ಮೈದಾನದಲ್ಲೇ ಪ್ರಾಣ ಬಿಟ್ಟ ಅಂಪೈರ್; ಕಂಬನಿ ಮಿಡಿದ ಕ್ರಿಕೆಟ್ ಜಗತ್ತು!

Published : Oct 08, 2019, 04:04 PM ISTUpdated : Oct 08, 2019, 05:23 PM IST
ಮೈದಾನದಲ್ಲೇ ಪ್ರಾಣ ಬಿಟ್ಟ ಅಂಪೈರ್; ಕಂಬನಿ ಮಿಡಿದ ಕ್ರಿಕೆಟ್ ಜಗತ್ತು!

ಸಾರಾಂಶ

ರೋಚಕ ಪಂದ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಅಂಪೈರ್ ದಿಢೀರ್ ಕುಸಿದು ಬಿದ್ಧ ಕ್ರಿಕೆಟಿಗರ ಎದೆಬಡಿತ ಹೆಚ್ಚಿಸಿದ ಘಟನೆ ನಡೆದಿದೆ. ಕುಸಿದ ಬಿದ್ದ ಅಂಪೈರ್ ಮೈದಾನದಲ್ಲೇ ಸಾವನ್ನಪ್ಪಿದ್ದಾರೆ. 

ಕರಾಚಿ(ಅ.08): ಕ್ರಿಕೆಟ್ ಜಂಟ್ಲಮೆನ್ ಗೇಮ್ ಜೊತೆಗೆ ಅಷ್ಟೇ ಡೇಂಜರಸ್ ಗೇಮ್ ಕೂಡ ಹೌದು. ಎಚ್ಚರ ತಪ್ಪಿದರೆ ಪ್ರಾಣಕ್ಕೆ ಸಂಚಕಾರ. ಬ್ಯಾಟ್ಸ್‌ಮನ್ ಹೊಡೆತ, ಬೌಲರ್ ಎಸೆತ ಎರಡೂ ಕೂಡ ಮಾರಕ. ಕ್ರಿಕೆಟ್‌ ಮೈದಾನದಲ್ಲಿ ಬಾಲ್ ಬಡಿದು ಪ್ರಾಣ ಬಿಟ್ಟ ಹಲವು ಉದಾಹರಣೆಗಳಿವೆ. ಇದೀಗ ಮೈದಾನದಲ್ಲೇ ಅಂಪೈರ್ ಕುಸಿದು ಬಿದ್ದು ಪ್ರಾಣ ಬಿಟ್ಟ ಘಟನೆ ನಡೆದಿದೆ. 

ಇದನ್ನೂ ಓದಿ: 8 ಕೆಟ್ಟ ತೀರ್ಪು ಕೊಟ್ಟ ಅಂಪೈರ್‌ಗೆ ’ಕುರುಡ’ನ ಪಟ್ಟ ಕೊಟ್ಟ ಅಭಿಮಾನಿ..!

ಪಾಕಿಸ್ತಾನದ ಕರಾಚಿಯಲ್ಲಿ ನಡೆಯುತ್ತಿದ್ದ ಕ್ಲಬ್ ಲೆವೆಲ್ ಪಂದ್ಯದಲ್ಲಿ ನಸೀಮ್ ಶೇಕ್ ಅಂಪೈರಿಂಗ್ ಮಾಡುತ್ತಿದ್ದರು. ಪಂದ್ಯದ ನಡುವೆ ನಸೀಮ್ ಶೇಕ್ ಕುಸಿದು ಬಿದ್ದರು. ಹೃದಯಾಘಾತವಾದ ಕಾರಣ ಮೈದಾನದಲ್ಲೇ ಅಂಪೈರ್ ಪ್ರಾಣ ಪಕ್ಷಿ ಹಾರಿಹೋಗಿತ್ತು. ಕುಸಿದ ಬಿದ್ದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅದಕ್ಕೂ ಮುನ್ನವೇ ಅಂಪೈರ್ ಸಾವನ್ನಪ್ಪಿದ್ದರು. ನಸೀಮ್ ಸಾವಿಗೆ ಪಾಕಿಸ್ತಾನ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ. 

ಇದನ್ನೂ ಓದಿ: RCB ಮೇಲಿನ ಸಿಟ್ಟಿಗೆ ಬಾಗಿಲು ಮುರಿದ ಅಂಪೈರ್- ನಿಗೆಲ್‌ಗೆ ಬಿತ್ತು ಬರೆ!

2014ರಲ್ಲಿ ಬ್ಯಾಟ್ಸ್‌ಮನ್ ಹೊಡೆತಕ್ಕೆ ಅಂಪೈರ್ ಸಾವನ್ನಪ್ಪಿದ ಘಟನೆ ನಡೆದಿದೆ. ಇನ್ನು 2015ರಲ್ಲಿ ಟೀಂ ಇಂಡಿಯಾ ವೇಗಿ ಬರೀಂದ್ರ ಸ್ರಾನ್ ಇನ್ನೂ ಟೀಂ ಇಂಡಿಯಾಗೆ ಆಯ್ಕೆಯಾಗಿರಲಿಲ್ಲ. ತಮಿಳುನಾಡು ವಿರುದ್ದದ ರಣಜಿ ಟ್ರೋಫಿ ಪಂದ್ಯದಲ್ಲಿ ಸ್ರಾನ್ ಸಿಡಿಸಿದ ಹೊಡೆತ ಅಂಪೈರ್ ತಾಗಿತ್ತು. ಆದರೆ ಅದೃಷ್ಠವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. 

ಅಕ್ಟೋಬರ್ 8ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಲೆಗೆ 20 ಹೊಲಿಗೆ, ಭುಜಕ್ಕೆ ಬಲವಾದ ಪೆಟ್ಟು! ಕ್ರಿಕೆಟ್ ತಂಡಕ್ಕೆ ಆಯ್ಕೆ ಮಾಡದ್ದಕ್ಕೆ ಕೋಚ್‌ ಮೇಲೆ ಆಟಗಾರರ ಮಾರಣಾಂತಿಕ ಹಲ್ಲೆ!
ಆ ಒಂದು ಫೋಟೋ: ಪಾಪರಾಜಿಗಳ ಮೇಲೆ ಹಾರ್ದಿಕ್ ಪಾಂಡ್ಯ ಕೆಂಡಾಮಂಡಲ!