
ಚೆನ್ನೈ(ಆ.01): ಆನ್ಲೈನ್ ಗೇಮ್ಗಳ ಮೂಲಕ ಯುವಕರು ಜೂಜಿನತ್ತ ಆಕರ್ಷಿತಗೊಳ್ಳಲು ಕಾರಣರಾಗಿದ್ದಾರೆ ಎಂದು ಆರೋಪಿಸಿ, ಇಲ್ಲಿನ ವಕೀಲರೊಬ್ಬರು ಮದ್ರಾಸ್ ಹೈಕೋರ್ಟ್ನಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಬಂಧಿಸಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ.
ಆನ್ಲೈನ್ನಲ್ಲಿ ಜೂಜಾಡಲು ಹಣ ಪಡೆದು, ಬಾಕಿ ನೀಡಲು ಸಾಧ್ಯವಾಗದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಸಂಗವನ್ನು ವಕೀಲರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಪ್ರಕರಣದ ವಿಚಾರಣೆ ಮಂಗಳವಾರಕ್ಕೆ ನಿಗದಿಯಾಗಿದೆ.
ಆನ್ಲೈನ್ ಜೂಜಾಟ ಕಂಪನಿಗಳು ಸ್ಟಾರ್ ಐಕಾನ್ಗಳಾದ ವಿರಾಟ್ ಕೊಹ್ಲಿ, ತಮನ್ನಾ ಅಂತವರನ್ನು ಬಳಸಿಕೊಂಡು ಯುವಕರ ಬ್ರೈನ್ವಾಷ್ ಮಾಡಲಾಗುತ್ತಿದೆ. ಹೀಗಾಗಿ ವಿರಾಟ್ ಕೊಹ್ಲಿ ಹಾಗೂ ನಟಿ ತಮನ್ನಾ ಅವರನ್ನು ಬಂಧಿಸಬೇಕು ಎಂದು ಕೋರ್ಟ್ನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸಂಪೂರ್ಣ ಬಜೆಟ್ ಖಾಲಿ ಆದ್ರೂ ಪರ್ವಾಗಿಲ್ಲ, ಈ ಆಟಗಾರನನ್ನು ಖರೀದಿಸೋಣ ಎಂದಿದ್ದರಂತೆ ಗಂಭೀರ್..!
ಅರ್ಜಿದಾರ ವಕೀಲರು ಆನ್ಲೈನ್ ಜೂಜಾಟಕ್ಕೆ ಯುವಕರು ಹೇಗೆಲ್ಲಾ ಬಲಿಯಾಗುತ್ತಿದ್ದಾರೆ ಎನ್ನುವುದನ್ನು ಎಳೆ ಎಳೆಯಾಗಿ ಕೋರ್ಟ್ ಮುಂದೆ ಬಿಚ್ಚಿಟ್ಟಿದ್ದಾರೆ. ಆನ್ಲೈನ್ ಜೂಜಾಟವಾಡಲು ಯುವಕರು ಹೆಚ್ಚಿನ ಬಡ್ಡಿದರದಲ್ಲಿ ಸಾಲ ಪಡೆದುಕೊಳ್ಳುತ್ತಾರೆ. ಅದರಿಂದ ನಷ್ಟ ಅನುಭವಿಸಿದಾಗ ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗುತ್ತಾರೆ. ಇದೊಂದು ರೀತಿಯಲ್ಲಿ ಬ್ಲೂ ವೇಲ್ ಗೇಮ್ ಇದ್ದಂತೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಯುವಕರು ಬ್ಲೂ ವೇಲ್ ಗೇಮ್ಗೆ ದಾಸರಾಗಿ ಪ್ರಾಣ ಕಳೆದುಕೊಂಡ ಸಾಕಷ್ಟು ಉದಾಹರಣೆಯನ್ನು ಕೇಳಿದ್ದೇವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.