ಮಂಕಡ್ ರನೌಟ್ ಮೂಲಕ ಅಭಿಮಾನಿಗಳಿಗೆ ಲಾಕ್‌‌ಡೌನ್‌ ಎಚ್ಚರಿಕೆ ನೀಡಿದ ಅಶ್ವಿನ್!

Suvarna News   | Asianet News
Published : Mar 25, 2020, 02:47 PM IST
ಮಂಕಡ್ ರನೌಟ್ ಮೂಲಕ ಅಭಿಮಾನಿಗಳಿಗೆ ಲಾಕ್‌‌ಡೌನ್‌ ಎಚ್ಚರಿಕೆ ನೀಡಿದ ಅಶ್ವಿನ್!

ಸಾರಾಂಶ

ಕೊರೋನಾ ವೈರಸ್ ಹರಡುತ್ತಿರುವ ಕಾರಣ ಪ್ರಧಾನಿ ಮೋದಿ ಭಾರತವನ್ನ 21 ದಿನ ಲಾಕ್‌ಡೌನ್ ಮಾಡಿದ್ದಾರೆ. ಇಷ್ಟಾದರೂ ಹಲವರು ಮನೆಯಿಂದ ಹೊರಬಂದು ಓಟಾಡ ನಡೆಸುತ್ತಿದ್ದಾರೆ. ಇದೀಗ ಟೀಂ ಇಂಡಿಯಾ ಸ್ಪಿನ್ನರ್ ಆರ್ ಅಶ್ವಿನ್, ತಮ್ಮ ಮಂಕಡ್ ರನೌಟ್ ಮೂಲಕ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.  

ಚೆನ್ನೈ(ಮಾ.25):  12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಆರ್ ಅಶ್ವಿನ್ ಮಂಕಡ್ ರನೌಟ್ ಮೂಲಕ ರಾಜಸ್ಥಾನ ರಾಯಲ್ಸ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ರನೌಟ್ ಮಾಡಿದ್ದರು. ಇದು ಭಾರಿ ವಿವಾದಕ್ಕೂ ಕಾರಣವಾಗಿತ್ತು. ಆರ್ ಅಶ್ವಿನ್ ಕ್ರೀಡಾ ಸ್ಪೂರ್ತಿ ಮರೆತು ರನೌಟ್ ಮಾಡಿದ್ದಾರೆ ಅನ್ನೋ ಟೀಕೆ ಎದರಿಸಿದ್ದರು. ಇದರ ಬೆನ್ನಲ್ಲೇ ಆರ್ ಅಶ್ವಿನ್ ತಮ್ಮ ನಿರ್ಧಾರವನ್ನ ಸ್ವಾಗತಿಸಿದ್ದರು. ಬಳಿಕ ಅಶ್ವಿನ್ ಪ್ರತಿ ಬಾರಿ ಟ್ರೋಲ್ ಆಗುತ್ತಲೇ ಇದ್ದರು. ಇದೀಗ ತಮ್ಮ ಮಂಕಡ್ ರನೌಟ್ ಮೂಲಕ ಫನ್ನಿಯಾಗಿ ಅಭಿಮಾನಿಗಳನ್ನು ಎಚ್ಚರಿಸಿದ್ದಾರೆ.

ಪ್ರಧಾನಿ ಮೋದಿ ನಿರ್ಧಾರ ಸ್ವಾಗತಿಸಿದ ನಾಯಕ ವಿರಾಟ್ ಕೊಹ್ಲಿ!

ಕೊರೋನಾ ವೈರಸ್ ಹರಡದಂತೆ ತಡೆಯಲು ಆರ್ ಅಶ್ವಿನ್ ಇದೀಗ ಮಂಕಡ್ ರನೌಟ್ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಮೋದಿ 21 ದಿನ ಲಾಕ್‌ಡೌನ್ ಆದೇಶ ಹೊರಡಿಸಿದ್ದಾರೆ. ಇಂದಿನಿಂದ(ಮಾ.25) ಸಂಪೂರ್ಣ ಭಾರತ ಲಾಕ್‌ಡೌನ್ ಮಾಡಲಾಗಿದೆ. ಜೊತೆಗೆ ಎಲ್ಲರೂ ಮನೆಯಲ್ಲೇ ಇರಲು ಮನವಿ ಮಾಡಿದ್ದಾರೆ. ಇದೀಗ ಆರ್ ಅಶ್ವಿನ್ ಎಲ್ಲರೂ ಒಳಗಿರಿ, ಹೊರಬಂದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ತಮ್ಮ ಮಂಕಡ್ ರನೌಟ್ ಘಟನೆ ಮೂಲಕ ಜನರಿಗೆ ಎಚ್ಚರಿಸಿದ್ದಾರೆ.

ಜೋಸ್ ಬಟ್ಲರ್ ಕ್ರೀಸ್ ಬಿಟ್ಟು ಹೊರಬಂದ ಕಾರಣ ಅಶ್ವಿನ್ ರನೌಟ್ ಮಾಡಿದ್ದರು. ಇದೀಗ ಜನರು ತಮ್ಮ ಮನೆ ಬಿಟ್ಟು ಹೊರಬರಬೇಡಿ, ಬಂದರೆ ವೈರಸ್ ಪ್ರಕರಣ ಹೆಚ್ಚಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ. 

ಅಭಿಮಾನಿಯೋರ್ವ ಈ ಫೋಟೋ ಹಾಗೂ ಸಂದೇಶ ರವಾನಿಸಿದ್ದಾನೆ. ಮಂಕಡ್ ರನೌಟ್‌ಗೆ ಇಂದಿಗೆ ಸರಿಯಾಗಿ 1 ವರ್ಷ. ಇದೀಗ ಭಾರತ ಲಾಕ್‌ಡೌನ್ ಆಗಿದೆ. ಈ ವೇಳೆ ಎಲ್ಲರಿಗೂ ನೆನಪಿಸಬಯುಸುವುದೇನೆಂದರೆ ಯಾರೂ ಹೊರಬರಬೇಡಿ, ಒಳಗಿರಿ, ಆರೋಗ್ಯವಾಗಿರಿ ಎಂದು ಟ್ವೀಟ್ ಮಾಡಿದ್ದಾರೆ.

 

ಕಳೆದ ವರ್ಷ ಮಾರ್ಚ್ 25 ರಂದು ನಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಲೀಗ್ ಪಂದ್ಯದಲ್ಲಿ ಆರ್ ಅಶ್ವಿನ್ ಮಂಕಡ್ ರನೌಟ್ ಮಾಡಿದ್ದರು. ಇದೀಗ ಈ ವಿವಾದಾತ್ಮಕ ರನೌಟ್‌ಗೆ 1 ವರ್ಷ ಸಂದಿದೆ. ಈ ಬಾರಿಯ ಐಪಿಎಲ್ ಟೂರ್ನಿ ಆಯೋಜನೆ ಅನುಮಾನವಾಗಿದೆ. ಹೀಗಾಗಿ ಎಲ್ಲಾ ಕ್ರಿಕೆಟಿಗರು ಮನೆಯೊಳಗೆ ಬಂಧಿಯಾಗಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana
ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana