
ನವದೆಹಲಿ(ಏ.17): ಹಲವು ಸುತ್ತಿನ ಮಾತುಕತೆಯ ಬಳಿಕ ಪಾಕಿಸ್ತಾನ ಕ್ರಿಕೆಟಿಗರು ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತ ಸರ್ಕಾರ ವೀಸಾ ನೀಡಲು ಸಮ್ಮತಿಸಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಖಚಿತ ಪಡಿಸಿದ್ದಾರೆ. 2021ರ ಅಕ್ಟೋಬರ್ ಹಾಗೂ ನವೆಂಬರ್ನಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸಿದೆ.
ರಾಜತಾಂತ್ರಿಕ ಬಿಕ್ಕಟ್ಟಿನಿಂದಾಗಿ ಉಭಯ ನೆರೆ ರಾಷ್ಟ್ರಗಳು ಸದ್ಯ ಯಾವುದೇ ದ್ವಿಪಕ್ಷೀಯ ಸರಣಿಗಳನ್ನು ಆಡುತ್ತಿಲ್ಲ. ಭಾರತ-ಪಾಕ್ ಗಡಿಯಲ್ಲಿ ಉದ್ವಿಘ್ನ ವಾತಾವರಣ ಇರುವುದರಿಂದ ಪಾಕಿಸ್ತಾನ ತಂಡಕ್ಕೆ ವೀಸಾ ನೀಡಬೇಕೇ ಬೇಡವೇ ಎನ್ನುವುದರ ಬಗ್ಗೆ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಸ್ಪಷ್ಟ ನಿರ್ಧಾರ ಪ್ರಕಟಿಸಿರಲಿಲ್ಲ. ಇದೀಗ ಈ ಹೊಸ ಬೆಳವಣಿಗೆಯಿಂದಾಗಿ ಪಾಕಿಸ್ತಾನ ತಂಡವು ಭಾರತ ಪ್ರವಾಸ ಕೈಗೊಳ್ಳಲು ಹಸಿರು ನಿಶಾನೆ ಸಿಕ್ಕಂತೆ ಆಗಿದೆ. ಆದರೆ ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳಿಗೆ ಭಾರತಕ್ಕೆ ಬರಲು ಸರ್ಕಾರ ವೀಸಾ ಅನುಮತಿ ನೀಡಲಿದೆಯೇ ಎನ್ನುವ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ.
ಟಿ20 ವಿಶ್ವಕಪ್ಗೆ ವೀಸಾ ಕೊಡಿ, ಇಲ್ಲವೇ ಭಾರತದಿಂದ ವಿಶ್ವಕಪ್ ಎತ್ತಂಗಡಿ ಮಾಡಿ: ಪಾಕ್ ಎಚ್ಚರಿಕೆ
ಈ ಹಿಂದೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಎಹ್ಸಾನ್ ಮಣಿ ಭಾರತ ನೀಡುವ ಕುರಿತಂತೆ ಐಸಿಸಿ ಲಿಖಿತ ಭರವಸೆ ನೀಡಬೇಕೆಂದು ಆಗ್ರಹಿಸಿದ್ದರು. ಒಂದು ವೇಳೆ ವೀಸಾ ನೀಡುವ ಬಗ್ಗೆ ಲಿಖಿತ ಭರವಸೆ ನೀಡದಿದ್ದರೆ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಹೇಳಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.