚಿನ್ ರವೀಂದ್ರ ಹಾಗೂ ವಿಲ್ ಯಂಗ್ ಮೂರನೇ ವಿಕೆಟ್‌ಗೆ ಮುರಿಯದ 72 ರನ್‌ಗಳ ಜತೆಯಾಟವಾಡುವ ಮೂಲಕ ತಂಡವನ್ನು ಯಾವುದೇ ಅಪಾಯವಿಲ್ಲದೇ ಗೆಲುವಿನ ದಡ ಸೇರಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದ ರಚಿನ್ ರವೀಂದ್ರ ಅಮೂಲ್ಯ 39 ರನ್ ಬಾರಿಸಿದರೇ, ಮತ್ತೊಂದು ತುದಿಯಲ್ಲಿ ವಿಲ್ ಯಂಗ್ 45 ರನ್ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ಟೆಸ್ಟ್ ಕ್ರಿಕೆಟ್‌ನಲ್ಲಿ ಧೋನಿ ಹೆಸರಲ್ಲಿದ್ದ ಅಪರೂಪದ ದಾಖಲೆ ಮುರಿದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್!

36 ವರ್ಷಗಳ ಬಳಿಕ ಮೊದಲ ಗೆಲುವು: ನ್ಯೂಜಿಲೆಂಡ್ ಕ್ರಿಕೆಟ್ ತಂಡವು 1988ರಲ್ಲಿ ಕೊನೆಯ ಬಾರಿಗೆ ಭಾರತ ನೆಲದಲ್ಲಿ ಟೆಸ್ಟ್ ಪಂದ್ಯವನ್ನು ಜಯಿಸಿತ್ತು. ಮುಂಬೈನ ವಾಂಖೇಡೆ ಮೈದಾನದಲ್ಲಿ ನಡೆದಿದ್ದ ಪಂದ್ಯದಲ್ಲಿ ಕಿವೀಸ್ ಪಡೆ ಭಾರತದ ಎದುರು ಕೊನೆಯ ಬಾರಿಗೆ ಭಾರತದ ನೆಲದಲ್ಲಿ ಟೆಸ್ಟ್ ಗೆಲುವು ಸಾಧಿಸಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ