ಆಸ್ಟ್ರೇಲಿಯಾ ಪ್ರಧಾನಿಯ T20 ವಿಶ್ವಕಪ್ ಮನವಿಗೆ ಸ್ಪಂದಿಸಿದ ನರೇಂದ್ರ ಮೋದಿ!

Published : Oct 26, 2019, 07:28 PM IST
ಆಸ್ಟ್ರೇಲಿಯಾ ಪ್ರಧಾನಿಯ T20 ವಿಶ್ವಕಪ್ ಮನವಿಗೆ ಸ್ಪಂದಿಸಿದ ನರೇಂದ್ರ ಮೋದಿ!

ಸಾರಾಂಶ

ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಇತ್ತೀಚೆಗೆ ಟಿ20 ಪಂದ್ಯದಲ್ಲಿ ವಾಟರ್ ಬಾಯ್ ಆಗಿ ಗಮನಸೆಳೆದಿದ್ದರು. ಇದೀಗ ಟಿ20 ವಿಶ್ವಕಪ್ ಟೂರ್ನಿಗೆ ಆಸ್ಟ್ರೇಲಿಯಾ ಪ್ರಧಾನಿ ಮಾಡಿದ ಮನವಿಗೆ, ನರೇಂದ್ರ ಮೋದಿ ಸ್ಪಂದಿಸಿದ್ದಾರೆ.

ನವದೆಹಲಿ(ಅ.26): ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಇತ್ತೀಚೆಗೆ ಟಿ20 ಪಂದ್ಯದ ಬ್ರೇಕ್ ವೇಳೆ ವಾಟರ್ ಬಾಯ್ ವಿಶ್ವದ ಗಮನಸೆಳೆದಿದ್ದರು. ಇದೀಗ ಮುಂಬರುವ ವಿಶ್ವಕಪ್ ಟೂರ್ನಿಗೆ ಭಾರತೀಯರಲ್ಲಿ ವಿಶೇಷ ಮನವಿಯನ್ನು ಮಾಡಿದ್ದಾರೆ. ಈ ಮನವಿ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸೋ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.

ಇದನ್ನೂ ಓದಿ: ಆಸ್ಟ್ರೇಲಿಯಾ vs ಶ್ರೀಲಂಕಾ ಟಿ20 ; ವಾಟರ್ ಬಾಯ್ ಆಗಿ ಬದಲಾದ ಪ್ರಧಾನಿ!

2020ರಲ್ಲಿ ಆಸ್ಟ್ರೇಲಿಯಾ ಟಿ20 ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸುತ್ತಿದೆ. ಇದಕ್ಕೆ ಈಗಲೇ ತಯಾರಿಗಳು ನಡೆಯುತ್ತಿದೆ. ಇದೀಗ ಟೂರ್ನಿ ಜೊತೆಗೆ ಪ್ರವಾಸೋದ್ಯಮವನ್ನು ಪ್ರಚಾರ ಮಾಡೋ ನಿಟ್ಟಿನಲ್ಲಿ ಆಸೀಸ್ ಪ್ರಧಾನಿ ಸ್ಕಾಟ್ ಮಾರಿಸನ್ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಕಳೆದ ರಾತ್ರಿಯ ರೋಚಕ ಟಿ20 ಪಂದ್ಯದ ಬಳಿಕ ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಆಯೋಜನೆಯನ್ನು ಎದುರುನೋಡುತ್ತಿದ್ದೇನೆ. ಈ ಟೂರ್ನಿಯಿಂದ ಆಸ್ಟ್ರೇಲಿಯಾ ಪ್ರವಾಸೋದ್ಯಮ ಕೂಡ ಹೊಸ ದಿಕ್ಕಿನತ್ತ ಸಾಗಲಿದೆ. ಇದಕ್ಕಾಗಿ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಟಿ20 ವಿಶ್ವಕಪ್ ಟೂರ್ನಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡುವ ಕುರಿತು ಪರಿಗಣಿಸಲಿ. ಏನು ಹೇಳುತ್ತೀರಿ ಎಂದು ಸ್ಕಾಟ್ ಮಾರಿಸನ್ ಟ್ವೀಟ್ ಮಾಡಿದ್ದರು.

 

ಇದನ್ನೂ ಓದಿ: ICC ಖಜಾನೆಗೆ ಕೈ ಹಾಕಿದ ಗಂಗೂಲಿ; ಬೆಚ್ಚಿ ಬಿತ್ತು ಮಂಡಳಿ!

ಸ್ಕಾಟ್ ಮಾರಿಸನ್ ಟ್ವೀಟ್‌ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಆತ್ಮೀಯ ಗೆಳೆಯ, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಆಹ್ವಾನ ನೀಡಿದಾಗ, ಖಂಡಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಕ್ರಿಕೆಟಿಗರು, ಪ್ರವಾಸಿಗರು ಆಸ್ಟ್ರೇಲಿಯಾ ಪ್ರವಾಸ ಮಾಡಲಿದ್ದಾರೆ ಎಂಬುದು ನನ್ನ ಭರವಸೆ. ಇದೇ ಸಂದರ್ಭದಲ್ಲಿ ಆಸ್ಟ್ರೇಲಿಯಾ ದೇಶದ ಜನರಿಗೆ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

 

ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಿನ ಅಭ್ಯಾಸ ಪಂದ್ಯದಲ್ಲಿ ಸ್ಕಾಟ್ ಮಾರಿಸನ್ ಪ್ರತ್ಯಕ್ಷವಾಗೋ ಮೂಲಕ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದರು.  ಪಂದ್ಯದ ನಡುವಿನ ಡ್ರಿಂಕ್ಸ್ ಬ್ರೇಕ್ ವೇಳೆ ಆಸ್ಟ್ರೇಲಿಯಾ ಪ್ರಧಾನಿ ವಾಟರ್ ಬಾಯ್ ಆಗಿ ಮೈದಾನಕ್ಕಿಳಿದಿದ್ದರು. ಆಸೀಸ್ ಕ್ರಿಕೆಟಿಗರಿಗೆ ನೀರು ಸರಬರಾಜು ಮಾಡೋ ಮೂಲಕ ಸರಳತೆ ಮೆರೆದಿದ್ದರು. ಇದೀಗ ಭಾರತೀಯರನ್ನು ಆಹ್ವಾನಿಸೋ ಮೂಲಕ ಆಸ್ಟ್ರೇಲಿಯಾ ಹಾಗೂ ಭಾರತದ ನಡುವಿನ ಬಾಂಧವ್ಯವನ್ನು ಹೆಚ್ಚಿಸಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?
ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್: ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!