
ನವದೆಹಲಿ(ಮಾ.21): ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಹೆಚ್ಚಾಗುತ್ತಿದೆ.ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ(ಮಾ.22) ರಂದು ಜನತಾ ಕರ್ಫ್ಯೂಗೆ ಮನವಿ ಮಾಡಿದ್ದಾರೆ. ಪ್ರಧಾನಿ ಮನವಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಸೆಲೆಬ್ರೆಟಿಗಳು, ಕ್ರಿಕೆಟಿಗರು ಸೇರಿದಂತೆ ಬಹುತೇಕರು ಮೋದಿ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್, ವಿಶ್ವ ಟಿ20ಗೂ ಕೊರೋನಾ ಅಡ್ಡಿ?
ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಕೂಡ ಮೋದಿ ಕರೆ ನೀಡಿದ ಜನತಾ ಕರ್ಫ್ಯೂ ಪಾಲಿಸಲು ಮನವಿ ಮಾಡಿದ್ದರು. ಈ ಕುರಿತು ಟ್ವೀಟ್ ಮೂಲಕೈಫ್ ಭಾರತೀಯರಲ್ಲಿ ಮನವಿ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅದ್ಭುತ ಪ್ರತಿಕ್ರಿಯೆ ನೀಡಿದ್ದಾರೆ. ಕೊರೋನಾ ವೈರಸ್ ವಿರುದ್ಧ ಹೋರಾಡಲು ನಾಟ್ವೆಸ್ಟ್ ಸರಣಿಯಲ್ಲಿ ಯುವರಾಜ್ ಸಿಂಗ್ ಹಾಗೂ ಮೊಹಮ್ಮದ್ ಕೈಫ್ ಜೊತೆಯಾಟದಿಂದ ಭಾರತ ತಂಡ ಇಂಗ್ಲೆಂಡ್ ಮಣಿಸಿ ಟ್ರೋಫಿ ಗೆದ್ದಿತ್ತು. ಇದೇ ಉದಾಹರಣೆಯನ್ನು ನೀಡಿದ್ದಾರೆ.
ಕೊರೋನಾ ವಿರುದ್ಧ ಮಾಜಿ ಹಾಕಿ ಕೋಚ್ ಹೋರಾಟ!
ಇಬ್ಬರು ಅತ್ಯುತ್ತಮ ಕ್ರಿಕೆಟಿಗರು ಜೊತೆಯಾಟವನ್ನು ನಾವು ಯಾವತ್ತು ಮರೆಯುವುದಿಲ್ಲ. ಇದೀಗ ಅದೇ ಕ್ರಿಕೆಟಿಗರು ಭಾರತೀಯರಲ್ಲಿ ಮತ್ತೊಂದು ಜೊತೆಯಾಟಕ್ಕೆ ಮನವಿ ಮಾಡಿದ್ದಾರೆ. ಇದು ನಾವೆಲ್ಲಾ ಜೊತೆಯಾಗಿ ಕೊರೋನಾ ವಿರುದ್ಧ ಹೋರಾಡುವ ಸಮಯ. ಜೊತೆಯಾಟದ ಮೂಲಕ ಮಾರಣಾಂತಿಕ ಕಾಯಿಲೆ ತೊಲಗಿಸೋಣ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.