ಐಸಿಸಿ ಏಕದಿನ ರ‍್ಯಾಂಕಿಂಗ್‌: ಕೊಹ್ಲಿ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಬಾಬರ್‌ ಅಜಂ

Suvarna News   | Asianet News
Published : Apr 14, 2021, 03:46 PM IST
ಐಸಿಸಿ ಏಕದಿನ ರ‍್ಯಾಂಕಿಂಗ್‌: ಕೊಹ್ಲಿ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಬಾಬರ್‌ ಅಜಂ

ಸಾರಾಂಶ

ಐಸಿಸಿ ಏಕದಿನ ಕ್ರಿಕೆಟ್‌ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನದ ನಾಯಕ ಬಾಬರ್‌ ಅಜಂ ಇದೇ ಮೊದಲ ಬಾರಿಗೆ ನಂ.1 ಸ್ಥಾನಕ್ಕೇರಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ದುಬೈ(ಏ.14): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಪಾಕಿಸ್ತಾನ ನಾಯಕ ಬಾಬರ್ ಅಜಂ ಐಸಿಸಿ ಏಕದಿನ ಕ್ರಿಕೆಟ್‌ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. 

ಈ ಕುರಿತಂತೆ ಟ್ವೀಟ್‌ ಮಾಡಿರುವ ಐಸಿಸಿ, ನೂತನವಾಗಿ ಬಿಡುಗಡೆಯಾದ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನ ನಾಯಕ ಬಾಬರ್ ಅಜಂ, ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ್ದಾರೆ ಎಂದು ಟ್ವೀಟ್‌ ಮಾಡಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 1,258 ದಿನಗಳ ಕಾಲ ಏಕದಿನ ರ‍್ಯಾಂಕಿಂಗ್‌ನಲ್ಲಿ  ನಂ.1 ಸ್ಥಾನ ಕಾಯ್ದುಕೊಂಡಿದ್ದರು. ಇದೀಗ ಪಾಕ್‌ ನಾಯಕ ಬಾಬರ್ ಅಜಂ 865 ರೇಟಿಂಗ್‌ ಅಂಕಗಳನ್ನು ಪಡೆಯುವ ಮೂಲಕ ಕೊಹ್ಲಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ. ಇನ್ನು ವಿರಾಟ್ ಕೊಹ್ಲಿ 857 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇತ್ತೀಚೆಗಷ್ಟೇ ಮುಕ್ತಾಯವಾದ ದಕ್ಷಿಣ ಆಫ್ರಿಕಾ ವಿರುದ್ದದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಕ್‌ ನಾಯಕ ಬಾಬರ್ ಅಜಂ 78ರ ಸರಾಸರಿಯಲ್ಲಿ 228 ರನ್‌ ಬಾರಿಸುವ ಮೂಲಕ ಅಮೋಘ ಪ್ರದರ್ಶನ ತೋರಿದ್ದರು. ಇದು ಬಾಬರ್ ಅಜಂ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಲು ನೆರವಾಗಿದೆ. ಇದರ ಜತೆಗೆ ಐಸಿಸಿ ಏಕದಿನ ಕ್ರಿಕೆಟ್‌ ಬ್ಯಾಟಿಂಗ್‌ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ 4ನೇ ಪಾಕಿಸ್ತಾನದ ಬ್ಯಾಟ್ಸ್‌ಮನ್‌ ಎನ್ನುವ ಕೀರ್ತಿಗೆ ಬಾಬರ್ ಅಜಂ ಪಾತ್ರರಾಗಿದ್ದಾರೆ. ಈ ಮೊದಲು ಜಹೀರ್ ಅಬ್ಬಾಸ್‌, ಜಾವೇದ್‌ ಮಿಯಾಂದಾದ್‌ ಹಾಗೂ ಮೊಹಮ್ಮದ್ ಯೂಸುಫ್‌ ಏಕದಿನ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ ಸಾಧನೆ ಮಾಡಿದ್ದರು.

ICC T20 ರ‍್ಯಾಂಕ್ ಪ್ರಕಟ; ಟಾಪ್ 10 ಪಟ್ಟಿಯಲ್ಲಿ ಕೊಹ್ಲಿ, ರಾಹುಲ್ ಮಾತ್ರ!

ಬ್ಯಾಟಿಂಗ್‌ ವಿಭಾಗದಲ್ಲಿ ಬಾಬರ್‌ ಅಜಂ, ವಿರಾಟ್‌ ಕೊಹ್ಲಿ ಮೊದಲೆರಡು ಸ್ಥಾನದಲ್ಲಿದ್ದರೆ, ರೋಹಿತ್‌ ಶರ್ಮಾ, ರಾಸ್‌ ಟೇಲರ್‌ ಹಾಗೂ ಆರೋನ್ ಫಿಂಚ್‌ ಟಾಪ್‌ 5 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ