ಓಂ ನಮಃ ಶಿವಾಯ.. ಜಪ ಮಾಡುತ್ತಾ ನಾಲ್ಕು ಶತಕ ಸಿಡಿಸಿದ್ದ ವಿರಾಟ್‌ ಕೊಹ್ಲಿ! ರೋಚಕ ಕಥೆ ಬಹಿರಂಗ!

Published : Sep 19, 2024, 06:39 AM ISTUpdated : Sep 19, 2024, 09:31 AM IST
ಓಂ ನಮಃ ಶಿವಾಯ.. ಜಪ ಮಾಡುತ್ತಾ ನಾಲ್ಕು ಶತಕ ಸಿಡಿಸಿದ್ದ ವಿರಾಟ್‌ ಕೊಹ್ಲಿ! ರೋಚಕ ಕಥೆ ಬಹಿರಂಗ!

ಸಾರಾಂಶ

ವಿರಾಟ್ ಕೊಹ್ಲಿ 2014-15ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ನಾಲ್ಕು ಟೆಸ್ಟ್ ಶತಕಗಳನ್ನು ಸಿಡಿಸಿದಾಗ ಓಂ ನಮಃ ಶಿವಾಯ ಎಂದು ಜಪ ಮಾಡುತ್ತಿದ್ದರು ಎಂದು ಗೌತಮ್ ಗಂಭೀರ್ ಬಹಿರಂಗಪಡಿಸಿದ್ದಾರೆ. ಬಿಸಿಸಿಐ.ಟಿವಿಯಲ್ಲಿ ಪ್ರಸಾರವಾದ ವಿಶೇಷ ಸಂವಾದದಲ್ಲಿ ಈ ರೋಚಕ ವಿಷಯ ಬೆಳಕಿಗೆ ಬಂದಿದೆ.

ನವದೆಹಲಿ (ಸೆ.19): ವಿರಾಟ್‌ ಕೊಹ್ಲಿ ಇತ್ತೀಚೆಗೆ ಅತೀವ ದೈವ ಭಕ್ತರಾಗಿದ್ದಾರೆ ಎಂದು ಸಾಮಾಜಿಕ ತಾಣಗಳಲ್ಲಿ ಅನೇಕರು ಚರ್ಚೆ ನಡೆಸುತ್ತಿರುವಾಗಲೇ, ಕೊಹ್ಲಿ 10 ವರ್ಷ ಹಿಂದಿನ ರೋಚಕ ಕಥೆಯೊಂದನ್ನು ಬಹಿರಂಗಪಡಿಸಿದ್ದಾರೆ. 2014-15ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ‘ವಿರಾಟ’ ರೂಪ ಪ್ರದರ್ಶಿಸಿದ್ದ ಕೊಹ್ಲಿ, ಓಂ ನಮಃ ಶಿವಾಯ ಎಂದು ಜಪ ಮಾಡಿಕೊಂಡೇ ನಾಲ್ಕು ಟೆಸ್ಟ್‌ ಶತಕಗಳನ್ನು ಸಿಡಿಸಿದ್ದರಂತೆ.

ಟೀಂ ಇಂಡಿಯಾದ ನೂತನ ಕೋಚ್ ಗೌತಮ್‌ ಗಂಭೀರ್‌ ಜೊತೆ ಕೊಹ್ಲಿ ನಡೆಸಿರುವ ವಿಶೇಷ ಸಂವಾದದಲ್ಲಿ ಈ ಕುತೂಹಲಕಾರಿ ವಿಷಯ ಬಹಿರಂಗಗೊಂಡಿದೆ. ಬಿಸಿಸಿಐ ತನ್ನ ಅಧಿಕೃತ ವೆಬ್‌ಸೈಟ್‌ ಬಿಸಿಸಿಐ.ಟಿವಿಯಲ್ಲಿ ಕೊಹ್ಲಿ ಹಾಗೂ ಗಂಭೀರ್‌ ನಡುವಿನ ಸಂವಾದದ ವಿಡಿಯೋವನ್ನು ಹಂಚಿಕೊಂಡಿದ್ದು, ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.

ಕೊಹ್ಲಿ-ಗಂಭೀರ್ ನಡುವಿನ ಎಕ್ಸ್‌ಕ್ಲೂಸಿವ್ ಮಾತುಕತೆ: ಆನ್‌ಫೀಲ್ಡ್ ಕಿತ್ತಾಟದ ಬಗ್ಗೆ ಪ್ರಶ್ನೆ ಕೇಳಿ ಪೆಟ್ಟು ತಿಂದ ವಿರಾಟ್

ಕೊಹ್ಲಿ ಜಪ ಮಾಡಿದ್ದ ವಿಷಯವನ್ನು ಬಹಿರಂಗಪಡಿಸಿರುವುದು ಗಂಭೀರ್‌. ಸಂವಾದದ ವೇಳೆ ಕೊಹ್ಲಿ, ಗಂಭೀರ್‌ ಬಳಿ ಭಾರತ-ಆಸ್ಟ್ರೇಲಿಯಾ ನಡುವಿನ ಟೆಸ್ಟ್‌ ಸರಣಿಗಳಲ್ಲಿನ ರೋಚಕ ಕ್ಷಣಗಳ ಬಗ್ಗೆ ಮಾತನಾಡುವಂತೆ ಕೇಳುತ್ತಾರೆ. ಆಗ ಗಂಭೀರ್‌, ‘ನನ್ನ ಬದಲು ಮಾತನಾಡುವ ಬದಲು, ಆಸ್ಟ್ರೇಲಿಯಾದಲ್ಲಿ ನೀವು ಬಂಪರ್‌ ಬ್ಯಾಟಿಂಗ್‌ ನಡೆಸಿದ ಸರಣಿ ಬಗ್ಗೆ ಮಾತನಾಡೋಣ. 2014-15ರ ಸರಣಿಯಲ್ಲಿ ನೀವು ರಾಶಿ ರಾಶಿ ರನ್‌ ಬಾರಿಸಿದಾಗ, ಓಂ ನಮಃ ಶಿವಾಯ ಎಂದು ಜಪ ಮಾಡುತ್ತಿದ್ದೆ ಎಂದು ನನ್ನ ಬಳಿ ಹೇಳಿದ್ದು ನನಗೆ ಇನ್ನೂ ನೆನಪಿದೆ’ ಎಂದಿದ್ದಾರೆ. ಇದಕ್ಕೆ ಕೊಹ್ಲಿ ನಗುತ್ತಲೇ ತಲೆಯಾಡಿಸಿದ್ದಾರೆ.

ರಾಹುಲ್‌ ದ್ರಾವಿಡ್‌ರ ಕೋಚಿಂಗ್‌ ಶೈಲಿಗೂ ಗೌತಮ್‌ ಗಂಭೀರ್‌ರ ಕೋಚಿಂಗ್‌ ಶೈಲಿಗೂ ವ್ಯತ್ಯಾಸವಿದೆ.: ರೋಹಿತ್ ಶರ್ಮಾ

 ಹನುಮಾನ್‌ ಚಾಲೀಸಾ ಪಠಿಸುತ್ತಾ ಭಾರತ ಟೀಂ ‘ಕಾಪಾಡಿದ್ದ’ ಗಂಭೀರ್‌!

ಗೌತಮ್‌ ಗಂಭೀರ್‌ 2009ರಲ್ಲಿ ನ್ಯೂಜಿಲೆಂಡ್‌ ವಿರುದ್ಧ ನೇಪಿಯರ್‌ ಟೆಸ್ಟ್‌ನಲ್ಲಿ ಎರಡೂವರೆ ದಿನ ಬ್ಯಾಟಿಂಗ್‌ ಮಾಡಿ ಭಾರತವನ್ನು ಸೋಲಿನಿಂದ ಪಾರು ಮಾಡಿದ್ದರು. ಆ ಟೆಸ್ಟ್‌ ಬಗ್ಗೆಯೂ ಸಂವಾದದ ವೇಳೆ ಚರ್ಚೆ ನಡೆದಿದೆ. ಗಂಭೀರ್‌, ಎರಡೂವರೆ ದಿನವೂ ಹನುಮಾನ್‌ ಚಾಲೀಸಾ ಪಠಣೆ ಮಾಡುತ್ತಾ, ಬ್ಯಾಟ್‌ ಮಾಡಿ 137 ರನ್‌ ಹೊಡೆದಿದ್ದರು ಎನ್ನುವ ವಿಷಯವನ್ನು ಬಹಿರಂಗಪಡಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!