
ಕರಾಚಿ(ಫೆ.20): ಭಾರತ ತಂಡ ಏಷ್ಯಾಕಪ್ ಟೂರ್ನಿ ಆಡಲು ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿದ ಕಾರಣ, ಟೂರ್ನಿಯ ಆತಿಥ್ಯ ಹಕ್ಕನ್ನೇ ಬಿಟ್ಟುಕೊಡಲು ಚಿಂತಿಸುತ್ತಿದ್ದೇವೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ)ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ವಾಸೀಂ ಖಾನ್ ತಿಳಿಸಿದ್ದಾರೆ.
ಏಷ್ಯಾಕಪ್ಗೆ ಬರದಿದ್ದರೆ, ಟಿ20 ವಿಶ್ವಕಪ್ಗೆ ಬರಲ್ಲ! ಪಾಕ್ ಎಚ್ಚರಿಕೆ
ಮಾರ್ಚ್ ಮೊದಲ ವಾರದಲ್ಲಿ ಏಷ್ಯಾ ಕ್ರಿಕೆಟ್ ಸಮಿತಿ ಸಭೆ ನಡೆಯಲಿದ್ದು, ಟೂರ್ನಿ ನಡೆಯುವ ಸ್ಥಳ, ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಪಿಸಿಬಿ ಮುಖ್ಯಸ್ಥ ಎಸ್ಸಾನ್ ಮಣಿ ಹೇಳಿದ್ದಾರೆ. ಈ ಮೂಲಕ ಏಷ್ಯಾಕಪ್ ಟೂರ್ನಿಯ ಆತಿಥ್ಯವನ್ನೇ ಬಿಟ್ಟು ಕೊಡುವ ಸುಳಿವನ್ನು ನೀಡಿದ್ದಾರೆ.
ವಿಶ್ವಕಪ್ನಲ್ಲಿ ಭಾಗವಹಿಸಲ್ಲ ಎಂದ ಪಿಸಿಬಿ ಯು ಟರ್ನ್
ರಾಜತಾಂತ್ರಿಕ ಕಾರಣಗಳಿಂದಾಗಿ ಭಾರತ ತಂಡವು 2008ರಿಂದಲೂ ಪಾಕಿಸ್ತಾನ ಪ್ರವಾಸ ಕೈಗೊಳ್ಳುತ್ತಿಲ್ಲ. ಇನ್ನು 2012ರಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ಸೀಮಿತ ಓವರ್ಗಳ ಸರಣಿಯನ್ನಾಡಲು ಭಾರತ ಪ್ರವಾಸ ಕೈಗೊಂಡಿತ್ತು. ಇದಾದ ಬಳಿಕ ಉಭಯ ತಂಡಗಳ ನಡುವೆ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿಗಳಲ್ಲಿ ಮಾತ್ರ ಉಭಯ ತಂಡಗಳು ಸೆಣಸುತ್ತಿವೆ. 2018ರಲ್ಲಿ ಪಾಕಿಸ್ತಾನಕ್ಕೆ ಆತಿಥ್ಯ ನೀಡಲು ಭಾರತ ನಿರಾಕರಿಸಿದ ಕಾರಣ, ಟೂರ್ನಿಯನ್ನು ಯುಎಇನಲ್ಲಿ ನಡೆಸಲಾಗಿತ್ತು.
ಫೆಬ್ರವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.