ಕನ್ನಡಿಗ ಪ್ರಸಿದ್ದ್ ಕೃಷ್ಣ ಮಾರಕ ದಾಳಿಗೆ ಆಫ್ಘಾನ್ ಉಡೀಸ್; ಭಾರತ ಏಕದಿನ ಸರಣಿ ಕ್ಲೀನ್‌ಸ್ವೀಪ್!

Kannadaprabha News   | Kannada Prabha
Published : Jun 21, 2026, 08:21 AM IST
Team India

ಸಾರಾಂಶ

ಪ್ರಸಿದ್ಧ್‌ ಕೃಷ್ಣ ಅವರ ಮಾರಕ ಬೌಲಿಂಗ್ ಮತ್ತು ಯಶಸ್ವಿ ಜೈಸ್ವಾಲ್‌ ಅವರ ಅಜೇಯ ಶತಕದ ನೆರವಿನಿಂದ ಭಾರತ, ಅಫ್ಘಾನಿಸ್ತಾನ ವಿರುದ್ಧದ 3ನೇ ಏಕದಿನ ಪಂದ್ಯವನ್ನು 9 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಈ ಮೂಲಕ 3 ಪಂದ್ಯಗಳ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ ಸ್ವೀಪ್ ಮಾಡಿ ಸಂಪೂರ್ಣ ಪ್ರಾಬಲ್ಯ ಮೆರೆಯಿತು.

ಚೆನ್ನೈ: ಪ್ರಸಿದ್ಧ್‌ ಕೃಷ್ಣ ಅವರ ಮಾರಕ ಬೌಲಿಂಗ್‌ ದಾಳಿ, ಯಶಸ್ವಿ ಜೈಸ್ವಾಲ್‌ ಹಾಗೂ ರೋಹಿತ್‌ ಶರ್ಮಾರ ಅಮೋಘ ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ, ಅಫ್ಘಾನಿಸ್ತಾನ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್‌ ಜಯ ಸಾಧಿಸಿ, 3 ಪಂದ್ಯಗಳ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ ಸ್ವೀಪ್ ಮಾಡಿತು.

ಶನಿವಾರ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಆಫ್ಘನ್‌, 44.2 ಓವರಲ್ಲಿ 218 ರನ್‌ಗೆ ಆಲೌಟ್‌ ಆಯಿತು. ಪ್ರಸಿದ್ಧ್‌, ಆಫ್ಘನ್‌ಗೆ ಆರಂಭಿಕ ಆಘಾತ ನೀಡಿದರು. ಮೊದಲ 4 ಬ್ಯಾಟರ್‌ಗಳನ್ನು ಪೆವಿಲಿಯನ್‌ಗಟ್ಟಿದರು. ತಂಡ 36 ರನ್‌ಗೆ 4 ವಿಕೆಟ್‌ ಕಳೆದುಕೊಂಡಿತು. ಆ ಬಳಿಕ ಹಶ್ಮತುಲ್ಹಾ ಶಾಹೀದಿ 102, ಅಜ್ಮತುಲ್ಹಾ ಓಮರ್‌ಝಾಯ್‌ 50 ರನ್‌ ಗಳಿಸಿ ತಂಡಕ್ಕೆ ಚೇತರಿಕೆ ನೀಡಿದರು. ಪ್ರಸಿದ್ಧ್‌ 23 ರನ್‌ಗೆ 5 ವಿಕೆಟ್‌ ಕಿತ್ತರು.

ಭರ್ಜರಿ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

ಸುಲಭ ಗುರಿ ಬೆನ್ನತ್ತಿದ ಭಾರತಕ್ಕೆ ಜೈಸ್ವಾಲ್‌ ಹಾಗೂ ರೋಹಿತ್‌ ಭರ್ಜರಿ ಆರಂಭ ನೀಡಿದರು. ಮೊದಲ ವಿಕೆಟ್‌ಗೆ 170 ರನ್‌ ಜೊತೆಯಾಟವಾಡಿದರು. ರೋಹಿತ್‌ 79 ರನ್‌ ಗಳಿಸಿ ಔಟಾದರೆ, ಜೈಸ್ವಾಲ್‌ 86 ಎಸೆತದಲ್ಲಿ ಔಟಾಗದೆ 110 ರನ್‌ ಸಿಡಿಸಿ, ತಂಡವನ್ನು 28.4 ಓವರಲ್ಲೇ ಗೆಲ್ಲಿಸಿದರು.

ಸಂಕ್ಷಿಪ್ತ ಸ್ಕೋರ್‌:

 ಆಫ್ಘನ್‌ 44.2 ಓವರಲ್ಲಿ 218/10 (ಶಾಹೀದಿ 102, ಓಮರ್‌ಝಾಯ್‌ 50, ಪ್ರಸಿದ್ಧ್‌ 5-23), ಭಾರತ 28.4 ಓವರಲ್ಲಿ 224/1 (ಜೈಸ್ವಾಲ್‌ 110, ರೋಹಿತ್‌ 79, ನಬಿ 1-47) ಪಂದ್ಯಶ್ರೇಷ್ಠ: ಪ್ರಸಿದ್ಧ್‌

ಇಂಗ್ಲೆಂಡ್‌ ಏಕದಿನ ಸರಣಿ: ಪಾಂಡ್ಯ ಔಟ್‌

ನವದೆಹಲಿ: ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಿಂದ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಹೊರಬಿದ್ದಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಸರಣಿಗೂ ಮುನ್ನ ತೊಡೆ ಭಾಗದ ಗಾಯಕ್ಕೆ ತುತ್ತಾಗಿದ್ದ ಪಾಂಡ್ಯ, ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಇದೇ ವೇಳೆ ಐಪಿಎಲ್‌ ಫೈನಲ್‌ ವೇಳೆ ಸ್ನಾಯು ಸೆಳೆತಕ್ಕೆ ತುತ್ತಾಗಿದ್ದ ವಿರಾಟ್‌ ಕೊಹ್ಲಿ, ಜೂ.22ರಂದು ಬೆಂಗಳೂರಿನ ಬಿಸಿಸಿಐ ಸಿಒಇ ಕೇಂದ್ರದಲ್ಲಿ ಫಿಟ್ನೆಸ್‌ ಪರೀಕ್ಷೆಗೆ ಒಳಗಾಗಲಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Gambhir vs Sreesanth: 'ದೇಶದ್ರೋಹಿ' ಪದ ಬಳಕೆ; ಭಾರತಕ್ಕೆ ಗೌತಮ್ ಗಂಭೀರ್‌ನಂತಹ ಕೋಚ್ ಬೇಕಿಲ್ಲ-ಶ್ರೀಶಾಂತ್!
ಇಂಗ್ಲೆಂಡ್ ಎದುರಿನ ಸರಣಿಯಿಂದಲೂ ಹೊರಬಿದ್ದ ಹಾರ್ದಿಕ್ ಪಾಂಡ್ಯ; ಕೊಹ್ಲಿ ಬಗ್ಗೆಯೂ ಸಿಕ್ತು ಮಹತ್ವದ ಅಪ್‌ಡೇಟ್