
ಹೈದರಾಬಾದ್(ಡಿ.05): ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಟೀಂ ಇಂಡಿಯಾ ಹೈದರಾಬಾದ್ನಲ್ಲಿ ಸಕಲ ತಯಾರಿ ನಡೆಸಿದೆ. ಡಿಸೆಂಬರ್ 6 ರಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯ ನಡೆಯಲಿದೆ. ಪಂದ್ಯಕ್ಕೂ ಮುನ್ನ ನಡೆಸಿದ ಸುದ್ದಿಗೋಷ್ಠಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಮುಂಬರುವ ಟಿ20 ವಿಶ್ವಕಪ್ ಹಾಗೂ ಟೀಂ ಇಂಡಿಯಾ ಕುರಿತ ಮಾಹಿತಿ ಬಹಿರಂಗ ಪಡಿಸಿದ್ದಾರೆ.
ಇದನ್ನೂ ಓದಿ: INDvWI: ಮೊದಲ ಟಿ20 ಪಂದ್ಯಕ್ಕೆ ಯಾರು ಇನ್? ಯಾರು ಔಟ್? ಸಂಭವನೀಯ ತಂಡ!
ಟಿ20 ವಿಶ್ವಕಪ್ ಟೂರ್ನಿಗಾಗಿ ಈಗಾಗಲೇ ಭಾರತ ತಂಡ ತಯಾರಿ ನಡೆಸುತ್ತಿದೆ. ಟೀಂ ಇಂಡಿಯಾದ ಬೌಲಿಂಗ್ ವಿಭಾಗದಲ್ಲಿ ಕೇವಲ 1 ಸ್ಥಾನ ಮಾತ್ರ ಬಾಕಿ ಉಳಿದಿದೆ ಎಂದು ಕೊಹ್ಲಿ ತಂಡದ ಮಾಹಿತಿ ಬಹಿರಂಗ ಪಡಿಸಿದ್ದಾರೆ. ವಿಶ್ವಕಪ್ ತಂಡದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಭುವನೇಶ್ವರ್ ಕುಮಾರ್ ಸ್ಥಾನ ಬಹುತೇಕ ಪಕ್ಕಾ. ಹೀಗಾಗಿ ಇನ್ನೊಂದು ಸ್ಥಾನಕ್ಕೆ ಪೈಪೋಟಿ ಇದೆ ಎಂದು ಕೊಹ್ಲಿ ಪರೋಕ್ಷವಾಗಿ ಹೇಳಿದ್ದಾರೆ.
ಇದನ್ನೂ ಓದಿ: ಕೆರಿಬಿಯನ್ನರನ್ನು ಹಣಿಯಲು ಟೀಂ ಇಂಡಿಯಾ ರೆಡಿ
ಬಾಕಿ ಉಳಿದಿರುವ ಒಂದು ಸ್ಥಾನಕ್ಕೆ ಸದ್ಯದ ಪ್ರದರ್ಶನ ಆಧರಿಸಿ ದೀಪಕ್ ಚಹಾರ್ ಆಯ್ಕೆಯಾಗುುದು ಬಹುತೇಕ ಖಚಿತ. ಈಗಾಗಲೇ ಕೊಹ್ಲಿ ಕೂಡ ದೀಪಕ್ ಚಹಾರ್ ಬೌಲಿಂಗ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲ ಸದ್ಯ ಟೀಂ ಇಂಡಿಯಾ ಟಿ20 ತಂಡದ ಪ್ರಮುಖ ವೇಗಿಯಾಗಿ ಗುರಿತಿಸಿಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.