
ಮುಂಬೈ(ಮೇ.15): ಕೊರೋನಾ ವೈರಸ್ ಕಾರಣ ಇಡೀ ವಿಶ್ವವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಎಲ್ಲಾ ಕ್ರೀಡಾಕಟೂಗಳು, ಕ್ರಿಕೆಟ್ ಟೂರ್ನಿ ರದ್ದಾಗಿದೆ. ಅದರಲ್ಲೂ ಚಿನ್ನದ ಮೊಟ್ಟೆ ಇಡುವ ಐಪಿಎಲ್ ಟೂರ್ನಿ ತಾತ್ಕಾಲಿಕ ರದ್ದುಗೊಂಡಿರುವ ಕಾರಣ ಬಿಸಿಸಿಐಗೆ ಆರ್ಥಿಕ ಹೊಡೆತ ಬಿದ್ದಿದೆ. ಐಪಿಎಲ್ ರದ್ದಾದರೆ ಸರಿಸುಮಾರು 4,000 ಕೋಟಿ ರೂಪಾಯಿ ನಷ್ಟವಾಗಲಿದೆ. ಇದರ ನಡುವೆ ಬಿಸಿಸಿಐ, ಟೀಂ ಇಂಡಿಯಾ ಕ್ರಿಕೆಟಿಗರ ವೇತನ ಕಡಿತ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ವಿದೇಶಿ ಆಟಗಾರರಿಲ್ಲದೆ IPL ಆಯೋಜನೆಗೆ CSK ವಿರೋಧ
ಸದ್ಯದ ಪರಿಸ್ಥಿತಿಯಲ್ಲಿ ಕ್ರಿಕೆಟಿಗರ ವೇತನ ಕಡಿತ ನಿರ್ಧಾರ ಬಿಸಿಸಿಐ ಮುಂದಿಲ್ಲ. ಕೊರೋನಾ ವೈರಸ್ ನಿಯಂತ್ರಣಕ್ಕೆ ಬರದೆ ಐಪಿಎಲ್ ಸೇರಿದಂತೆ ಬಿಸಿಸಿಐ ಟೂರ್ನಿಗಳು ರದ್ದಾದರೆ ವೇತನ ಕಡಿತದ ನಿರ್ಧಾರದ ಕುರಿತು ಚಿಂತನೆ ನಡೆಸಲಾಗುವುದು. ಆದರೆ ಸದ್ಯ ಬಿಸಿಸಿಐ ಮುಂದೆ ರೀತಿಯ ಪ್ರಸ್ತಾವನೆ ಮುಂದಿಲ್ಲ ಎಂದು ಖಜಾಂಚಿ ಅರುಣ್ ಧುಮಾಲ್ ಹೇಳಿದ್ದಾರೆ.
IPL 2020 ಟೂರ್ನಿ ಆಯೋಜಿಸಲು ಬಿಸಿಸಿಐಗೆ ಆಹ್ವಾನ ನೀಡಿದ ದುಬೈ!
ಕ್ರಿಕೆಟ್ ಆಸ್ಟ್ರೇಲಿಯಾ, ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಈಗಾಗಲೇ ಕ್ರಿಕೆಟಿಗರ ವೇತನ ಕಡಿತ ಮಾಡಿದೆ. ಆಫ್ಘಾನಿಸ್ತಾನ ಕ್ರಿಕೆಟ್ ಮಂಡಲಿ ಕೋಚ್, ಸಿಬ್ಬಂಧಿಗಳ ವೇತನ ಕಡಿತ ಮಾಡಿದೆ. ಕ್ರಿಕೆಟ್ ಟೂರ್ನಿ ನಿಂತು ಹೋಗಿರುವ ಕ್ರಿಕೆಟ್ ಮಂಡಳಿಗಳು ಅನಿವಾರ್ಯವಾಗಿ ವೇತನ ಕಡಿತಕ್ಕೆ ಮುಂದಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.